ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಾವೆಲ್ಲರೂ ಒಂದೇ ಎಂಬುವಂತೆ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಬೃಹತ್ ಮಾನವ ಸರಪಳಿ ನಿರ್ಮಿಸಿ ಅರ್ಥಪೂರ್ಣವಾಗಿ ಆಚರಿಸಬೇಕು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.ಶುಕ್ರವಾರ ನಗರ ಹೊರವಲಯದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ನ ವತಿಯಿಂದ “ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ” ಕುರಿತು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.ರಾಜ್ಯಾದ್ಯಂತ ಆಚರಣೆ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಜಿಲ್ಲೆಯಲ್ಲಿ ಎಲ್ಲ ವರ್ಗದ ಸಾರ್ವಜನಿಕರು ಆಗಮಿಸಿ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆಪ್ಟೆಂಬರ್ 15 ರಂದು ಬೆಳಿಗ್ಗೆ 8.30 ರಿಂದ 9.30ರ ಸಮಯದಲ್ಲಿ ರಾಜ್ಯದಾದ್ಯಂತ ಏಕ ಕಾಲಕ್ಕೆ ಆಚರಣೆ ಮಾಡಲು ಸರ್ಕಾರದ ನಿರ್ದೇಶನ ನೀಡಿದ ಎಂದರು.ರಾಜ್ಯದ 2,500 ಕಿಲೋ ಮೀಟರ್ ನ ಉದ್ದ 25 ಲಕ್ಷ ಜನರನ್ನು ಒಳಗೊಂಡ ಎಲ್ಲ ವರ್ಗದವರು ಭಾಗವಹಿಸಲಿದ್ದಾರೆ, ಬೀದರ್ ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ ಅದರಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಮೊಡಕು ಹೊಸಹಳ್ಳಿ ಗ್ರಾಮದಿಂದ ಕಲಾ ಮತ್ತು ಸಾಂಸ್ಕ್ರತಿಕ ತಂಡಗಳಿಂದ ಆರಂಭಗೊಂಡು ಕೋಲಾರ ಜಿಲ್ಲೆಯ ಗಡಿಯ ಭಾಗವಾದ ಹೆಚ್ ಕ್ರಾಸ್ ಬಳಿ ಚಿಕ್ಕಗೊಂಡಹಳ್ಳಿಯ ವರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 47 ಕಿಲೋ ಮೀಟರ್ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಲಾಗುವುದು ಎಂದು ಅವರು ಹೇಳಿದರು.
ಪ್ರತಿ ಕಿಮೀಗೆ 800 ಜನಸುಮಾರು 40 ಸಾವಿರ ಜನರು ಒಳಗೊಂಡನಂತೆ ಪ್ರತಿ ಒಂದು ಕೀಲೋ ಮೀಟರ್ ಗೆ 800 ಜನಗಳಿಂದ ಮಾನವ ಸರಪಳಿ ನಿರ್ಮಿಸಲು ಸಿದ್ಧತೆ ಕೈಗೊಳ್ಳಲು ಪ್ರಭಾರ ವಹಿಸಿ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ. ವೇದಿಕೆ ಕಾರ್ಯಕ್ರಮವು ಜಿಲ್ಲಾಡಳಿತ ಭವನದ ಮುಂಭಾಗ ಡಾ.ಬಿ.ಆರ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನ ಪ್ರಸ್ಥವನೆಯ ಕುರಿತು ಭೋದಿಸಲಾಗುವುದು ಎಂದರು.
ಅಂದು ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು , ಮಜ್ಜಿಗೆ, ಪೊಲೀಸ್ ಬಂದೋಬಸ್ತ್, ಅರೋಗ್ಯ ಸೇವೆ,ಅಬುಂಲೆನ್ಸ್ ನಿಲುಗಡೆ, ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆ ಹಾಗೂ ಮೂಲಭೂತ ಸೌರ್ಕಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.ಗಿಡ ನೆಡುವ ಕಾರ್ಯಕ್ರಮ
ಮಾನವ ಸರಪಳಿ ಜೊತೆಗೆ ಪ್ರತಿ ಒಂದು ಕಿಲೋ ಮೀಟರ್ ಗೆ ರಸ್ತೆ ಬದಿಯಲ್ಲಿ ಅಂದು ಗಿಡ ನೆಡುವ ಮೂಲಕ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಜನಪ್ರತಿನಿದಿನಗಳು,ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳು, ಸ್ವ-ಸಹಾಯ ಸಂಘಗಳ ಸದಸ್ಯರು ಪದಾಧಿಕಾರಿಗಳೆಲ್ಲರ ಸಹಕಾರ ಪಡೆದು ಆಚರಣೆ ಮಾಡಲು ಎಲ್ಲಾ ಇಲಾಖೆಗಳು ಸಮನ್ವಯ, ಸಹಕಾರದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ತೇಜನಂದ ರೆಡ್ಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜುಂಜಣ್ಣ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.