• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪ್ರಾಪ್ತ ಮಕ್ಕಳ ಸುರಕ್ಷತೆ ಬಗ್ಗೆ ಎಚ್ಚರಿಕೆ ಇರಲಿ: ಇನ್ಸ್ ಪೆಕ್ಟರ್ ರೇವತಿ
ಮಕ್ಕಳ ಶಿಕ್ಷಣ ಕಸಿಯುವುದು ತಪ್ಪು. ಓದುವ ಮಕ್ಕಳ ಭವಿಷ್ಯಕ್ಕೆ ಶಿಕ್ಷಣ ಶಕ್ತಿಯಾಗಲಿ. ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ, ಮಾನಸಿಕ ಹಿಂಸೆ ನೀಡುವುದು ಸಾಮಾನ್ಯವಾಗುತ್ತಿದೆ. ಇಂತಹ ಪ್ರಕರಣಗಳು ಜರುಗದಂತೆ ಎಚ್ಚರಿಕೆ ವಹಿಸಬೇಕು. ಅಪ್ರಾಪ್ತ ಮಕ್ಕಳ ಸುರಕ್ಷತೆಗೆ ಎಚ್ಚರ ವಹಿಸುವ ಜೊತೆಗೆ ಶಾಲೆಗಳಲ್ಲಿ ವಿಶೇಷ ಕಾಳಜಿ ವಹಿಸಬೇಕು.
ಯಾವುದೇ ಸಮಸ್ಯೆ ಇದ್ರೂ ನನ್ನ ಸಂಪರ್ಕಿಸಿ: ಶಾಸಕ ಮಧು ಜಿ.ಮಾದೇಗೌಡ
ಗ್ರಾಮದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ದ್ವೇಷ ಬೇಡ. ನಾನು ಪ್ರತಿ ಗ್ರಾಮಗಳಿಗೂ ತೆರಳಿದಾಗ ನನ್ನನ್ನು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸುತ್ತಿದ್ದಾರೆ. ಕ್ಷೇತ್ರದ ಜನರ ಸೇವೆಗೆ ನಾನು ಸದಾ ಸಿದ್ಧನಿರುತ್ತೇನೆ. ನನ್ನ ಶಾಸಕತ್ವ ಅವಧಿ ಇನ್ನೂ 5 ವರ್ಷಗಳ ಕಾಲ ಇರುತ್ತದೆ. ನನ್ನ ಕೈಲಾದ ಮಟ್ಟಿಗೆ ಅಭಿವೃದ್ದಿ ಕೆಲಸವನ್ನು ಮಾಡುತ್ತೇನೆ.
ಸಾಧನೆಗೆ ಪರಿಶ್ರಮ, ಶ್ರದ್ಧೆ, ಧೈರ್ಯದೊಂದಿಗೆ ತಾಳ್ಮೆ ಮುಖ್ಯ: ಎಸ್ಪಿ ಎನ್.ಯತೀಶ್
ಒರಟುತನ ಪ್ರದರ್ಶನವೇ ಧೈರ್ಯವಂತಿಕೆ ಎಂಬ ಭಾವನೆ ಇಂದಿನ ಯುವಕರಲ್ಲಿದೆ. ಒರಟುತನ ಧೈರ್ಯವಲ್ಲ. ಸೋಲನ್ನು ಅರಗಿಸಿಕೊಂಡು ಸಾಧನೆಯತ್ತ ಹೆಜ್ಜೆ ಇಡುವುದು ನಿಜವಾದ ಧೈರ್ಯವಂತಿಕೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗಲಿಲ್ಲವೆಂದಾಕ್ಷಣ ಪ್ರಯತ್ನವನ್ನು ಕೈಬಿಡಬಾರದು. ಅದರಲ್ಲಿ ಯಶಸ್ಸು ಸಾಧಿಸಿಯೇ ತೀರುವೆನೆಂಬ ಹಠತೊಟ್ಟು ಮತ್ತೆ ಮತ್ತೆ ಪ್ರಯತ್ನಿಸಿದರೆ ಖಂಡಿತ ಅಂದುಕೊಂಡಿದ್ದನ್ನು ಸಾಧಿಸಬಹುದು.
