ಮೂಲ್ಕಿ: ಕಿನ್ನಿಗೋಳಿಯ ಬಿತ್ತುಲ್ ಪ್ರದೇಶದಲ್ಲಿ ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿ ನಾಯಿಯನ್ನು ಕೊಂದು ಹಾಕಿದ ಘಟನೆ ನಡೆದಿದೆ. ಕಿನ್ನಿಗೋಳಿಯ ಬಿತ್ತುಲು ಪ್ರದೇಶದಲ್ಲಿನ ಮೂರು ಮನೆಯ ಮೂರು ನಾಯಿಯನ್ನು ಬುಧವಾರ ರಾತ್ರಿ ಹೊತ್ತು ಕೊಂಡು ಹೋಗಿ ತಿಂದು ಹಾಕಿದೆ. ಈ ಪ್ರದೇಶದಲ್ಲಿ ಈ ಹಿಂದೆಯೂ ಹಲವು ಬಾರಿ ಚಿರತೆ ಕಂಡುಬಂದಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಿನ್ನಿಗೋಳಿ ಪರಿಸರದಲ್ಲಿ ಕಳೆದ ಹಲವು ಸಮಯಗಳಿಂದ ಅಲ್ಲಲ್ಲಿ ಚಿರತೆ ಕಂಡುಬಂದಿದ್ದು, ಈವರೆಗೆ ಸಿಕ್ಕಿಲ್ಲ. ಪಟ್ಟಣ ಪಂಚಾಯಿತಿ ಸದಸ್ಯರು ಸ್ಥಳಕ್ಕೆ ಬೇಟಿ ನೀಡಿ ಅರಣ್ಯಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಕಿನ್ನಿಗೋಳಿ ಪರಿಸರದಲ್ಲಿ ನಾಯಿಗಳ ಮೇಲೆ ಚಿರತೆ ದಾಳಿ
ಕಿನ್ನಿಗೋಳಿಯ ಬಿತ್ತುಲ್ ಪ್ರದೇಶದಲ್ಲಿ ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿ ನಾಯಿಯನ್ನು ಕೊಂದು ಹಾಕಿದ ಘಟನೆ ನಡೆದಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.