ಕನ್ನಡ ಜ್ಯೋತಿ ರಥಯಾತ್ರೆಗೆ ನಾಗಮಂಡಲದಲ್ಲಿ ಅದ್ಧೂರಿ ಸ್ವಾಗತಸ್ಥಳೀಯ ಜನಪ್ರತಿನಿಧಿಗಳು, ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಕನ್ನಡಾಭಿಮಾನಿಗಳು ರಥಕ್ಕೆ ಹಾರ ಹಾಕಿ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಿದರು. ನಂತರ ಒಂದು ಗಂಟೆಗೂ ಹೆಚ್ಚು ಕಾಲ ವೀರಗಾಸೆ ಕುಣಿತ, ಪೂಜಾ ಕುಣಿತ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.