ಗುಣಾತ್ಮಕ ಶಿಕ್ಷಣದಿಂದ ಉತ್ತಮ ಫಲಿತಾಂಶ: ಕೆ.ಎಸ್.ವಿಜಯ್ ಆನಂದ್ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಗುಣಮಟ್ಟದ ಶಿಕ್ಷಣ ಲಭ್ಯವಾಗಬೇಕೆಂದು ನಮ್ಮ ತಾತ ಕೆ.ವಿ.ಶಂಕರಗೌಡ ಮತ್ತು ಅವರ ಗೆಳೆಯರು ಕಟ್ಟುದ ಸಂಸ್ಥೆ ಇದಾಗಿದೆ, ನಾಟಕ ಪ್ರದರ್ಶನ ಮಾಡಿ, ರೈತರಿಂದ ದೇಣಿಗೆ ಸಂಗ್ರಹಿಸಿ, ಶ್ರಮಪಟ್ಟು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ, ಗ್ರಾಮೀಣ ರೈತರ ಮಕ್ಕಳಿಗೆ ಶಿಕ್ಷಣ ಲಭಿಸುವಂತೆ ಮಾಡಿದರು. ಪದವಿ ಪಡೆದ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯನ್ನು ಮರೆಯಬೇಡಿ, ಪೋಷಕರ ಆಶಯದಂತೆ ನಡೆದುಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು.