• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮ್ಯೂಸ್‌ಮೆಂಟ್‌ ಪಾರ್ಕ್‌ ಯೋಜನೆ ಜಾರಿಗೆ ವಿವಿಧ ಸಂಘಟನೆಗಳ ವಿರೋಧ
90 ವರ್ಷಗಳ ಇತಿಹಾಸವಿರುವ ಕೆಆರ್‌ಎಸ್ ಅಣೆಕಟ್ಟೆ ಬಳಿಯ ಪ್ರದೇಶಗಳನ್ನು ಪ್ರವಾಸೋದ್ಯಮದ ಹೆಸರಿನಲ್ಲಿ ರೈತರಿಂದ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಸುಮಾರು 2663 ಕೋಟಿ ರು. ವೆಚ್ಚದಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್‌ ನಿರ್ಮಿಸಿ ಖಾಸಗಿ ವ್ಯವಸ್ಥೆಗೆ 34 ವರ್ಷಗಳಿಗೆ ಗುತ್ತಿಗೆ ನೀಡಲು ಸರ್ಕಾರ ಮುಂದಾಗಿರುವುದು ಅಪಾಯಕಾರಿ ಬೆಳವಣಿಗೆ. ಇದನ್ನು ಸಾರ್ವಜನಿಕರು ತೀವ್ರವಾಗಿ ವಿರೋಧಿಸಬೇಕು.
ಕುಡಿಯುವ ನೀರಿಗೆ ಒತ್ತಾಯಿಸಿ ಖಾಲಿ ಕೊಡ ಹಿಡಿದು ಪ್ರತಿಭಟನೆ
ಚಿನ್ನಾಯಕನಹಳ್ಳಿ ಗ್ರಾಮದಲ್ಲಿ 100ಕ್ಕೂ ಹೆಚ್ಚು ಮನೆಗಳಿದ್ದು ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆಗಾಗಿ ಜನಜೀವನ್ ಮಿಷನ್ ಯೋಜನೆಯಡಿ ಕಾಮಗಾರಿ ನಡೆಯುತ್ತಿದ್ದು, ಕುಡಿಯುವ ನೀರನ್ನ ಸರಿಯಾಗಿ ಪೂರೈಕೆ ಮಾಡುತ್ತಿಲ್ಲ. ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಕಳೆದ ನಾಲ್ಕು ತಿಂಗಳಿಂದಲೂ ಗ್ರಾಮ ಪಂಚಾಯ್ತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾರೂ ಸ್ಪಂದಿಸುತ್ತಿಲ್ಲ.
ದೇಶದ ಇತಿಹಾಸ ತಿಳಿದಾಗ ಸತ್ಪ್ರಜೆಗಳಾಗಲು ಸಾಧ್ಯ: ಕೃಷಿ ಸಚಿವ ಸಿಆರ್‌ಎಸ್
ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವ್ಯಾಸಂಗ ಮುಂದಿನ ಭವಿಷ್ಯಕ್ಕೆ ಬಹು ಮುಖ್ಯವಾದ ಹಂತವಾಗಿರುತ್ತದೆ. ಹಾಗಾಗಿ ಬಹಳ ಶ್ರದ್ಧೆ ಆಸಕ್ತಿ ವಹಿಸಿ ವಿದ್ಯಾಭ್ಯಾಸ ಮಾಡಬೇಕು. ಉತ್ತಮ ಶಿಕ್ಷಣ ಪಡೆದವರೆಲ್ಲರಿಗೂ ಉದ್ಯೋಗ ಸಿಗುವುದಿಲ್ಲ. ಈ ಹಿಂದೆಕೇವಲ ಶೇ.೨-೩ರಷ್ಟು ಫಲಿತಾಂಶವಿದ್ದರೂ ಕೂಡ ಕೆಲಸ ಸಿಗುತ್ತಿತ್ತು. ಆದರೀಗ ಶೇ.೯೯ ರಷ್ಟು ಫಲಿತಾಂಶ ಪಡೆದರೂ ಕೆಲಸ ಸಿಗವುದು ಕಷ್ಟವಾಗುತ್ತಿದೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕೂಲಿಕಾರರ ಆಕ್ರೋಶ
