ನಾಲೆಗಳಲ್ಲಿ ತುಂಬಿದ ಹೂಳು: ಕೊನೇ ಭಾಗಕ್ಕೆ ನೀರು ತಲುಪದೆ ರೈತರಲ್ಲಿ ಆತಂಕಹೇಮಾವತಿ ಜಲಾಶಯದಿಂದ ಎಡದಂಡೆ ನಾಲೆಗೆ ನೀರಾವರಿ ಇಲಾಖೆ ಇದುವರೆಗೂ ನೀರು ಹರಿಸಿಲ್ಲ. ಆದರೆ, ರೈತ ಸಮುದಾಯದ ಒತ್ತಾಯದ ಮೇರೆಗೆ ಏಪ್ರಿಲ್ ಎರಡನೇ ವಾರದಲ್ಲಿ ನೀರು ಹರಿಸುವ ಭರವಸೆ ಇಲಾಖೆ ವ್ಯಕ್ತಪಡಿಸಿದೆ. ನದಿ ಅಣೆಕಟ್ಟೆ ನಾಲೆಗಳಾದ ಹೇಮಗಿರಿ, ಮಂದಗೆರೆ ಎಡ ಮತ್ತು ಬಲದಂಡೆ ನಾಲೆಗಳಿಗೆ ಕಟ್ಟು ನೀರು ಪದ್ಧತಿಯಡಿ ಇಲಾಖೆ ನೀರು ಹರಿಸುತ್ತಿದೆ.