ಶ್ರೀರಾಮ ಮಂದಿರ ಲೋಕಾರ್ಪಣೆ: ಪ್ರಧಾನಿ ಮೋದಿಗೆ ಪತ್ರ ಅಭಿಯಾನಕೋಟ್ಯಂತರ ಭಕ್ತರ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಕನಸು ನನಸಾಗಿದೆ. ಹೋರಾಟ, ಸಂಘರ್ಷಗಳಿಗೆ ಫಲ ಸಿಕ್ಕಿದೆ. ಪ್ರಧಾನಿ ಮೋದಿ ಅವರ ದಕ್ಷ ನೇತೃತ್ವ ಬದ್ಧತೆ, ಸಕಾಲಿಕ ನಿರ್ಣಯಗಳೇ ಇಂತಹ ಐತಿಹಾಸಿಕ ಯಶಸ್ಸಿಗೆ ಕಾರಣ, ಅದಕ್ಕಾಗಿ ತಮಗೆ ಅಭಿನಂದನೆಗಳನ್ನು ತಿಳಿಸಲು ಫೆ.೧೪ರವರೆಗೆ ಅಭಿಯಾನ ನಡೆಯಲಿದ್ದು, ಜಿಲ್ಲಾದ್ಯಂತ ೧೦ ಸಾವಿರಕ್ಕೂ ಹೆಚ್ಚು ಪತ್ರ ಬರೆಯುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.