• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಕ್ಷಿಣ ಶಿಕ್ಷಕರ ಕ್ಷೇತ್ರ ಜೆಡಿಎಸ್ ಟಿಕೆಟ್ ಸಿಗುವ ವಿಶ್ವಾಸವಿದೆ: ಕೆ.ಟಿ.ಶ್ರೀಕಂಠೇಗೌಡ

 ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಇರುವುದಿಂದ ಪರಿಷತ್ತಿನ ಚುನಾವಣೆಗೂ ಮೈತ್ರಿ ಬಲ ಹೆಚ್ಚಲಿದೆ. ಹೀಗಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರವು ಜೆಡಿಎಸ್‌ಗೆ ಲಭ್ಯವಾಗಬಹುದು. ಇದರಿಂದ ನನಗೆ ಜೆಡಿಎಸ್ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ - ಕೆ.ಟಿ.ಶ್ರೀಕಂಠೇಗೌಡ

ವೈಭವದಿಂದ ನಡೆದ ರಾಮಾನುಜಾಚಾರ್ಯರ ಮಹಾ ರಥೋತ್ಸವ
ರಾಮಾನುಜರ ಎದುರು ಸೇವೆಯಲ್ಲಿ ಚೆಲುವನಾರಾಯಣಸ್ವಾಮಿಗೆ ಮಹಾ ಮಂಗಳಾರತಿ ನಡೆದು ರಾಮಾನುಜರಿಗೆ ಮರ್ಯಾದೆ ನಡೆದ ನಂತರ ಉತ್ಸವ ರಥದ ಮಂಟಪದ ಬಳಿಗೆ ಬಂದು ಸೇರಿತು. ರಥಮಂಟಪಕ್ಕೆ ಮೂರು ಪ್ರದಕ್ಷಿಣೆ ಹಾಗೂ ಜೋಯಿಸರಿಂದ ಮಹೂರ್ತ ಪಠಣೆಯಾದ ನಂತರ 10-30ಕ್ಕೆ ರಥಾರೋಹಣ ಕಾರ್ಯಕ್ರಮ ನೆರವೇರಿತು.
ಮೇ 15ರಂದು ಆಡಳಿತ ತಜ್ಞ ಬಿ.ಜಿ.ದಾಸೇಗೌಡ ಕೃತಿ ಬಿಡುಗಡೆ: ಮಾಜಿ ಶಾಸಕ ಜಿ.ಬಿ.ಶಿವಕುಮಾರ್
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣದ ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದ ಬಿ.ಜಿ. ದಾಸೇಗೌಡರು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿಎ ಮುಗಿಸಿ, ಮೈಷುಗರ್ ಕಾರ್ಖಾನೆಗೆ ಕೆಮಿಸ್ಟ ಆಗಿ ಕೆಲಸಕ್ಕೆ ಸೇರಿ ನಂತರ 16 ವರ್ಷಗಳ ಸುದೀರ್ಘ ಸೇವೆ, ಜನರಲ್ ಮ್ಯಾನೇಜರ್ ಆಗಿ ಗಣನೀಯ ಸೇವೆ ಸಲ್ಲಿಸಿದ್ದರು.
ಸಾಮಾಜಿಕ ಅಸಮಾನತೆ ತೊಡೆದು ಹಾಕಲು ಬಸವಣ್ಣ ಶ್ರಮಿಸಿದ್ದರು: ಚೇತನ್ ಕುಮಾರ್
ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕಗಳನ್ನು ತಿದ್ದುವ ಪ್ರಯತ್ನ ಮಾಡಿದ ವಿಶ್ವಗುರು ಬಸವಣ್ಣ ಅವರ ತತ್ವ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು. 12ನೇ ಶತಮಾನದಲ್ಲಿ ಜಾತಿ ವ್ಯವಸ್ಥೆ, ಮೂಢನಂಬಿಕೆ, ಕಂದಾಚಾರಗಳ ವಿರುದ್ಧ ಹೋರಾಡುವ ಮೂಲಕ ಸಾಮಾಜಿಕ ಅಸಮಾನತೆ ತೊಡೆದುಹಾಕಲು ಬಸವಣ್ಣ ಶ್ರಮಿಸಿದ್ದಾರೆ.
