ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರದ ನಿವೃತ್ತ ಅರಣ್ಯ ಅಧಿಕಾರಿ ಹಾಗೂ ಸಮಾಜ ಸೇವಕರಾದ ಮಂಡೆಪಂಡ ಬೋಸ್ ಮೊಣ್ಣಪ್ಪ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕಾಯಕ ಯೋಗಿ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಿತು.ಬೆಂಗಳೂರಿನ ಹೊಸಕೋಟೆ ಸಮೀಪ ಸೂಲಿಬೆಲೆಯಲ್ಲಿ ಇಸ್ರೋ ಸಂಸ್ಥೆಯ ಅಧ್ಯಕ್ಷ ಹಾಗೂ ಪ್ರಧಾನಿಗಳ ವೈಜ್ಞಾನಿಕ ಸಲಹೆಗಾರರಾದ ಡಾ . ಎ ಎಸ್ ಕಿರಣ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಮಿಕ ದಿನಾಚರಣೆ ಅಂಗವಾಗಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ರಾಜ್ಯದ ವಿವಿಧ ಶೈಕ್ಷಣಿಕ ಜಿಲ್ಲೆಗಳ ಒಟ್ಟು 43 ಸಾಧಕರಿಗೆ ಈ ಸಂದರ್ಭ ಪ್ರಶಸ್ತಿ ನೀಡಲಾಯಿತು.ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ಡಾ ಹುಲಿಕಲ್ ನಟರಾಜ್, ಖ್ಯಾತ ವೈದ್ಯರಾದ ಡಾ ಅಂಜನಪ್ಪ, ಪರಿಷತ್ ಜಿಲ್ಲಾ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ಮತ್ತಿತರರು ಇದ್ದರು.
ಮಂಡೆಪಂಡ ಬೋಸ್ ಮೊಣ್ಣಪ್ಪ ಗೆ ಕಾಯಕ ಯೋಗಿ ರಾಜ್ಯಮಟ್ಟದ ಪ್ರಶಸ್ತಿ ಗೌರವ
ಕುಶಾಲನಗರದ ನಿವೃತ್ತ ಅರಣ್ಯ ಅಧಿಕಾರಿ ಹಾಗೂ ಸಮಾಜ ಸೇವಕರಾದ ಮಂಡೆಪಂಡ ಬೋಸ್ ಮೊಣ್ಣಪ್ಪ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕಾಯಕ ಯೋಗಿ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.