17ರಂದು ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಚಿದಾನಂದ್ ಗೌಡ ಪದಗ್ರಹಣ

| Published : Jun 17 2025, 02:44 AM IST

ಸಾರಾಂಶ

ಬಿಜೆಪಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಪದಗ್ರಹಣ ಕಾರ್ಯಕ್ರಮವನ್ನು ಜೂ. ೧೭ರಂದು ಏರ್ಪಡಿಸಲಾಗಿದೆ ಎಂದು ನಗರ ಬಿಜೆಪಿ ಅಧ್ಯಕ್ಷ ಗಿರಿಧರ್ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ ಬಿಜೆಪಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಪದಗ್ರಹಣ ಕಾರ್ಯಕ್ರಮವನ್ನು ಜೂ. ೧೭ರಂದು ಏರ್ಪಡಿಸಲಾಗಿದೆ ಎಂದು ನಗರ ಬಿಜೆಪಿ ಅಧ್ಯಕ್ಷ ಗಿರಿಧರ್ ಹೇಳಿದರು.ನಗರದ ಸೇವಾ ಸದನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಚಿದಾನಂದ್ ಎಂ.ಗೌಡ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಬಿಜೆಪಿಗೆ ಶಕ್ತಿ ತುಂಬಿದೆ. ಜೂನ್ ೧೭ರಂದು ನಗರದ ದರ್ಗಾ ಸರ್ಕಲ್ ನಿಂದ ಮೆರವಣಿಗೆ ಮೂಲಕ ಆಗಮಿಸಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಖಾಸಗಿ ಹೊಟೆಲ್‌ನಲ್ಲಿ ಮಧ್ಯಾಹ್ನ ೨-೩೦ಕ್ಕೆ ಪದಗ್ರಹಣ ಕಾರ್ಯಕ್ರಮ ಇರುತ್ತದೆ. ಕಾರ್ಯಕ್ರಮಕ್ಕೆ ಸಂಸದ ಗೋವಿಂದ ಕಾರಜೋಳ, ಶಾಸಕರಾದ ಸುರೇಶ ಗೌಡ, ಜ್ಯೋತಿಗಣೆಶ್, ನಿಕಟಪೂರ್ವ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ, ಬಿಕೆ ಮಂಜುನಾಥ್, ಚಂಗಾವರ ಮಾರಣ್ಣ ಭಾಗವಹಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಗಿರಿಧರ್, ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಈರಣ್ಣ ಪಟೇಲ್, ಚಿಕ್ಕಣ್ಣ , ಪ್ರಧಾನ ಕಾರ್ಯದರ್ಶಿ ಕೊಟ್ಟ ರಂಗನಾಥ್, ಗ್ರಾಮ ಪಂಚಾಯಿತಿ ಸದಸ್ಯರಾದ ಎಂ ಶಿವಲಿಂಗಯ್ಯ, ಬೊಪ್ಪರಾಯಪ್ಪ, ಮಹಿಳಾ ಮೋರ್ಚ ಜಿಲ್ಲಾ ಉಪಾಧ್ಯಕ್ಷೆ ಪದ್ಮಮಂಜುನಾಥ್ , ತಾಲೂಕು ಉಪಾಧ್ಯಕ್ಷರಾದ ನಾಗರತ್ನಮ್ಮ, ಕವಿತಾ, ಹಿರಿಯ ಮುಖಂಡರಾದ ಗೋಪಿಕುಂಟೆ ಕುಮಾರ್ ಮಾಷ್ಟ್ರು, ಜಿ.ಜೆ ನರಸಿಂಹಮೂರ್ತಿ, ಮುಖಂಡರಾದ ನಾಗರಾಜ್ ಗೌಡ, ಮೂಗನಹಳ್ಳಿ ರಾಮು, ಗಂಜಲಗುಂಟೆ ಮುನಿರಾಜು, ನಿಕಟಪೂರ್ವ ವಕ್ತಾರರಾದ ಸೈಯದ್ ಬಾಬಾ, ಹಂದಿಕುಂಟೆ ಪಾಂಡುರಂಗಪ್ಪ, ಕಳ್ಳಂಬೆಳ್ಳ ವಾಸು, ಜಗದೀಶ್, ಕೃಷ್ಣಪ್ಪ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.