ಮೂಡುಬಿದಿರೆ: ಜೀವನದಲ್ಲಿ ಶಿಸ್ತು ಎಂದರೆ ಕೇವಲ ನಿಯಮಗಳನ್ನು ಪಾಲಿಸುವುದು ಮಾತ್ರವಲ್ಲ. ಅದು ವ್ಯಕ್ತಿಯ ಚಿಂತನೆ, ವರ್ತನೆ ಮತ್ತು ಕಾರ್ಯಪದ್ಧತಿಯಲ್ಲಿರುವ ಸುವ್ಯವಸ್ಥೆ ಎಂದು ಚೆನ್ನೈ ಮೂಲದ 11 ವರ್ಷದ ಉದ್ಯಮಿ ಹಾಗೂ ಜೋಜೋ ಕನೆಕ್ಟ್ ಸ್ಥಾಪಕ ಅಥ್ವಿಕ್ ಅಮಿತ್ ಕುಮಾರ್ ಹೇಳಿದರು.ಅವರು ಆಳ್ವಾಸ್ನ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ರೋಸ್ಟ್ರಂ ಸ್ಪೀಕರ್ಸ್ ಕ್ಲಬ್ ವತಿಯಿಂದ ನಡೆದ "ತರಗತಿಯಿಂದ ಸಮ್ಮೇಳನದ ವರೆಗೆ ನನ್ನ ಉದ್ಯಮಶೀಲತಾ ಪ್ರಯಾಣ " ಪ್ರೇರಣಾದಯಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ ತನ್ನ ತಂದೆಯ ಉದ್ಯಮಕ್ಕೆ ಸಂಬಂಧಿಸಿದ ಸಭೆಗಳಲ್ಲಿ ಭಾಗಿಯಾದ್ದರಿಂದ ತನ್ನದೇ ಆದ ಉದ್ಯಮವನ್ನು ಪ್ರಾರಂಭಿಸಲು ಸ್ಫೂರ್ತಿಯಾಯಿತು ಎಂದರು
ಝೋಝೋ ಕನೆಕ್ಟ್ ವೃತ್ತಿಪರ ನೆಟ್ವರ್ಕಿಂಗ್ ಸೇವೆಗಳನ್ನು ಒದಗಿಸುವ ಸಂಸ್ಥೆಯಾಗಿದೆ. ಸಾಂಪ್ರದಾಯಿಕ ಬ್ಯುಸಿನೆಸ್ ಕಾರ್ಡ್ಗಳ ಬದಲಾಗಿ ಸ್ಕ್ಯಾನ್ ಮಾಡುವ ಮೂಲಕ ಡಿಜಿಟಲ್ ಕಾರ್ಡ್ ಆಗಿ ಪರಿವರ್ತಿಸುವ ಮೂಲಕ ಜೋಜೋ ಬ್ಯುಸಿನೆಸ್ ಕಾರ್ಡ್ ಕಾರ್ಯನಿರ್ವಹಿಸುತ್ತದೆ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ರೋಸ್ಟ್ರುಮ್ ಸ್ಪೀಕರ್ಸ್ ಕ್ಲಬ್ನ ಅಧ್ಯಕ್ಷೆ ಡಾ. ದೀಪಾ ಕೊಟ್ಟಾರಿ ಉಪಸ್ಥಿತರಿದ್ದರು. ನಿಯತಿ ಅಮೀನ್ ಕಾರ್ಯಕ್ರಮ ನಿರೂಪಿಸಿದರು.ಶಿಸ್ತು ಎಂದರೆ ವ್ಯಕ್ತಿಯ ಚಿಂತನೆ: ಅಥ್ವಿಕ್ ಅಮಿತ್ ಕುಮಾರ್
: ಜೀವನದಲ್ಲಿ ಶಿಸ್ತು ಎಂದರೆ ಕೇವಲ ನಿಯಮಗಳನ್ನು ಪಾಲಿಸುವುದು ಮಾತ್ರವಲ್ಲ. ಅದು ವ್ಯಕ್ತಿಯ ಚಿಂತನೆ, ವರ್ತನೆ ಮತ್ತು ಕಾರ್ಯಪದ್ಧತಿಯಲ್ಲಿರುವ ಸುವ್ಯವಸ್ಥೆ ಎಂದು ಚೆನ್ನೈ ಮೂಲದ 11 ವರ್ಷದ ಉದ್ಯಮಿ ಹಾಗೂ ಜೋಜೋ ಕನೆಕ್ಟ್ ಸ್ಥಾಪಕ ಅಥ್ವಿಕ್ ಅಮಿತ್ ಕುಮಾರ್ ಹೇಳಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.