ತಂತಿ ಬೇಲಿಗೆ ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು

| N/A | Published : Jul 11 2025, 11:48 PM IST / Updated: Jul 12 2025, 07:22 AM IST

ತಂತಿ ಬೇಲಿಗೆ ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು
Share this Article
  • FB
  • TW
  • Linkdin
  • Email

ಸಾರಾಂಶ

ಕಾಡುಹಂದಿಯ ಬೇಟೆಗಾಗಿ ದುಷ್ಕರ್ಮಿಗಳು ಉರುಳು ಹಾಕಿದ್ದಾರೆಂದು ತಿಳಿದುಬಂದಿದೆ. ಚಿರತೆ ಆಹಾರ ಅರಸಿ ಬಂದು ನುಸುಳಿದಾಗ ಈ ದುರ್ಘಟನೆ ಸಂಭವಿಸಿದೆ.

ಬೇಲೂರು: ತಂತಿ ಬೇಲಿಯ ನಡುವೆ ಹಾಕಲಾಗಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ಹಳೆಬೀಡು ಹೋಬಳಿಯ ಚೀಲನಾಯಕನಹಳ್ಳಿ ಗ್ರಾಮದ ಮೋಹನ್ ರಾಜ್ ಅವರಿಗೆ ಸೇರಿದ ಫಾರಂ ಸರ್ವೇ ನಂಬರ್ 113 ರ ಜಾಗದ ತಂತಿ ಬೇಲಿಗೆ ಸಿಕ್ಕಿಹಾಕಿಕೊಂಡು ಚಿರತೆ ಮೃತಪಟ್ಟಿದೆ. '

ಕಾಡುಹಂದಿಯ ಬೇಟೆಗಾಗಿ ದುಷ್ಕರ್ಮಿಗಳು ಉರುಳು ಹಾಕಿದ್ದಾರೆಂದು ತಿಳಿದುಬಂದಿದೆ. ಚಿರತೆ ಆಹಾರ ಅರಸಿ ಬಂದು ನುಸುಳಿದಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 ಇತ್ತೀಚಿಗೆ ಈ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಜನರು ಪ್ರಾಣಭಯದಿಂದ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ, ಕೂಡಲೇ ಅವುಗಳನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯವರನ್ನು ಒತ್ತಾಯಿಸಿದ್ದಾರೆ.

Read more Articles on