ಲೋಕ್ ಅದಾಲತ್: 820 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ

| Published : Mar 18 2024, 01:47 AM IST

ಸಾರಾಂಶ

ಹಿರಿಯ ಮತ್ತು ಸಿವಿಲ್ ನ್ಯಾಯಾಲಯ, ಪ್ರಧಾನ ಸಿವಿಲ್ ಹಾಗೂ ಅಪರ ನ್ಯಾಯಾಲಯಗಳಲ್ಲಿ ನೆನೆಗುದಿ ಬಿದ್ದಿದ್ದ ಒಟ್ಟು 1420 ಪ್ರಕರಣಗಳ ಪೈಕಿ 820 ಪ್ರಕರಣಗಳನ್ನು ಕಕ್ಷಿದಾರರು ಮತ್ತು ಅರ್ಜಿದಾರರ ಸಮ್ಮುಖದಲ್ಲಿ ಇತ್ಯರ್ಥ ಪಡಿಸಿದ ನ್ಯಾಯಾಧೀಶರು ದೂರುದಾರರಿಗೆ 9 ಕೋಟಿ 75 ಲಕ್ಷದ 99 ಸಾವಿರದ 259 ರು.ಗಳನ್ನು ಪರಿಹಾರ ನೀಡುವಂತೆ ತೀರ್ಪು ನೀಡಿದರು.

ಕನ್ನಡಪ್ರಭ ವಾರ್ತೆ ಮದ್ದೂರುಪಟ್ಟಣದ ಜೆಎಂಎಫ್‌ಸಿ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ಲೋಕ್ ಅದಾಲತ್ ನಲ್ಲಿ 820 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿದ ನ್ಯಾಯಾಧೀಶರು 9 ಕೋಟಿ 76 ಲಕ್ಷಕ್ಕೂ ಮೀರಿ ಹಣವನ್ನು ಕಕ್ಷಿದಾರರಿಗೆ ಪರಿಹಾರ ರೂಪದಲ್ಲಿ ನೀಡುವಂತೆ ಆದೇಶ ನೀಡಿದರು.

ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಸಹಯೋಗದಲ್ಲಿ ಲೋಕ ಅದಾಲತ್ ಅಂಗವಾಗಿ ಹಿರಿಯ ಮತ್ತು ಸಿವಿಲ್ ನ್ಯಾಯಾಲಯ, ಪ್ರಧಾನ ಸಿವಿಲ್ ಹಾಗೂ ಅಪರ ನ್ಯಾಯಾಲಯಗಳಲ್ಲಿ ನೆನೆಗುದಿ ಬಿದ್ದಿದ್ದ ಒಟ್ಟು 1420 ಪ್ರಕರಣಗಳ ಪೈಕಿ 820 ಪ್ರಕರಣಗಳನ್ನು ಕಕ್ಷಿದಾರರು ಮತ್ತು ಅರ್ಜಿದಾರರ ಸಮ್ಮುಖದಲ್ಲಿ ಇತ್ಯರ್ಥ ಪಡಿಸಿದ ನ್ಯಾಯಾಧೀಶರು ದೂರುದಾರರಿಗೆ 9 ಕೋಟಿ 75 ಲಕ್ಷದ 99 ಸಾವಿರದ 259 ರು.ಗಳನ್ನು ಪರಿಹಾರ ನೀಡುವಂತೆ ತೀರ್ಪು ನೀಡಿದರು.

57 ಅಪಘಾತದ ಪ್ರಕರಣ 12 ಐಪಿಸಿ, 157 ಚೆಕ್ ಬೌನ್ಸ್, 105 ಸಿವಿಲ್ ಪ್ರಕರಣ ಹಾಗೂ 489 ಇತರೆ ಕ್ರಿಮಿನಲ್ ಪ್ರಕರಣ ಸೇರಿದಂತೆ ಒಟ್ಟು 820 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿ ಪರಿಹಾರಕ್ಕೆ ಸೂಚನೆ ನೀಡಿದರು.

ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಧೀಶೆ ಕೆ.ಶ್ರೀ ವಿದ್ಯಾ, ಅಪರ ಸಿವಿಲ್ ನ್ಯಾಯಾಧೀಶ ನಂಜೇಗೌಡ, ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ .ಪ್ರಿಯಾಂಕ, 1ನೇ ಅಪರ ಸಿವಿಲ್ ನ್ಯಾಯಾಧೀಶ ನಳಿನ, 2ನೇ ಅಪರ ನ್ಯಾಯಾಧೀಶ ಎನ್. ವಿ. ಕೋನಪ್ಪ ಹಾಗೂ ಮೂರನೇ ಅಪರ ನ್ಯಾಯಾಧೀಶ ಎಸ್.ಪಿ ಕಿರಣ್ ಅವರುಗಳು ತಮ್ಮ ವ್ಯಾಪ್ತಿಯ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿದ್ದ ಪ್ರಕರಣಗಳನ್ನು ರಾಜಿ ಸಂಧಾನದಿಂದ ಆಗುವ ಅನುಕೂಲತೆಗಳನ್ನು ದೂರುದಾರರು ಮತ್ತು ಎದುರುದಾರರಿಗೆ ಮನವರಿಕೆ ಮಾಡುವ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿದರು.

ಅದಾಲತ್ ನಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ, ಉಪಾಧ್ಯಕ್ಷ ಪುಟ್ಟರಾಜು, ಕಾರ್ಯದರ್ಶಿ ಸುಮಂತು, ವಕೀಲರಾದ ವಿಜಯಕುಮಾರ್, ಕೋಮಲ, ಪ್ರಮೀಳಾ, ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ನ್ಯಾಯಾಲಯದ ಸಿಬ್ಬಂದಿ ಇದ್ದರು.17ಕೆಎಂಎನ್ ಡಿ17

ಮದ್ದೂರು ನ್ಯಾಯಾಲಯದ ಆವರಣದಲ್ಲಿ ನಡೆದ ಲೋಕ್ ಅದಾಲತ್ ನಲ್ಲಿ ವಿವಿಧ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.