ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಡಿ ತಾಲೂಕಿನ ಕಟ್ಟಹಳ್ಳಿ ಮೊದಲನೇ ಹಂತದ 46 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಶಾಸಕ ಎಚ್.ಟಿ.ಮಂಜು ಚಾಲನೆ ನೀಡಿದರು.
ಐದು ವರ್ಷ ರಾಜ್ಯವನ್ನಾಳಿದ ಪಕ್ಷಗಳು ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ನೆರವು ನೀಡಿಲ್ಲ. ಈ ಬಾರಿ ಮುಖ್ಯಮಂತ್ರಿಯವರು ಜನಪರ ಬಜೆಟ್ ನೀಡುವುದರ ಜೊತೆಗೆ ಮಂಡ್ಯ ಜಿಲ್ಲೆಗೆ ವಿಶೇಷ ಬಜೆಟ್ ಕೊಡುಗೆ ನೀಡಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.