ಸಾರಾಂಶ
ಕೃಷ್ಣಾ ನದಿ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಕಂಕಣವಾಡಿ ಗ್ರಾಮದ ಬಳಿ ಭಾನುವಾರ ನಡೆದಿದೆ.
ಕನ್ನಡಪ್ರಭ ವಾರ್ತೆ ಜಮಖಂಡಿ
ಕೃಷ್ಣಾ ನದಿ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಕಂಕಣವಾಡಿ ಗ್ರಾಮದ ಬಳಿ ಭಾನುವಾರ ನಡೆದಿದೆ, ಕಂಕಣವಾಡಿ ಗ್ರಾಮದ ಕಲ್ಲಪ್ಪ ಧರೆಪ್ಪ ಅಂಬಿ(65) ಮೃತ ವ್ಯಕ್ತಿ. ಧರೆಪ್ಪ ಭಾನುವಾರ ಗ್ರಾಮದ ಗುಹೇಶ್ವರ ನಡುಗಡ್ಡೆಯಲ್ಲಿರುವ ತನ್ನ ಜಮೀನಿನಲ್ಲಿ ಕೆಲಸ ಮುಗಿಸಿ ವಾಪಸ್ ಮನೆಗೆ ಬರಲು ನದಿಯಲ್ಲಿ ಈಜಿಕೊಂಡು ಬರುತ್ತಿದ್ದಾಗ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ದಡ ಮುಟ್ಟಲಾಗದೇ ನೀರಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೋಲಿಸರು ಭೇಟಿ ಪರಿಶೀಲಿನೆ ನಡೆಸಿದ್ದು ಪ್ರಕರಣ ದಾಖಸಿಕೊಂಡಿದ್ದಾರೆ.