ಹೇಮಾವತಿ ಎಡದಂಡೆ ನಾಲೆಯ ೫೪ನೇ ವಿತರಣಾ ನಾಲೆ ಆಧುನೀಕರಣಕ್ಕೆ ಅಡ್ಡಿ: ಪ್ರತಿಭಟನೆಹಲವು ದಶಕಗಳಿಂದ ನಾಲೆ ಅಧುನೀಕರಣಗೊಳ್ಳದೆ ವಿತರಣಾ ನಾಲೆಯಲ್ಲಿ ನೀರು ಸರಾಗವಾಗಿ ಹರಿಯುತ್ತಿರಲಿಲ್ಲ. ಇದರ ಪರಿಣಾಮ ನಾಲೆಯ ಅಚ್ಚುಕಟ್ಟು ಭಾಗದ ತೇಗನಹಳ್ಳಿ, ಅಣ್ಣೆಚಾಕನಹಳ್ಳಿ, ಕುಂದೂರು, ಕೋಮನಹಳ್ಳಿ, ಮಾಕವಳ್ಳಿ, ಹಿರಿಕಳಲೆ, ಲಿಂಗಾಪುರ, ಪುರ, ಗಾಂಧೀನಗರ, ಕಾಡುಮೆಣಸ, ಗಂಗನಹಳ್ಳಿ, ಹೆಗ್ಗಡಹಳ್ಳಿ, ಸಾಧುಗೋನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿನ ೫೧೭೫ ಎಕರೆ ಪ್ರದೇಶದ ಭೂಮಿಗೆ ನೀರು ಹರಿಯುತ್ತಿರಲಿಲ್ಲ ಎಂದಿದ್ದಾರೆ.