ದಲಿತ ಸಂಘಟನೆಗಳ ಒಕ್ಕೂಟದಿಂದ 76 ನೇ ಸಂವಿಧಾನ ಸಮರ್ಪಣೆ ದಿನಾಚರಣೆದೇಶದ ಪ್ರತಿಯೊಬ್ಬ ಪ್ರಜೆಗೆ ಸಂವಿಧಾನ ದಾರಿದೀಪ. ಕಾನೂನು, ನ್ಯಾಯ, ನೀತಿ, ಸಮಾನತೆ, ಸಹಬಾಳ್ವೆ ತತ್ವಗಳ ತಳಹದಿ ಮೇಲೆ ನಿಂತಿದ್ದು, ಎಲ್ಲರೂ ಸಂವಿಧಾನವನ್ನು ಗೌರವಿಸಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು. ದೇಶದಲ್ಲಿಯೇ ಸಂವಿಧಾನವನ್ನು ಪವಿತ್ರ ಗ್ರಂಥ ಎಂದು ಗೌರವಿಸಲಾಗುತ್ತದೆ. ಸಂವಿಧಾನ ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಅದ್ಭುತ ಕೊಡುಗೆ. ಅದನ್ನು ನಾವೆಲ್ಲರೂ ಗೌರವದಿಂದ ಕಾಣಬೇಕು.