ಸ್ವಾಧೀನ ಪಡಿಸಿಕೊಂಡು ಜಮೀನಿಗೆ ಹಾಕಿದ್ದ ಕಲ್ಲುಕಂಬ, ನಾಮಫಲಕ ಕಿತ್ತೆಸೆದ ಕಿಡಿಗೇಡಿಗಳು
ಮಂಡಳಿ ನಿಗದಿಗೊಳಿಸಿದ ಪರಿಹಾರದ ಮೊತ್ತಕ್ಕೆ ಒಪ್ಪದ ಜಮೀನು ಮಾಲೀಕರು ಹೆಚ್ಚಿನ ಪರಿಹಾರಕ್ಕಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದರು. ರೈತರ ಮನವಿ ಆಲಿಸಿದ ನ್ಯಾಯಾಲಯ ಒಳ ಚರಂಡಿ ಮಂಡಳಿ ನಿಗದಿ ಮಾಡಿದ್ದ ಮೊತ್ತಕ್ಕಿಂತ ಹೆಚ್ಚಿನ ಪರಿಹಾರ ನೀಡುವಂತೆ ಆದೇಶಿಸಿತ್ತು. ಅದರಂತೆ ರೈತರಿಗೆ ಪರಿಹಾರ ಮೊತ್ತ ಸಿಗಲಿದೆ.
ಡೆಂಘೀ ಪ್ರಕರಣಗಳು ಹೆಚ್ಚಳ ನಿಯಂತ್ರಣಕ್ಕೆ ಕ್ರಮ ವಹಿಸಿ: ಡಾ.ಕಾಂತರಾಜ
ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿವೆ. ಕೆಲವೆಡೆ ಸಾವು ಸಂಭವಿಸಿವೆ. ತಾಲೂಕಿನಲ್ಲಿ 20 ಪ್ರಕರಣಗಳು ವರದಿಯಾಗಿವೆ. ಜ್ವರದಿಂದ ಸಾವುಗಳು ಸಂಭವಿಸುವ ಸಾಧ್ಯತೆಗಳು ಇರುವುದರಿಂದ ಡೆಂಘೀ ನಿಯಂತ್ರಣಕ್ಕೆ ಎಲ್ಲಾ ಅಧಿಕಾರಿಗಳು ಮುಂದಾಗಬೇಕು. ಡೆಂಘೀ ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆಯೇ ಆರಂಭದಲ್ಲಿಯೇ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು.
ಸರ್ಕಾರದಿಂದ ಮಂಜೂರಾದ ಮನೆಗಳ ನಿರ್ಮಾಣ ಪೂರ್ಣಗೊಳಿಸಿ
ಸರ್ಕಾರ ಕಳೆದ 2-3 ವರ್ಷಗಳಿಂದ 2475 ಮನೆ ನೀಡಿದೆ. ಆದರೆ, ಅವುಗಳ ಪೈಕಿ ನೀಡಿರುವ 1005 ಮನೆಗಳ ಕಾಮಗಾರಿಯನ್ನು ಆರಂಭಿಸಿಯೇ ಇಲ್ಲ. ಇನ್ನು ಹಲವು ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ. ಸರ್ಕಾರದಿಂದ ಮಂಜೂರಾದ ಎಲ್ಲಾ ಮನೆಗಳ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು.
ಹಾಲು ಉತ್ಪಾದಕರಿಗೆ ಮನ್ಮುಲ್ ಒಕ್ಕೂಟ ಹಲವು ಸವಲತ್ತು ನೀಡುತ್ತಿದೆ: ರಾಮಚಂದ್ರು
ಒಕ್ಕೂಟ ರಬ್ಬರ್ ಮ್ಯಾಟ್, ಮೇವು ಕತ್ತರಿಸುವ ಮತ್ತು ಹಾಲು ಕರೆಯುವ ಯಂತ್ರಗಳಿಗೆ ಶೇ.50 ಸಬ್ಸಿಡಿ ನೀಡುತ್ತದೆ. ಜತೆಗೆ ರಾಸುಗಳ ವಿಮೆ ಹಣವನ್ನು ಶೇ.50 ರಷ್ಟು ಭರಿಸುತ್ತದೆ. ರೈತರು ಉಳಿಕೆ ಹಣವನ್ನು ಪಾವತಿಸಿ ರಾಸುಗಳನ್ನು ವಿಮೆ ವ್ಯಾಪ್ತಿಗೆ ತರಬೇಕು. ಇದರಿಂದ ರಾಸುಗಳು ಆಕಸ್ಮಿಕವಾಗಿ ಮೃತಪಟ್ಟರೆ 50 ರಿಂದ 60 ಸಾವಿರದವರೆಗೂ ವಿಮೆ ಹಣ ಸಿಗುತ್ತದೆ.
