• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮಾನವ ಸರಪಳಿ ನಿರ್ಮಿಸಿ ರೈತಸಂಘ ಪ್ರತಿಭಟನೆ
ಕಳೆದ ವರ್ಷ ಜಲಾಶಯದಲ್ಲಿ ಇರುವ ನೀರನ್ನು ತಮಿಳುನಾಡು ಹಿತ ಕಾಯಲು ಸರ್ಕಾರ ನದಿ ಮೂಲಕ ನೀರು ಹರಿಸಿ ಮಂಡ್ಯ ಜಿಲ್ಲೆಯ ರೈತರಿಗೆ ಬೇಸಿಗೆ ಹಂಗಾಮು ಬೆಳೆಗೂ ನೀರು ಕೊಡದೆ ಮೋಸ ಮಾಡಿತು. ಈಗ ಮುಂಗಾರು ಬೆಳೆಗೆ ಬಿತ್ತನೆ ಬೀಜ ಹಾಕಿ ಬೆಳೆ ಬೆಳೆಯಲು ರೈತರು ಸಂಕಷ್ಟದಲ್ಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ನೀರಾವರಿ ಸಚಿವರು ಸೇರಿದಂತೆ ಸರ್ಕಾರದ ಮಂತ್ರಿಗಳು ಜಿಲ್ಲೆಯ ರೈತರಿಗೆ ನೀರು ಹರಿಸದೆ ಬರಡು ಭೂಮಿ ಮಾಡಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಘಟಿತ ಪ್ರಯತ್ನ ಅತ್ಯಗತ್ಯ: ನ್ಯಾಯಾಧೀಶ ಎನ್ .ವಿ.ಕೋನಪ್ಪ
ಮಕ್ಕಳು ತಮ್ಮ ಬಾಲ್ಯವನ್ನು ಆಟ, ಪಾಠ ಶಿಕ್ಷಣದಿಂದ ಕಳೆಯಬೇಕು. 18 ವರ್ಷ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ರೀತಿಯ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಅವರು ದೈಹಿಕ ಮತ್ತು ಮಾನಸಿಕವಾಗಿ ಕುಗ್ಗಿ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಪೋಷಕರು ವಯೋ ಸಹಜವಾಗಿ ಮಕ್ಕಳು ಆಟವಾಡಲು, ಶಿಕ್ಷಣ ಪಡೆಯಲು ಸಹಕರಿಸಬೇಕು.
ಕೆಂಪೇಗೌಡರ ನಗರ ನಿರ್ಮಾಣದ ಪರಿಕಲ್ಪನೆ ಮೆಚ್ಚುವಂಥದ್ದು: ಮಲ್ಲಿಕಾರ್ಜುನ್
ಸಮಾಜ ಸುಧಾರಕರು ಮತ್ತು ದಾರ್ಶನಿಕರಿಗೆ ಯಾವುದೇ ಜಾತಿಯಿಲ್ಲ. ಸರ್ವ ಜನಾಂಗದ ಹಿತಕ್ಕಾಗಿ, ಜಾತ್ಯತೀತ ಸಮಾಜ ನಿರ್ಮಾಣಕ್ಕೆ ದುಡಿದಿದ್ದಾರೆ. ನಾಡಿನ ಎಲ್ಲ ಮಹನೀಯರ ಪರಿಚಯ ಮಕ್ಕಳಿಗೆ ಮತ್ತು ಸಂಘ ಸಂಸ್ಥೆಗಳಿಗೆ ಆಗಬೇಕು ಎನ್ನುವ ಕಾರಣಕ್ಕಾಗಿ ಮಹನೀಯರ ಜಯಂತಿ ವೇಳೆ ಭಾವಚಿತ್ರಗಳನ್ನು ಉಚಿತವಾಗಿ ಶಾಲಾ ಕಾಲೇಜುಗಳಿಗೆ ಮತ್ತು ಸಂಸ್ಥೆಗಳಿಗೆ ವಿತರಿಸುತ್ತಿದ್ದೇನೆ.