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬಗಳಿಗೆ ೨೫ ಲಕ್ಷ ರು.ಗಳ ಪರಿಹಾರ ನೀಡಬೇಕು. ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿ ಕಿರುಕುಳ ನೀಡುತ್ತಿರುವ ಕಂಪನಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
ಮಂಡ್ಯ ಮಣ್ಣು ಕಲಾವಿದರನ್ನು ಕೈಬಿಡುವುದಿಲ್ಲ: ಕೆ.ಎಸ್.ವಿಜಯ್‌ಆನಂದ್
ಜನತಾ ಶಿಕ್ಷಣ ಸಂಸ್ಥೆಗೆ ರೈತರು ೬೯ ಎಕರೆ ಜಮೀನನ್ನು ನೀಡಿದ್ದಾರೆ. ನಮ್ಮ ತಾತ ಕೆ.ವಿ.ಶಂಕರಗೌಡ ಮತ್ತು ನಮ್ಮ ತಂದೆ ಕೆ.ಎಸ್. ಸಚ್ಚಿದಾನಂದ ಅವರು ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದರು. ನಮ್ಮ ಸಂಸ್ಥೆಯಿಂದಲೇ ಸಂಕ್ರಾಂತಿ, ಹೊಸ ನೀರು ಸೇರಿದಂತೆ ಆರು ಸಿನಿಮಾಗಳನ್ನು ಮಾಡಿದ್ದೇವೆ. ನನಗೆ ಕಲೆಯಲ್ಲಿ ಯಾಕೋ ಆಸಕ್ತಿ ಬರಲಿಲ್ಲ. ಆದರೂ ಕಲಾವಿದರನ್ನು ಪ್ರೋತ್ಸಾಹಿಸುವ ಗುಣ ಅವರಿಂದಲೇ ಬಂದಿದೆ.
೯೦ ಕೋಟಿ ರು. ವೆಚ್ಚದಲ್ಲಿ ಸಂಪರ್ಕ ನಾಲೆ ಆಧುನೀಕರಣ: ಶಾಸಕ ದರ್ಶನ್
ನಾಲೆಯ ಆಧುನೀಕರಣದ ಬಗ್ಗೆ ಈಗಾಗಲೆ ನೋಟಿಫಿಕೇಷನ್ ಹೊರಡಿಸಲಾಗಿದೆ, ಜತೆಗೆ ಕಾವೇರಿ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯಲ್ಲಿಯೇ ಚರ್ಚಿಸಿ ತೀರ್ಮಾನಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ನಾಲೆಯಲ್ಲಿ ಆರು ತಿಂಗಳು ನೀರು ಹರಿಸಲಾಗುತ್ತದೆ ಅಷ್ಟೇ. ಉಳಿದ ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಿದ್ಧತೆ ನಡೆಸಿಕೊಂಡು ಭೂಮಿ ಪೂಜೆ ನೆರವೇರಿಸಲಾಗಿದೆ.
ಎಂ.ಪಿ.ನಿವೇದಿತಾಗೆ ಪಿಎಚ್‌.ಡಿ ಪದವಿ ಪ್ರದಾನ
ಕೆ.ಆರ್.ಪೇಟೆ ತಾಲೂಕಿನ ಮರಡಹಳ್ಳಿ ಗ್ರಾಮದ ನಿವಾಸಿ ಎಂ.ಪಿ.ನಿವೇದಿತಾ ಪಿಎಚ್.ಡಿ.ಪದವಿಗೆ ಭಾಜನರಾಗಿದ್ದಾರೆ. ಇವರು ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ಕಾಲೇಜಿನಲ್ಲಿ ಬೇಸಾಯ ಶಾಸ್ತ್ರ ವಿಭಾಗದಲ್ಲಿ ಪಿಎಚ್‌.ಡಿ ಪದವಿ ಪಡೆದಿದ್ದಾರೆ.
