ಧಾರ್ಮಿಕ, ಸಾಮಾಜಿಕ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲ

| Published : Jun 16 2025, 02:25 AM IST

ಧಾರ್ಮಿಕ, ಸಾಮಾಜಿಕ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲ
Share this Article
  • FB
  • TW
  • Linkdin
  • Email

ಸಾರಾಂಶ

ಕಡೂರುಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲವಾಗಲಿದೆ ಎಂದು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

- ಹುಲೀಕೆರೆ ದೊಡ್ಡಮಠದಲ್ಲಿ ಶ್ರೀ ಬಸವರಾಜ ದೇಶೀಕೇಂದ್ರ ಸ್ವಾಮೀಜಿ ಪುಣ್ಯಾರಾಧನೆ,

ಕನ್ನಡಪ್ರಭ ವಾರ್ತೆ, ಕಡೂರು

ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲವಾಗಲಿದೆ ಎಂದು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ಹುಲೀಕೆರೆ ದೊಡ್ಡಮಠದಲ್ಲಿ ಶ್ರೀ ಬಸವರಾಜ ದೇಶೀಕೇಂದ್ರ ಸ್ವಾಮೀಜಿ ಪುಣ್ಯಾರಾಧನೆ, ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ 80ನೇ ವರ್ಷದ ವರ್ಧಂತಿ ಹಾಗೂ ಶ್ರೀ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 2ನೇ ವರ್ಷದ ಪಟ್ಟಾಧಿಕಾರ ಮಹೋತ್ಸವದ ಸಾನಿಧ್ಯವಹಿಸಿ ಮಾತನಾಡಿದರು.

ಮನುಷ್ಯನಲ್ಲಿ ಆತ್ಮಬಲ ಬೆಳೆಯಲು ಆಧ್ಯಾತ್ಮದ ಹಸಿವು ಬೇಕು. ಸನ್ಮಾರ್ಗದಲ್ಲಿ ನಡೆಯುವ ಛಲಬೇಕು. ಅನಾರೋಗ್ಯಕರ ಸಮಾಜಕ್ಕೆ ಅಡಿಗಲ್ಲು ಇಡುವ ಜನರ ಸಂಖ್ಯೆಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಮನುಷ್ಯ ಜಾಗೃತಗೊಂಡು ಆದರ್ಶ ಸಂಸ್ಕೃ ತಿ ಉಳಿವಿಗಾಗಿ ಶ್ರಮಿಸಬೇಕಾಗಿದೆ. ಸತ್ಯ ಶುದ್ಧ ಕಾಯಕದಿಂದ ಜೀವನ ಸಾರ್ಥಕಗೊಳ್ಳುತ್ತದೆ ಎಂದರು.

ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಚಾರ ಧಾರೆ ಮರೆಯುವಂತಿಲ್ಲ. ಲಿಂ. ಬಸವರಾಜ ದೇಶಿಕೇಂದ್ರ ಶಿವಾಚಾರ್ಯ

ಸ್ವಾಮಿಗಳ ಸಂಸ್ಕಾರದ ಗರಡಿಯಲ್ಲಿ ಬೆಳೆದ ಸರಳತೆ ಮತ್ತು ಸಾತ್ವಿಕತೆಗೆ ಹೆಸರಾದ ಶ್ರೀ ವಿರೂಪಾಕ್ಷಲಿಂಗ

ಶಿವಾ ಚಾರ್ಯರು ವೀರಶೈವ ಧರ್ಮ ಸಂಸ್ಕೃತಿ ಬಿತ್ತಿ ಬೆಳೆಯುವಲ್ಲಿ ಬಹಳಷ್ಟು ಶ್ರಮಿಸಿದ್ದಾರೆ. ಧಾರ್ಮಿಕ ಮತ್ತು ಶೈಕ್ಷಣಿಕ

ರಂಗದಲ್ಲಿ ಅಮೂಲ್ಯ ಕೊಡುಗೆ ಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ, ಹಿರಿಯ ಸ್ವಾಮೀಜಿಗಳು ಮುಂದೆ 100 ನೇ ವರ್ಷದ ವರ್ಧಂತಿ ಆಚರಿಸಿಕೊಳ್ಳುವಂತಾಗಲಿ ಎಂದರು. ಹುಲಿಕೆರೆ ಮಠದ ಶ್ರೀವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ನಮ್ಮ ಜನ್ಮ ಇಂದು ಸಾರ್ಥಕಗೊಂಡಿದೆ. ಭಕ್ತ

ಸಮೂಹದ ಸಮ್ಮುಖದಲ್ಲಿ ಆಗಮಿಸಿದ ಶಿವಾಚಾರ್ಯರ ಸಮಕ್ಷಮದಲ್ಲಿ ಶ್ರೀ ರಂಭಾಪುರಿ ಜಗದ್ಗುರು ದಯಮಾಡಿಸಿ

ಆಶೀರ್ವದಿಸಿದ್ದು ನಮಗೆ ಆನೆ ಬಲ ಬಂದಂತಾಗಿದೆ. ಉಸಿರು ಇರುವ ತನಕ ವೀರಶೈವ ಸಂಸ್ಕೃತಿ ಮತ್ತು ಗುರು ಪರಂಪರೆ

ಬೆಳೆಸುವುದೇ ನಮ್ಮ ಗುರಿ ಎಂದರು.

ಶಾಸಕ ಎಚ್.ಡಿ ತಮ್ಮಯ್ಯ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ನೀಡುವುದು ಸರ್ಕಾರದ ಜವಾಬ್ದಾರಿ. ಇಂತಹ ಮಠಗಳು ಇವೆರಡನ್ನು ನೀಡುತ್ತಾ ಗ್ರಾಮೀಣ ಭಾಗದ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಮೂಲಕ ಶೈಕ್ಷಣಿಕ ಕಾಳಜಿಗೆ ಒತ್ತು ನೀಡುತ್ತಿವೆ. ಶ್ರೀ ಮಠ ಬಯಲು ಭಾಗದ ಲಕ್ಷಾಂತರ ಭಕ್ತರನ್ನು ಹೊಂದಿದ್ದು, ಸ್ವಾಮೀಜಿ ಸರಳತೆ ಮೂರ್ತಿಯಾಗಿ, ಸಾಮಾಜಿಕ ಸೇವಾ ಕೈಂಕರ್ಯದ ಪ್ರತೀಕವಾಗಿ ಪ್ರತಿಯೊಬ್ಬ ಭಕ್ತರಿಗೂ ಮಾರ್ಗದರ್ಶಕರಾಗಿದ್ದಾರೆ ಎಂದರು.

ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಮಾತನಾಡಿ, ಧರ್ಮದ ಅರ್ಥ ಬಹಳಷ್ಟು ವಿಶಾಲವಾದದ್ದು. ಧರ್ಮವೊಂದು ಅಶ್ವತ್ಥ ವೃಕ್ಷ. ಆ ವೃಕ್ಷದ ರೆಂಬೆ ಕೊಂಬೆಗಳಂತೆ ಧರ್ಮಕ್ಕೆ ಅನೇಕ ಮತ ಪಂಥಗಳಿವೆ. ಆದರೆ ಅವುಗಳನ್ನೇ ಧರ್ಮವೆಂದು ತಿಳಿದಿರುವ

ಕಾರಣ ಆತಂಕ ಸಂಘರ್ಷಕ್ಕೆ ಕಾರಣವಾಗಿದೆ. ಸನಾತನ ಧರ್ಮದ ಮೌಲ್ಯಗಳನ್ನು ಸಂರಕ್ಷಿಸಿಕೊಂಡು ಬಂದರೆ ಎಲ್ಲ ಮತ ಧರ್ಮಗಳು ಸಾಮರಸ್ಯದಿಂದ ಬದುಕಿ ಬಾಳಲು ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಾಹಿತಿಗಳಾದ ಗಿರಿಜಾಪತಿ ಹಾಗೂ ಡಿ. ಎಂ.ಮಂಜುನಾಥಸ್ವಾಮಿ ಉಪನ್ಯಾಸ ನೀಡಿದರು. ಮಲ್ಲಿಕಾರ್ಜುನ ಪಂಡಿತಾರಾಧ್ಯಸ್ವಾಮೀಜಿ, ಹುಣಸಘಟ್ಟದ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಬೀರೂರು ರಂಭಾಪುರಿ ಶಾಖಾ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಯಡಿಯೂರು ರೇಣುಕಾ ಶಿವಾಚಾರ್ಯ ಸ್ವಾಮೀಜಿ,ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಎಚ್.ಎಂ ಲೋಕೇಶ್,ಮಹಡಿಮನೆ ಸತೀಶ್, ಜಿ.ಪಂ.ಮಾಜಿ ಅಧ್ಯಕ್ಷ ಎ.ಎನ್ ಮಹೇಶ್,ಕಲ್ಮರುಡಪ್ಪ, ಡಾ. ಸಂತೋಷ್, ಮಲ್ಲೇಗೌಡ, ಜಗದೀಶ್,ಮಲ್ಲೇಶಪ್ಪ ಹಾಗೂ ಗ್ರಾಮಸ್ಥರು ಇದ್ದರು.

ಪೋಟೊ15ಕೆಕೆಡಿಯು2.

ಕಡೂರು ತಾಲೂಕಿನ ಹುಲಿಕೆರೆಯಲ್ಲಿ ನಡೆದದೊಡ್ಡಮಠದ ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ವರ್ಧಂತಿಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಮಾರಂಭದಲ್ಲಿ“ವರಯೋಗಿ” ನಾಮಾಂಕಿತ ಅಭಿನಂದನಾ ಗ್ರಂಥವನ್ನುಶಾಸಕ ಎಚ್.ಡಿ.ತಮ್ಮಯ್ಯ ಬಿಡುಗಡೆ ಮಾಡಿದರು.