ತುಂಗಭದ್ರಾ ಬಳಿಕ ಕೆಆರ್ಎಸ್ ಡ್ಯಾಂ ಗೇಟ್ ಓಪನ್ ಆತಂಕ!ವಿಜಯನಗರ ಜಿಲ್ಲೆ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು ಬಿದ್ದ ಪರಿಣಾಮ ಸುಮಾರು 60 ಟಿಎಂಸಿ ನೀರು ಪೋಲು, ಭಾರೀ ಆತಂಕಕ್ಕೆ ಕಾರಣವಾಗಿದ್ದ ಪ್ರಕರಣ ಹಸಿರಾಗಿರುವಾಗಲೇ ಮಂಡ್ಯ ಜಿಲ್ಲೆ ಕೃಷ್ಣರಾಜಸಾಗರ ಅಣೆಕಟ್ಟೆ ಗೇಟ್ವೊಂದು ಏಕಾಏಕಿ ತೆರೆದುಕೊಂಡು ಜಿಲ್ಲೆಯ ಜನರ ತೀವ್ರ ಆತಂಕಕ್ಕೆ ಕಾರಣವಾಗಿದೆ. ಇದರಿಂದಾಗಿ 1000 ಕ್ಯುಸೆಕ್ಗೂ ಹೆಚ್ಚಿನ ನೀರು ನದಿಗೆ ಹರಿದು ಹೋಗಿದೆ.