ರೈತರಿಗೆ ಒಂದೇ ಕಡೆ ಸವಲತ್ತು ಸಿಗಲು ರೈತ ಸಂಪರ್ಕ ಕೇಂದ್ರ ನಿರ್ಮಾಣ: ಚಲುವರಾಯಸ್ವಾಮಿಹೋಬಳಿ ಕೇಂದ್ರವಾಗಿರುವ ದೇವಲಾಪುರಕ್ಕೆ ಮುಂದಿನ ದಿನಗಳಲ್ಲಿ ಪೊಲೀಸ್ ಠಾಣೆ, ನಾಡಕಚೇರಿ, ಸೆಸ್ಕಾಂ ಉಪಕೇಂದ್ರದ ಕಟ್ಟಡ, ಸಾರ್ವಜನಿಕ ಶೌಚಾಲಯ ನಿರ್ಮಿಸಲಾಗುವುದು. ಸರ್ಕಾರದಿಂದ ರಾಜ್ಯದ ರೈತರಿಗೆ ಅನುಕೂಲ ಕಲ್ಪಿಸಲು ಇಲಾಖೆಯಲ್ಲಿ 950ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಮಂಜೂರಾತಿ ನೀಡಲಾಗಿದೆ. ಇದು ಪೂರ್ಣಗೊಂಡರೆ ರೈತರಿಗೆ ಹೆಚ್ಚು ಅನುಕೂಲವಾಗುತ್ತದೆ.