ಹನುಮ ಭಕ್ತರಿಗೆ ಪೊಲೀಸರಿಂದ ಕಿರುಕುಳ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ
ಕೆರಗೋಡು ಗ್ರಾಮದಲ್ಲಿ ಕಳೆದ ಕೆಲ ತಿಂಗಳ ಹಿಂದೆ ಹನುಮ ಧ್ವಜಸ್ತಂಬದಲ್ಲಿ ಹನುಮ ಧ್ವಜ ಹಾರಾಟ ಗ್ರಾಮಸ್ಥರು ಹಾಗೂ ಹನುಮ ಭಕ್ತರು ಹೋರಾಟ ಮಾಡಿದ್ದರು. ಈಗ ಪ್ರತಿಭಟನೆ ಮಾಡಿದವರ ಮೇಲೆ ರೌಡಿಶೀಟರ್ ತೆರೆದಿದ್ದು, ರಾಜ್ಯ ಸರ್ಕಾರ ಹಾಗೂ ಸಚಿವ, ಶಾಸಕರ ಒತ್ತಡಕ್ಕೆ ಮಣಿದು ಇಂತಹ ಕೃತ್ಯಕ್ಕೆ ಪೊಲೀಸರು ನಿಂತಿದ್ದಾರೆ. ಕೆರಗೋಡು ಠಾಣೆ ಸಬ್‌ ಇನ್ಸ್‌ಪೆಕ್ಟರ್, ಸರ್ಕಲ್ ಇನ್ಸ್‌ಪೆಕ್ಟರ್ ಹಾಗೂ ಡಿವೈಎಸ್‌ಪಿ ಅವರು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ.
ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದ ಶಿಕ್ಷಣ ಅಂತರ ಉಂಟು ಮಾಡಿವೆ: ಎಚ್.ಎಲ್.ಪುಪ್ಪಾ
ಹೊಸ ಶಿಕ್ಷಣ ನೀತಿ, ರೀತಿಗಳಲ್ಲಿ ಗೊಂದಲಗಳಿದ್ದು ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುತ್ತಿದೆ. ಸೇವೆ ಮತ್ತು ಉದ್ಯಮ ಬೇರೆ ಬೇರೆಯಾಗಿದ್ದರೂ ಶಿಕ್ಷಣ ಉದ್ಯಮವಾಗಿರುವ ಸಂದರ್ಭದಲ್ಲಿ ಯಾವುದೇ ನಿರೀಕ್ಷೆಯಿಲ್ಲದೆ ಬಡ ವಿದ್ಯಾರ್ಥಿಗಳಿಗೆ ನೆರವಾಗಿ ಶಿಕ್ಷಣ ನೀಡುವುದು ಸವಾಲಿನ ಕೆಲಸ. ಅದನ್ನು ಮಹಿಳೆಯಾಗಿ ನಿಭಾಯಿಸಿರುವ ಮೀರಾ ಶಿವಲಿಂಗಯ್ಯ ಸೇವೆ ಶ್ಲಾಘನೀಯ.
ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯ ನೀಡಿದ ಮಹಾನ್ ಶರಣರು ಬಸವಣ್ಣ: ಜೆ.ಎಸ್.ರಾಜಶೇಖರ್
ಅನುಭವ ಮಂಟಪದ ಮೂಲಕ ಎಲ್ಲಾ ಸಮಾಜವನ್ನು ಒಂದೆಡೆ ಸೇರಿಸಿ ಸಾಮಾಜಿಕ ಆಂದೋಲನ ನಡೆಸಿ ಸಮಾಜವನ್ನು ಬದಲಾವಣೆಯತ್ತ ಕೊಂಡೊಯ್ಯಬೇಕೆಂಬ ಮಹದಾಸೆ ಹೊಂದಿದ್ದ ಬಸವಣ್ಣನವರು, ಸಾಮಾಜಿಕ ನ್ಯಾಯದ ಹರಿಕಾರರಾಗಿ ಹೆಣ್ಣು ಮಕ್ಕಳಿಗೆ ಪ್ರಾಧಾನ್ಯತೆ ನೀಡಿ ಸಮಾಜದಲ್ಲಿ ಉನ್ನತ ಸ್ಥಾನ ಕಲ್ಪಿಸಿಕೊಟ್ಟಿದ್ದರು.
ಎಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣದ ವ್ಯಾಮೋಹದಿಂದ ಹೊರಬನ್ನಿ: ಕೆ.ಬಿ.ಚಂದ್ರಶೇಖರ್
ಶಿಕ್ಷಣ ಎಂದರೆ ಕೇವಲ ಮೆಡಿಕಲ್ ಮತ್ತು ಎಂಜಿನಿಯರಿಂಗ್ ಎನ್ನುವ ಭ್ರಮೆಗೆ ನಮ್ಮ ಪೋಷಕರು ಮತ್ತು ವಿದ್ಯಾರ್ಥಿಗಳು ಒಳಗಾಗಿದ್ದಾರೆ. ಇದರಿಂದ ಹೊರಬೇಕು. ಪದವಿ ಶಿಕ್ಷಣದಲ್ಲಿ ಲೋಕ ಜ್ಞಾನವಿದೆ. ಅಧ್ಯಾಪಕ ವೃತ್ತಿಯಿಂದ ಹಿಡಿದು ಕೆಎಎಸ್, ಐಎಎಸ್, ಐಪಿಎಸ್ ಪರೀಕ್ಷೆಗಳು ಸೇರಿದಂತೆ ಎಲ್ಲ ಸಾಮಾನ್ಯ ಜ್ಞಾನದ ಪರೀಕ್ಷೆಗಳನ್ನು ಎದುರಿಸುವ ತಾಕತ್ತು ನಮ್ಮ ವಿದ್ಯಾರ್ಥಿಗಳಿಗೆ ಪದವಿ ಕಲಿಕೆಯಿಂದ ಬರುತ್ತದೆ.
ಭಾರೀ ಮಳೆಗೆ 10ಕ್ಕೂ ಹೆಚ್ಚು ಮನೆಗಳು ಜಲಾವೃತ
ಜುವಾರಿ ಗಾರ್ಡನ್ ಪಕ್ಕದಲ್ಲಿ ನಿರ್ಮಿಸಲಾದ ಅವೈಜ್ಞಾನಿಕ ಚರಂಡಿಯಿಂದ ಗುಂಡಿ ನೀರು ಹೋರ ಹೋಗದೆ ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದೆ. ಜುವಾರಿ ಗಾರ್ಡನ್‌ನ ಕಾಂಪೌಂಡ್ ಸಹ ಕುಸಿದು ಬಿದ್ದು ಹಲವು ಮನೆಗಳು ಜಖಂಗೊಂಡಿವೆ. ಈ ಬಗ್ಗೆ ತಲೆಕೆಡಿಸಿಕೊಳ್ಳದ ಜುವಾರಿ ಗಾರ್ಡನ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸ್ಥಳೀಯ ನಿವಾಸಿಗಳು.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಳವಳ್ಳಿ ತಾಲೂಕಿಗೆ ಶೇ.73.59 ರಷ್ಟು ಫಲಿತಾಂಶ
ಮಳವಳ್ಳಿ ತಾಲೂಕಿನಲ್ಲಿ 3151 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2267 ವಿದ್ಯಾರ್ಥಿಗಳು ಉತೀರ್ಣರಾಗಿರುತ್ತಾರೆ. 1531 ಬಾಲಕರು ಹಾಗೂ 1620 ಬಾಲಕಿಯರಲ್ಲಿ 947 ಬಾಲಕರು, 1320 ಬಾಲಕಿಯರು ಉತ್ತೀರ್ಣರಾಗಿದ್ದಾರೆ. 584 ಬಾಲಕರು, 308 ಬಾಲಕಿಯರು ಅನುತೀರ್ಣಗೊಂಡಿದ್ದಾರೆ.
  • < previous
  • 1
  • ...
  • 739
  • 740
  • 741
  • 742
  • 743
  • 744
  • 745
  • 746
  • 747
  • ...
  • 906
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved