ಸಾರಾಂಶ
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹುಂಡಿ ಎಣಿಕೆ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಹನೂರು
ಹನೂರು ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ 20 ದಿನಗಳ ಅವಧಿಯಲ್ಲಿ 2.85 ಕೋಟಿ ರು. ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 7.30 ಗಂಟೆಯವರೆಗೂ ನಡೆಯಿತು. ಅಮಾವಾಸ್ಯೆ ಸರ್ಕಾರಿ ರಜಾ ದಿನ, ಪಾದಯಾತ್ರಿಗಳು, ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಸೇರಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,85, 60,937 ನಗದು 27 ಗ್ರಾಂ ಚಿನ್ನ ಹಾಗೂ 1,800 ಗ್ರಾಂ ಬೆಳ್ಳಿ ಪದಾರ್ಥಗಳನ್ನು ಕಾಣಿಕೆಯಾಗಿ ಹುಂಡಿಗೆ ಹಾಕಿದ್ದಾರೆ.ಇದಲ್ಲದೆ ಇ ಹುಂಡಿಯಿಂದ 2,75,204 , ವಿದೇಶಿ 31 ನೋಟುಗಳು, ಚಲಾವಣೆಯಲ್ಲಿಲ್ಲದ 2000 ಮುಖಬೆಲೆಯ 1 ನೋಟು ಹುಂಡಿಯಲ್ಲಿ ಹಾಕಿದ್ದಾರೆ.ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕ ಅಧೀಕ್ಷಕ ಗುರುಮಲ್ಲಯ್ಯ, ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಹರೀಶ್ ಕುಮಾರ್, ಬ್ಯಾಂಕ್ ಆಫ್ ಬರೋಡ ನೌಕರರು, ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಭಾಗ್ಯಮ್ಮ, ಗಂಗನ ತಿಮ್ಮಯ್ಯ, ಮಹಾದೇವಪ್ಪ, ಮರಿಸ್ವಾಮಿ ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.