ಮಂಡ್ಯ ಜಿಲ್ಲೆಯ ೨೨ ಮೈಕ್ರೋ ಫೈನಾನ್ಸ್‌ಗಳಲ್ಲಿ ೬.೫೦ ಲಕ್ಷ ಜನರಿಂದ ಸಾಲ
ಮಂಡ್ಯ ಜಿಲ್ಲೆಯಲ್ಲಿರುವ ೨೨ ಮೈಕ್ರೋ ಫೈನಾನ್ಸ್‌ಗಳ ೧೫೪ ಶಾಖೆಗಳಲ್ಲಿ ೬.೫೦ ಲಕ್ಷ ಮಂದಿ ೧೬ ಕೋಟಿ ರು.ವರೆಗೆ ಸಾಲ ಪಡೆದಿರುವ ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ಖಾಸಗಿ ಬ್ಯಾಂಕ್‌ಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಯವರು ಸದ್ದಿಲ್ಲದೆ ಕಾರ್ಯಚಟುವಟಿಕೆ ನಡೆಸುತ್ತಿದ್ದಾರೆ.
ಪುರಾಣ ಪ್ರಸಿದ್ಧ ಹೇಮಗಿರಿ ಜಾತ್ರೆಗೆ ಬಂದ ನೂರಾರು ರಾಸುಗಳು...!
ಹೇಮಾವತಿ ನದಿ ದಂಡೆಯಲ್ಲಿರುವ ಹೇಮಗಿರಿಯ ದನಗಳ ಜಾತ್ರಗೆ ದೂರ ದೂರದಿಂದ ರೈತರು ಆಗಮಿಸಿದ್ದು ದನಗಳ ವ್ಯಾಪಾರ ನಡೆಯುತ್ತಿದೆ. ಬಂಡೀಹೊಳೆ ಗ್ರಾಮದ ಬಿ.ಆರ್.ದರ್ಶನ್ ಎನ್ನುವವರಿಗೆ ಸೇರಿದ ಸುಮಾರು 3.5 ಲಕ್ಷ ಬೆಲೆ ಬಾಳುವ ಹಳ್ಳಿಕಾರ್ ತಳಿಯ ಎತ್ತುಗಳು ಜಾತ್ರೆಯಲ್ಲಿ ಗಮನ ಸೆಳೆಯುತ್ತಿವೆ.
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಒಗ್ಗಟ್ಟು ಪ್ರದರ್ಶಿಸಿ: ಸಿ.ಎಸ್.ಪುಟ್ಟರಾಜು
ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಬಗ್ಗೆ ಚರ್ಚಿಸುವುದು ಬೇಡ, ಚುನಾವಣೆ ಮುಗಿದ ಒಂದೇ ವರ್ಷದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಎರಡು ಪಕ್ಷದ ಕಾರ್ಯಕರ್ತರು ಹಾಗೂ ಕ್ಷೇತ್ರದ ಜನತೆ ತಮ್ಮ ಶಕ್ತಿಯನ್ನು ತೋರಿಸಿದ್ದಾರೆ. ಇದೀಗ ಎದುರಾಗಿರುವ ಮನ್‌ಮುಲ್, ಪಿಎಲ್‌ಡಿ ಬ್ಯಾಂಕ್ ಹಾಗೂ ಸ್ಥಳೀಯ ಸಂಸ್ಥೆಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಎಲ್ಲರೂ ಒಗ್ಗಟ್ಟಿನಿಂದ ವೈಮನಸ್ಸು ಬಿಟ್ಟು ಗೆಲ್ಲಿಸುವ ಮೂಲಕ ಪಕ್ಷ ಬಲಪಡಿಸುವ ಕೆಲಸ ಮಾಡಬೇಕು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 681
  • next >
Top Stories
ಸಬರ್ಬನ್‌ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved