ಮಧುರೈ - ಬೆಂಗಳೂರು ವಂದೇಭಾರತ್‌ ಪ್ರಾಯೋಗಿಕ ಸಂಚಾರ ಆರಂಭ

| Published : Jun 18 2024, 01:32 AM IST / Updated: Jun 18 2024, 09:51 AM IST

ಮಧುರೈ - ಬೆಂಗಳೂರು ವಂದೇಭಾರತ್‌ ಪ್ರಾಯೋಗಿಕ ಸಂಚಾರ ಆರಂಭ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ಎಂಟನೇ ವಂದೇ ಭಾರತ್‌ ರೈಲು ಸೋಮವಾರ ಮಧುರೈ- ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಮೊದಲ ಪ್ರಾಯೋಗಿಕ ಸಂಚಾರ ನಡೆಸಿತು.

 ಬೆಂಗಳೂರು :  ರಾಜ್ಯದ ಎಂಟನೇ ವಂದೇ ಭಾರತ್‌ ರೈಲು ಸೋಮವಾರ ಮಧುರೈ- ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಮೊದಲ ಪ್ರಾಯೋಗಿಕ ಸಂಚಾರ ನಡೆಸಿತು.

ಸೋಮವಾರ ಬೆಳಗ್ಗೆ 5.15ಕ್ಕೆ ಮಧುರೈ ನಿಲ್ದಾಣದಿಂದ ಹೊರಟು ಬೆಂಗಳೂರನ್ನು ಮಧ್ಯಾಹ್ನ 2 ಗಂಟೆ ಸುಮಾರಿಗೆ ತಲುಪಿ ಪುನಃ ತೆರಳಿತು. ಎರಡು ನಗರಗಳನ್ನು ಸರಿಸುಮಾರು 6 ಗಂಟೆಗಳಲ್ಲಿ ಕ್ರಮಿಸುವ ನಿರೀಕ್ಷೆಯಿದೆ.

ರೈಲಿನ ವೇಗ, ನಿಲುಗಡೆ ನಿಲ್ದಾಣ ನಿಗದಿ ಬಳಿಕ ರೈಲಿನ ವೇಳಾಪಟ್ಟಿ, ದರವನ್ನು ಪ್ರಕಟಿಸಿ, ವಾಣಿಜ್ಯ ಸಂಚಾರದ ದಿನಾಂಕ ಘೋಷಣೆ ಮಾಡಲಾಗುತ್ತದೆ. ಪ್ರಾಥಮಿಕ ಮಾಹಿತಿಯಂತೆ ಈ ವಂದೇ ಭಾರತ್ ರೈಲು ದಿಂಡಿಗಲ್‌, ಕರೂರ್‌, ಸೇಲಂ, ಧರ್ಮಪುರಿ ಮತ್ತು ಹೊಸೂರು ನಿಲ್ದಾಣದಲ್ಲಿ ನಿಲುಗಡೆ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ವಿಸ್ತರಣೆಗಾಗಿ ಒತ್ತಾಯ:

ಮಧುರೈ-ವಿಶ್ವೇಶ್ವರಯ್ಯ ಟರ್ಮಿನಲ್‌ ರೈಲಿನಿಂದ ರಾಜ್ಯದವರಿಗೆ ಹೆಚ್ಚು ಪ್ರಯೋಜನ ಆಗಲಾರದು. ಧಾರ್ಮಿಕ ಯಾತ್ರಾ ಕ್ಷೇತ್ರ ಮಧುರೈ, ತಮಿಳುನಾಡಿಗೆ ಹೋಗುವವರಿಗೆ ಅನುಕೂಲ. ಕೃಷ್ಣರಾಜಪುರ, ಬಂಗಾರಪೇಟೆಯಲ್ಲಿ ನಿಲುಗಡೆ ಆದಲ್ಲಿ ಬೆಂಗಳೂರು, ಕೋಲಾರದವರಿಗೆ ಪ್ರಯೋಜನ ಆಗುತ್ತದೆ. ಜೊತೆಗೆ ಎಸ್‌ಎಂವಿಟಿ ಬದಲು ಕೆಎಸ್‌ಆರ್‌, ಯಶವಂತಪುರ ಅಥವಾ ಕಂಟೋನ್ಮೆಂಟ್‌ ರೈಲ್ವೆ ನಿಲ್ದಾಣದವರೆಗೆ ತಂದಲ್ಲಿ ಒಂದಿಷ್ಟು ಅನುಕೂಲ ಆಗಲಿದೆ ಎಂದು ರೈಲ್ವೆ ಸಾರಿಗೆ ತಜ್ಞ ಕೃಷ್ಣಪ್ರಸಾದ್‌ ಹೇಳಿದರು.