ಮನ್ಮುಲ್‌ನಿಂದ ರೈತರಿಗೆ ಹಲವು ಸೌಲಭ್ಯ ನೀಡುತ್ತಿದೆ: ಡಾ.ಯೋಗೇಶ್
ರೈತರು ಶುದ್ಧ ಹಾಲನ್ನು ಪೂರೈಕೆ ಮಾಡಿದರೇ ಮನ್ಮುಲ್ ಹೈನುಗಾರಿಕೆಗೆ ಬೇಕಾದ ಸವಲತ್ತುಗಳನ್ನು ಸಮರ್ಪಕವಾಗಿ ಒದಗಿಸಲಿದೆ. ಹೈನುಗಾರಿಕೆ ರೈತರ ಜೀವನಾಡಿಯಾಗಿದೆ. ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಬಹುದಾಗಿದೆ. ರಾಸುಗಳ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಬೇಕು. ರಾಸುಗಳು ಆರೋಗ್ಯಕರವಾಗಿದ್ದರೆ ಉತ್ತಮ ಗುಣಮಟ್ಟದ ಹಾಲು ಪೂರೈಕೆ ಮಾಡಬಹುದು.
ಜೂ.೩೦ರಂದು ನಾದಬ್ರಹ್ಮ ಹಂಸಲೇಖರಿಗೆ ನಾಲ್ವಡಿ ಪ್ರಶಸ್ತಿ ಪ್ರದಾನ
ರಂಗಭೂಮಿ ಚಟುವಟಿಕೆಗಳಿಗೆ ಬೆಂಬಲವಾಗಿ ನಿಂತು ಅವುಗಳಿಗೆ ಹೊಸತನವನ್ನು ತುಂಬುವುದಕ್ಕೆ ಸರ್ಕಾರಗಳು ಮತ್ತು ಜನಪ್ರತಿನಿಧಿಗಳು ನಿರಾಸಕ್ತಿ ವಹಿಸಿರುವುದು ಬೇಸರದ ಸಂಗತಿ. ಮಂಡ್ಯ ನಗರದಲ್ಲೊಂದು ಗುಣಮಟ್ಟದ ರಂಗಮಂದಿರ ಇಲ್ಲ. ಇರುವ ರಂಗ ಮಂದಿರಗಳಲ್ಲೂ ಬೆಳಕಿನ ವ್ಯವಸ್ಥೆ, ಧ್ವನಿವರ್ಧಕ, ವೇದಿಕೆ ಪೀಠೋಪಕರಣಗಳು, ಆಸನಗಳ ವ್ಯವಸ್ಥೆ, ಹವಾನಿಯಂತ್ರಿತ ವ್ಯವಸ್ಥೆ ಸಮರ್ಪಕವಾಗಿಲ್ಲ.
ಸಾಮಾಜಿಕ ಭದ್ರತೆಗಾಗಿ ಗೃಹ ಕಾರ್ಮಿಕರಿಂದ ಪ್ರತಿಭಟನೆ
ಪ್ರತಿಯೊಬ್ಬ ಗೃಹ ಕಾರ್ಮಿಕರನ್ನು ಗುರುತಿಸಿ ೬೦ ವರ್ಷ ಮೇಲ್ಪಟ್ಟ ಗೃಹ ಕಾರ್ಮಿಕರಿಗೆ ಸ್ಮಾರ್ಟ್‌ಕಾರ್ಡ್‌ನ್ನು ಕಡ್ಡಾಯವಾಗಿ ನೀಡಬೇಕು. ನಮ್ಮ ರಾಜ್ಯ ನೀಡುತ್ತಿರುವ ಸ್ಮಾರ್ಟ್‌ ಕಾರ್ಡ್ ಗುರುತಿನ ಚೀಟಿಯಾಗಿ ಉಳಿಯದೆ ಅದರೊಂದಿಗೆ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಬೇಕು. ಪ್ರತಿಯೊಂದು ಜಿಲ್ಲೆ ಮತ್ತು ತಾಲೂಕುಗಳಲ್ಲಿ ಕಾರ್ಮಿಕ ಮಿತ್ರಕೇಂದ್ರಗಳನ್ನು ಸ್ಥಾಪಿಸಬೇಕು.
ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮದಿಂದ ಜನರಿಗೆ ಸಾಕಷ್ಟು ಅನುಕೂಲ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಯಶಸ್ಸು ಕಂಡಿದೆ. ಕಾರ್ಯಕ್ರಮಕ್ಕೂ ಮೊದಲು ನಾನು ಸೇರಿದಂತೆ ಅಧಿಕಾರಿಗಳಲ್ಲೂ ಸಾಕಷ್ಟು ಗೊಂದಲ ಇತ್ತು. ಎಲ್ಲವನ್ನು ನಿಭಾಯಿಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಯೋಜನೆ ರೂಪಿಸಿ ಸಕಾರಗೊಳಿಸಿದ್ದೇವೆ ಎಂಬ ಸಮಾಧಾನ ಇದೆ. ಇನ್ನೂ ಐದು ದಿನಗಳಲ್ಲಿ ಕಾರ್ಯಕ್ರಮ ಮುಗಿಲಿದೆ.
ಕೆಆರ್‌ಎಸ್ ಜಲಾಶಯ ಸುತ್ತ ಟ್ರಯಲ್‌ ಬ್ಲಾಸ್ಟ್‌ಗೆ ರೈತ ಸಂಘದಿಂದ ತೀವ್ರ ಆಕ್ರೋಶ
ಕೆಆರ್‌ಎಸ್ ಜಲಾಶಯ ರೈತರ ಜೀವನಾಡಿ. ಅಣೆಕಟ್ಟು ಸುತ್ತ ಗಣಿಗಾರಿಕೆ ನಡೆಸುವುದರಿಂದ ಅಣೆಕಟ್ಟೆಗೆ ಅಪಾಯವಿದೆ ಎನ್ನುವುದು ರಾಷ್ಟ್ರೀಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಿಂದ ದೃಢಪಟ್ಟಿದೆ. ೯೨ ವರ್ಷ ಹಳೆಯದಾದ ಅಣೆಕಟ್ಟು ರಕ್ಷಣೆ ಸರ್ಕಾರ ಮತ್ತು ಎಲ್ಲರ ಕರ್ತವ್ಯವಾಗಿದೆ. ಆದರೂ ಅಣೆಕಟ್ಟೆಯ ಸಾಮರ್ಥ್ಯ ಪರೀಕ್ಷೆಗೆ ಮುಂದಾಗಿ ಟ್ರಯಲ್ ಬ್ಲಾಸ್ಟ್‌ಗೆ ನ್ಯಾಯಾಲಯದ ಅನುಮತಿ ಕೋರಿರುವುದು ದುರಂತದ ಸಂಗತಿ.
ಬಾಲ್ಯ ವಿವಾಹ ತಡೆಗೆ ಜನರಲ್ಲಿ ಜಾಗೃತಿ ಮೂಡಿಸಿ: ಡಾ.ಎಚ್.ಎಲ್.ನಾಗರಾಜು
ಭಾರತ ದೇಶ ಸಾಕ್ಷರತೆ ವಿಷಯದಲ್ಲಿ ಮುಂದೆ ಸಾಗುತ್ತಿದ್ದರೂ ಬಾಲ್ಯ ವಿವಾಹ, ಬಾಲಾಪರಾಧ, ಬಾಲ ಕಾರ್ಮಿಕ ಪದ್ಧತಿ, ಹೆಣ್ಣು ಭ್ರೂಣ ಹತ್ಯೆಯಂತಹ ಪ್ರಕರಣಗಳು ಕಂಡುಬರುತ್ತಿರುವುದು ಶೋಚನೀಯ ವಿಷಯವಾಗಿದೆ. ಇಂತಹ ಅನಿಷ್ಠ ಪದ್ಧತಿಗಳನ್ನು ದೂರಮಾಡಲು ಸಾರ್ವಜನಿಕರು ಕೈಜೋಡಿಸಬೇಕು.
ಸರ್ಕಾರ-ಜನಪ್ರತಿನಿಧಿಗಳ ದ್ವಂದ್ವ ನಿಲುವಿನಿಂದ ಸಮಾಜಕ್ಕೆ ಅನಾರೋಗ್ಯ: ಶ್ಯಾಮ್‌ಪ್ರಸಾದ್
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಳುವ ಸರ್ಕಾರಗಳು ಪ್ರಜೆಗಳಿಗೆ ಉತ್ತಮ ವಾತಾವರಣ, ಮೂಲಭೂತ ಸೌಲಭ್ಯ, ಶಿಕ್ಷಣ, ಆರೋಗ್ಯವನ್ನು ನೀಡಬೇಕು. ಆದರೆ, ಇಂತಹ ಕೆಲಸವನ್ನು ಮಾಡದೆ ನಮ್ಮ ನಾಯಕರೆನಿಸಿಕೊಂಡವರು ಒಂದು ಕಡೆ ಮದ್ಯಪಾನ ಮಾಡಿ ಎನ್ನುವುದು, ಮತ್ತೊಂದು ಕಡೆ ಮದ್ಯಮುಕ್ತ ಭಾರತ ಮಾಡುತ್ತೇವೆ.
  • < previous
  • 1
  • ...
  • 466
  • 467
  • 468
  • 469
  • 470
  • 471
  • 472
  • 473
  • 474
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved