ತಕ್ಷಣವೇ ಬಸ್ ನಿಲ್ದಾಣ ಲೋಕಾರ್ಪಣೆಗೆ ಆಗ್ರಹಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆಅಕ್ಕಿಹೆಬ್ಬಾಳು ಹೋಬಳಿಯ ಕೇಂದ್ರ ಸ್ಥಾನವಾಗಿದ್ದು, ಪಂಪ ಪ್ರಶಸ್ತಿ ಪುರಸ್ಕೃತ ಸಾಹಿತಿ ಎ.ಎನ್.ಮೂರ್ತಿರಾವ್, ಹಾಸ್ಯ ಸಾಹಿತಿ ಅ.ರಾ.ಮಿತ್ರ. ಅ.ನ.ಸು, ಆಕಾಶವಾಣಿ ಈರಣ್ಣ ಎಂಬ ಖ್ಯಾತಿಯ ಎ.ಎಸ್.ಮೂರ್ತಿ ಅವರ ಹುಟ್ಟೂರು. ಐತಿಹಾಸಿಕ ಹಿನ್ನೆಲೆ ಹೊಂದಿರುವ ಗ್ರಾಮದಿಂದ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಸಾವಿರಾರು ಜನರು ಬಂದು ಕೆ.ಆರ್.ಪೇಟೆ, ಕೆ.ಆರ್.ನಗರ ಮುಂತಾದ ಪಟ್ಟಣಕ್ಕೆ ಹೋಗಬೇಕಾಗಿದೆ.