ಶಿಗ್ಗಾಂವಿ ತಾಲೂಕಿನ ಶಿಶುವಿನಹಾಳ ಗ್ರಾಮದ ಪಂಚಾಗ್ನಿಮಠದಲ್ಲಿ ಸಂತ ಶಿಶುವಿನಹಾಳ ಶರೀಫ ಶಿವಯೋಗಿಗಳ ಹಾಗೂ ಗುರುಗೋವಿಂದ ಭಟ್ಟರ ಮಹಾರಥೋತ್ಸವ ಸಾವಿರಾರು ಭಕ್ತರ ಸಡಗರದ ಮಧ್ಯೆ ವಿಜೃಂಭಣೆಯಿಂದ ನೆರವೇರಿತು.
ಶಿಗ್ಗಾಂವಿ: ತಾಲೂಕಿನ ಶಿಶುವಿನಹಾಳ ಗ್ರಾಮದ ಪಂಚಾಗ್ನಿಮಠದಲ್ಲಿ ಸಂತ ಶಿಶುವಿನಹಾಳ ಶರೀಫ ಶಿವಯೋಗಿಗಳ ಹಾಗೂ ಗುರುಗೋವಿಂದ ಭಟ್ಟರ ಮಹಾರಥೋತ್ಸವ ಸಾವಿರಾರು ಭಕ್ತರ ಸಡಗರದ ಮಧ್ಯೆ ವಿಜೃಂಭಣೆಯಿಂದ ನೆರವೇರಿತು.ವಿವಿಧ ತಾಲೂಕಿನ ದೂರ, ದೂರದ ಗ್ರಾಮಗಳಿಂದ ತಂಡೋಪ ತಂಡವಾಗಿ ಸಾವಿರಾರು ಭಕ್ತರು ಆಗಮಿಸಿದ್ದರು. ಪ್ರತಿ ವರ್ಷ ನಡೆಯುವ ಅವರ ಜಾತ್ರಾ ಮಹೋತ್ಸವದಂದು ಮಹಾರಥೋತ್ಸವಕ್ಕೆ ಎತ್ತಿನ ಬಂಡಿ ಮೂಲಕ ಹರಿದು ಬರುವ ಸಾವಿರಾರು ಭಕ್ತರಲ್ಲಿ ಅನೇಕರು ಚಿಲುಮೆ ಸೇವನೆ ಮಾಡಿ ಶರೀಫರನ್ನು ಸ್ಮರಿಸಿದ್ದು ಸಾಮಾನ್ಯವಾಗಿತ್ತು. ಶರೀಫ ಗಿರಿಯಲ್ಲಿ ಬೆಳಗ್ಗೆಯಿಂದ ನಡೆಯುವ ಧಾರ್ಮಿಕ ವಿಧಿವಿಧಾನಗಳ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತರು ಭಕ್ತಿಯಿಂದ ಕಟ್ಟಿಕೊಂಡು ಬಂದ ಅನ್ನದ ಬುತ್ತಿಯನ್ನೆ ಪ್ರಸಾದ ರೂಪದಲ್ಲಿ ನೀಡುತ್ತಾರೆ. ಅನ್ನ ಪ್ರಸಾದವನ್ನು ಪಡೆಯಲು ಬಂದವರು ನೂಕುನುಗ್ಗಲು ಮಧ್ಯದಲ್ಲಿ ಪಡೆಯುವ ದೃಶ್ಯ ಸಹಜವಾಗಿತ್ತು.ವಿಶ್ವಸ್ಥ ಸಮಿತಿಯ ಧರ್ಮದರ್ಶಿಗಳು, ಜನ ಪ್ರತಿನಿಧಿಗಳು ಹಾಗೂ ಮಠಾಧೀಶರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಿಗ್ಗಾಂವಿ ಪೊಲೀಸರು ಸೂಕ್ತ ಬಂದೋ ಬಸ್ತ್ ಕಲ್ಪಿಸಿದ್ದರು.