ವಚನ ಪಿತಾಮಹ ಫ.ಗು.ಹಳಕಟ್ಟಿ ಜನ್ಮದಿನ ಆಚರಣೆ
ಶಿವಾನುಭವ ಪತ್ರಿಕೆ ಹಾಗೂ ಶಿವಾನುಭವ ಗ್ರಂಥ್ರಮಾಲೆ ಸ್ಥಾಪಿಸಿ ವಚನ ಸಾಹಿತ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡಿದ ಹಳಕಟ್ಟಿ ತಾವು ಸಂಗ್ರಹಿಸಿದ ವಚನ ಸಾಹಿತ್ಯವನ್ನು ಮುದ್ರಿಸುವ ಸಂಕಲ್ಪದಿಂದ ಹಿತಚಿಂತಕ ಮುದ್ರಣಾಲಯ ಸ್ಥಾಪಿಸಿದರು. ಅಮೂಲ್ಯ ಸಾಹಿತ್ಯ ರತ್ನಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಿದ ಹಳಕಟ್ಟಿ ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಸ್ಥಾಯಿಯಾಗಿದ್ದಾರೆ.
ಮಾರಸಿಂಗನಹಳ್ಳಿ ಮಾದರಿ ಗ್ರಾಮವಾಗಿ ಅಭಿವೃದ್ಧಿ: ಶಾಸಕ ಕೆ.ಎಂ.ಉದಯ್
ಈ ಹಿಂದೆ ಕ್ಷೇತ್ರವನ್ನು ಪ್ರತಿನಿಧಿಸಿದವರು ಗ್ರಾಮದ ಅಭಿವೃದ್ಧಿಗೆ ಯಾವುದೇ ಚಿಂತನೆ ನಡೆಸಿಲ್ಲ. ಇದರಿಂದ ಗ್ರಾಮ ಹಿಂದುಳಿದ ಗ್ರಾಮವಾಗಿದೆ. ದಿನೇಶ್ ಗೂಳಿಗೌಡ ಅಥವಾ ನಾನು ಯಾವುದೇ ರಾಜಕೀಯ ಕುಟುಂಬದಿಂದ ಬಂದಿಲ್ಲ. ಸಾಮಾನ್ಯರಾಗಿ ನಮ್ಮಗಳ ವೃತ್ತಿಯಲ್ಲಿ ತೊಡಗಿಕೊಂಡಿದ್ದೆವು. ಅಚಾನಕ್ಕಾಗಿ ರಾಜಕೀಯ ಬಂದು ಜನಪ್ರತಿನಿಧಿಗಳಾಗಿ ಆಯ್ಕೆಯಾಗಿದ್ದೇವೆ.
ಆರೋಗ್ಯ ರಕ್ಷಣೆಗೂ ಹೆಚ್ಚಿನ ಒತ್ತು ನೀಡಿ: ಎಂ.ಎಸ್.ಹರಿಣಿ
ವಕೀಲರು ನ್ಯಾಯಾಲಯದಲ್ಲಿ ಹೂಡುವ ಪ್ರಕರಣಗಳ ಬಗ್ಗೆ ಅಧ್ಯಯನ ಕಕ್ಷಿದಾರರೊಂದಿಗೆ ಚರ್ಚೆ ನಡೆಸುವ ಮತ್ತು ವಾದ ವಿವಾದಗಳನ್ನು ಮಂಡಿಸುವ ದಾವಂತದಲ್ಲಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭದಲ್ಲಿ ವಕೀಲರು ಪ್ರತಿ ಮೂರು ತಿಂಗಳಿಗೊಮ್ಮೆಯಾದರೂ ಸಹ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಸೂಕ್ತ.
  • < previous
  • 1
  • ...
  • 614
  • 615
  • 616
  • 617
  • 618
  • 619
  • 620
  • 621
  • 622
  • ...
  • 835
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved