ಸಾರಾಂಶ
ಚೋದನಾಕಾರಿ ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಜಿಲ್ಲೆಯಿಂದಲೇ ಗಡೀಪಾರು ಮಾಡುವಂತೆ ಬಿಜೆಪಿ ಹಿರಿಯ ಮುಖಂಡ, ತಾ.ಪಂ. ಮಾಜಿ ಸದಸ್ಯ ಆಲೂರ ನಿಂಗರಾಜ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.
- ನಿರ್ಲಕ್ಷಿಸಿದರೆ ಬಿಜೆಪಿ ತೀವ್ರ ಹೋರಾಟ: ನಿಂಗರಾಜ ಎಚ್ಚರಿಕೆ
- - -ದಾವಣಗೆರೆ: ಪ್ರಚೋದನಾಕಾರಿ ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಜಿಲ್ಲೆಯಿಂದಲೇ ಗಡೀಪಾರು ಮಾಡುವಂತೆ ಬಿಜೆಪಿ ಹಿರಿಯ ಮುಖಂಡ, ತಾ.ಪಂ. ಮಾಜಿ ಸದಸ್ಯ ಆಲೂರ ನಿಂಗರಾಜ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಪಾಲಿಕೆ ಮಾಜಿ ಸದಸ್ಯ ಕಬೀರ್ ಖಾನ್ ಹಾಗೂ ಇತರರು ಮೊನ್ನೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಬೆನ್ನಲ್ಲೇ ಇತ್ತೀಚೆಗೆ ಒಂದು ಪ್ರಚೋದನಾಕಾರಿ ವೀಡಿಯೋ ಹರಿದಾಡುತ್ತಿದೆ. ದಾವಣಗೆರೆಯಲ್ಲಿ ಶಾಂತಿ, ಸಾಮರಸ್ಯ, ಕಾನೂನು, ಸುವ್ಯವಸ್ಥೆಗೆ ಭಂಗ ತರುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ವ್ಯಕ್ತಿ ಹಾಗೂ ಆ ವೀಡಿಯೋದಲ್ಲಿ ಇದ್ದವರ ವಿರುದ್ಧವೂ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಮುಲಾಜಿಲ್ಲದೇ ಕೇಸ್ ದಾಖಲಿಸಿ, ಎರಡೂ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ತನಿಖೆಗೆ ಒಪ್ಪಿಸಬೇಕು. ಈ ಬಗ್ಗೆ ಉದಾಸೀನ ಮಾಡಿದರೆ ಜಿಲ್ಲಾದ್ಯಂತ ಬಿಜೆಪಿ ತೀವ್ರ ಸ್ಪರೂಪದ ಹೋರಾಟ ನಡೆಸಬೇಕಾದೀತು ಎಂದು ಎಚ್ಚರಿಸಿದ್ದಾರೆ. ಈ ಹಿಂದೆ ಗಣೇಶೋತ್ಸವ ಮೆರವಣಿಗೆ ವೇಳೆ ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗಳು, ಆಟೋ ಚಾಲಕರು, ಬಡ ಕೂಲಿ ಕಾರ್ಮಿಕರು ವೀಡಿಯೋದಲ್ಲಿದ್ದರೆಂಬ ಕಾರಣಕ್ಕೆ ಬಂಧಿಸಿ, ರೌಡಿ ಶೀಟ್ ತೆರೆಯಲಾಗಿತ್ತು. ಆದರೆ, ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಕೆಲಸವನ್ನು ಆ ಯಾರೂ ಮಾಡಿರಲಿಲ್ಲ. ಯಾವುದೇ ಸಮಾಜದ ವಿರುದ್ಧ ಪ್ರಚೋದನಾಕಾರಿ ಹೇಳಿಕೆಯ ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಿಲ್ಲ ಎಂದು ತಿಳಿಸಿದ್ದಾರೆ.- - -
-16ಕೆಡಿವಿಜಿ5: ಆಲೂರು ನಿಂಗರಾಜ