ಸಾರಾಂಶ
ಚಿತ್ರದುರ್ಗ: ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಸರ್ಕಾರಿ ಶಾಲೆಗಳ ಕಡೆ ಹೆಜ್ಜೆ ಹಾಕುವಂತೆ ಮಾಡಬೇಕಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿಯ ತುರುವನೂರು ಗ್ರಾಮದಲ್ಲಿ ನಡೆದ ಸರ್ಕಾರಿ ಹಿರಿಯ ಬಾಲಕರ ಶಾಲೆಯ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ತುರುವನೂರು ಗ್ರಾಮದಲ್ಲಿ ಸರ್ಕಾರಿ ಹಿರಿಯ ಬಾಲಕರ ಶಾಲೆಯ ನಿರ್ಮಾಣಕ್ಕೆ ಡಿಎಂಎಫ್ ಅನುದಾನದಲ್ಲಿ 2 ಕೋಟಿ ನೀಡಿದ್ದು ಸುಂದರವಾದ ಕಟ್ಟಡ ನಿರ್ಮಾಣ ಮಾಡಲು ಪೂಜೆ ಸಲ್ಲಿಸಿದ್ದು ಸುಮಾರು ಎಂಟು ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ.
ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ತುರುವನೂರು ಗ್ರಾಮದಲ್ಲಿ ನೀಡಲಾಗಿದೆ. ಸುಮಾರು 30 ಕೋಟಿಗಿಂತ ಹೆಚ್ಚು ಅನುದಾನ ವಿವಿಧ ಯೋಜನೆಯಡಿ ನೀಡಲಾಗಿದೆ. ತುರುವನೂರು ಗ್ರಾಮದಲ್ಲಿ ಪಿಯು ಕಾಲೇಜು, ಬಾಲಕಿಯರ ಕಾಲೇಜು, ನೂತನ ಇಂಧಿರಗಾಂಧಿ ವಸತಿ ಶಾಲೆ ನಿರ್ಮಣ ಮಾಡಿದ್ದು ಸುತ್ತಮುತ್ತಲಿನ ನೂರಾರು ಹಳ್ಳಿಗಳ ಮಕ್ಕಳಿಗೆ ಶಿಕ್ಷಣಕ್ಕೆ ಅನುಕೂಲವಾಗುತ್ತಿದೆ ಎಂದರು.ಸರ್ಕಾರಿ ಹಿರಿಯ ಬಾಲಕರ ಶಾಲೆಯಲ್ಲಿ ಎಲ್ಕೆಜಿ ಮತ್ತು ಯುಕೆಜಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭೋತ್ಸವ ಮಾಡಲಾಗುತ್ತಿದೆ. ತುರುವನೂರು ಗ್ರಾಮದಲ್ಲಿ ಪಬ್ಲಿಕ್ ಶಾಲೆ ಆರಂಭಿಸಲು ಎಲ್ಲಾ ಪ್ರಯತ್ನ ನಡೆಸಲಾಗಿದೆ.
ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕಾಗಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡಲಾಗುತ್ತಿದ್ದು ಹಂತ ಹಂತವಾಗಿ ಎಲ್ಲಾ ಶಾಲೆಗಳ ಅಭಿವೃದ್ಧಿ ಮಾಡಲಾಗುವುದು ಎಂದರು.ಈ ವೇಳೆ ಗ್ರಾಪಂ ಅಧ್ಯಕ್ಷ ನಾಗರತ್ನಮ್ಮ ಮಾರ್ಕಂಡಯ್ಯ, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಮಾಜಿಂ ಸದಸ್ಯ ಬಾಬುರೆಡ್ಡಿ, ಡಿಡಿಪಿಐ ಮಂಜುನಾಥ, ಬಿಇಒ ಎಸ್. ನಾಗಭೂಷಣ್, ಶಿಕ್ಷಣ ಸಂಯೋಜಕ ಸಂಪತ್ ಕುಮಾರ್, ತಾಲೂಕು ಕೆಡಿಪಿ ಸದಸ್ಯ ಸಂತೋಷ್, ಎಸ್ಡಿಎಂಸಿ ಅಧ್ಯಕ್ಷ ಪಾಪಣ್ಣ, ಮುಖಂಡರಾದ ಮಂಜುನಾಥ, ವಿವೇಕನಂದಪ್ಪ, ಚಂದ್ರಪ್ಪ, ಖಾಕಿ ಹನುಮಂತರೆಡ್ಡಿ, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಇದ್ದರು.---
ಪೋಟೋ 30ಎಚ್ಎಸ್ಡಿ7:ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿಯ ತುರುವನೂರು ಗ್ರಾಮದಲ್ಲಿ ನಡೆದ ಸರ್ಕಾರಿ ಹಿರಿಯ ಬಾಲಕರ ಶಾಲೆಯ ಕಟ್ಟಡಕ್ಕೆ ಶಾಸಕ ರಘುಮೂರ್ತಿ ಭೂಮಿಪೂಜೆ ನೆರವೇರಿಸಿದರು.