ಪುತ್ತೂರು: ಅನೇಕ ಕ್ರಾಂತಿ ವೀರರ ತ್ಯಾಗ, ಯುವಜನರ ಬಲಿದಾನ,

ರಕ್ತದ ಅರ್ಪಣೆಯ ಪ್ರತಿರೂಪ ಸ್ವತಂತ್ರ ಭಾರತ. ಸ್ವಾತಂತ್ರ್ಯ ದೊರಕಿ

೮೦ ವರ್ಷ ಕಳೆದರೂ ದೇಶದಲ್ಲಿ ಬ್ರಿಟಿಷರ ಸಿದ್ಧಾಂತ ಇಂದಿಗೂ ನಮ್ಮ

ಆಡಳಿತಾತ್ಮಕ, ಸಾಂಸಕ್ಕೃತಿಕ, ಶೈಕ್ಷಣಿಕ ವ್ಯವಸ್ಥೆಯನ್ನು ಆವರಿಸಿಕೊಂಡಿದೆ.ಆದರೆ ಈ ಮನಸ್ಥಿತಿಯಿಂದ ಹೊರ ಬಂದು ಸ್ವಾತಂತ್ರ‍್ಯೋತ್ತರ ಭಾರತದಲ್ಲಿ

ಭಾರತೀಯ ಪರಿಕಲ್ಪನೆಗೆ ಹೆಚ್ಚು ಮಹತ್ವ ನೀಡುವ ಮುಖಾಂತರ ಅಭಿವೃದ್ಧಿಯ


ಪಥದಲ್ಲಿ ಸಾಗುವಲ್ಲಿ ದೇಶದ ಜನತೆ ಶ್ರಮಿಸಬೇಕು ಎಂದು ವಿವೇಕಾನಂದ

ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಕುಮಾರ್ ಶೆಟ್ಟಿ ಕಡಬ ಹೇಳಿದರು.ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ನಡೆದ ೮೦ನೇ ವರ್ಷದ

ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಿ ಮಾತನಾಡಿದರು.ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಗಳಾದ

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ,

ವಿವೇಕಾನಂದ ಪದವಿ ಪೂರ್ವ ಕಾಲೇಜು, ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು,

ವಿವೇಕಾನಂದ ತಾಂತ್ರಿಕ ವಿದ್ಯಾಲಯ, ವಿವೇಕಾನಂದ ಇನ್ ಸ್ಟಿಟ್ಯೂಟ್ ಆಫ್

ಫಾರ್ಮಸ್ಯುಟಿಕಲ್ ಸೈನ್ಸಸ್, ವಿವೇಕಾನಂದ ಸೆಂಟ್ರಲ್ ಸ್ಕೂಲ್ ಇವುಗಳ ಆಡಳಿತ

ಮಂಡಳಿ, ಪ್ರಾಂಶುಪಾಲರು, ಶಿಕ್ಷಕ - ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು, ಎನ್‌ಸಿಸಿ,

ಎನ್ನೆಸ್ಸೆಸ್‌, ರೋವರ್ಸ್ ಮತ್ತು ರೆಂಜರ್ಸ್, ರೆಡ್ ಕ್ರಾಸ್, ಘೋಷ್ ಘಟಕದ

ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ಹರ್ಷಿತಾ ಪಿ. ನಿರ್ವಹಿಸಿದರು.