• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿವಿಲ್ ಎಂಜಿನಿಯರಿಂಗ್ ಕಾಯಿದೆ ಜಾರಿಗೆ ಜಿಲ್ಲಾ ಸಂಘದಿಂದ ಆಗ್ರಹ
ಪ್ರಸ್ತುತ ಸಿವಿಲ್ ಎಂಜಿನಿಯರಿಂಗ್ ವೃತ್ತಿಯನ್ನು ಹೊರತುಪಡಿಸಿ ವಕೀಲ, ವೈದ್ಯಕೀಯ, ಲೆಕ್ಕಪರಿಶೋಧಕ ಸೇರಿದಂತೆ ಇನ್ನಿತರ ವೃತ್ತಿಗಳು ಕಾನೂನಾತ್ಮಕವಾಗಿ ಗುರುತಿಸಲ್ಪಟ್ಟಿವೆ. ಶಾಸನಬದ್ಧ ಮಂಡಳಿಗಳಿಂದ ನಿಯಂತ್ರಿಸಲ್ಪಡುತ್ತಿವೆ. ಅಂತಹದೊಂದು ವೃತ್ತಿಪರತೆಯ ಕಾನೂನಾತ್ಮಕ ಮತ್ತು ಶಾಸನಬದ್ಧ ಮಂಡಳಿ ಸಿವಿಲ್ ಎಂಜಿನಿಯರಿಂಗ್ ವೃತ್ತಿಗೆ ಇಲ್ಲ. ಇದು ಭಾರತದ ಪ್ರಗತಿಗೆ ತೊಡಕಾಗಿದೆ.
ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ವ್ಯಾಸಂಗದ ಜೊತೆಗೆ ಶಿಸ್ತು ಮುಖ್ಯ: ನಿವೃತ್ತ ಪ್ರಾಂಶುಪಾಲ ಪುಟ್ಟಸ್ವಾಮಿ
ವಿದ್ಯಾರ್ಥಿ ದಿಸೆಯಿಂದಲೇ ಶಿಸ್ತು ಕಲಿತು ಉತ್ತಮ ಅಭ್ಯಾಸ ಮಾಡಿದರೆ ಭವಿಷ್ಯದಲ್ಲಿ ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಲಿದೆ. ವಿದ್ಯಾರ್ಥಿ ಜೀವನ ಮುಗಿದ ನಂತರ ಸಮಾಜದಲ್ಲಿ ಯಾವ ರೀತಿ ಬದುಕಬೇಕು ಎಂಬುದರ ಬಗ್ಗೆ ಚಿಂತನೆ ನಡೆಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳ ತಂದೆ ತಾಯಿಯರು ತಮ್ಮ ಮಕ್ಕಳು ಇದೇ ರೀತಿ ಸಾಧನೆ ಮಾಡಬೇಕು. ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಬೇಕು ಎಂದು ಆಶಿಸುತ್ತಾರೆ. ಅದರಂತೆ ಮುಂದಿನ ಜೀವನ ರೂಪಿಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ.
ಹನುಮ ಧ್ವಜ ಪ್ರಕರಣ: ನಾಳೆ ಕೆರಗೋಡು, ಮಂಡ್ಯ ಬಂದ್‌ಗೆ ಕರೆ
ಫೆ.೯ರಂದು ಕೆರಗೋಡು ಬಂದ್‌ಗೆ ಕರೆ ನೀಡಿರುವ ಶ್ರೀರಾಮ ಭಜನಾ ಮಂಡಳಿಯವರು ಅಂದು ಬೆಳಗ್ಗೆ ೯ ಗಂಟೆಗೆ ಕೆರಗೋಡಿನಲ್ಲಿ ಹನುಮಧ್ವಜ ಇಳಿಸಿದ ಸ್ಥಳದಿಂದ ನೂರಾರು ಬೈಕ್‌ಗಳೊಂದಿಗೆ ರ್‍ಯಾಲಿಯಲ್ಲಿ ಮಂಡ್ಯ ನಗರ ರೈಲ್ವೆ ನಿಲ್ದಾಣದ ಬಳಿಯ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನ ಆಗಮಿಸಲಿದ್ದಾರೆ. ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪಾದಯಾತ್ರೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಮೌನ ಮೆರವಣಿಗೆ ನಡೆಸಲಿದೆ.
ದ್ವಿಚಕ್ರ ವಾಹನ ಸವಾರರಿಗೆ ಗುಲಾಬಿ ಹೂ ನೀಡಿ ಹೆಲ್ಮೆಟ್ ಬಗ್ಗೆ ಜಾಗೃತಿ
ಹೆಲ್ಮೆಟ್ ಧರಿಸದವರಿಗೆ ದಂಡ ವಿಧಿಸುವುದು ಇಲಾಖೆ ಧ್ಯೇಯವಲ್ಲ. ಬದಲಾಗಿ ಅರಿವು ಮೂಡಿಸಿ ಪ್ರತಿಯೊಬ್ಬರೂ ವಾಹನ ಚಾಲನೆ ವೇಳೆ ಸ್ವಯಂ ಪ್ರೇರಣೆಯಿಂದ ಹೆಲ್ಮೆಟ್ ಧರಿಸುವಂತೆ ಮಾಡುವುದು ನಮ್ಮ ಆಶಯ. ಇಂದು ವಾಹನ ಸವಾರರಿಗೆ ಗುಲಾಬಿ ಹೂವು ನೀಡಿ ಅರಿವು ಮೂಡಿಸಿದ್ದೇವೆ. ನಾಳೆಯಿಂದ ಹೆಲ್ಮೆಟ್ ಧರಿಸದವರಿಗೆ ಕಡ್ಡಾಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು.
ಆಧುನಿಕ ಕೃಷಿ ಯಂತ್ರಗಳಿಗಿಂತ ಗತಕಾಲದ ಒಕ್ಕಣೆ ಯಂತ್ರದ ಗಮ್ಮತ್ತೇ ಬೇರೆ...!
ಆಧುನಿಕತೆ ಬೆಳೆದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನ ಕಾಲಿರಿಸಿ ರೈತರ ಕೃಷಿ ಚಟುವಟಿಕೆಗಳಿಗೆ ಯಂತ್ರಗಳ ಬಳಕೆ ಸಾಮಾನ್ಯವಾಗಿದೆ. ಇದರ ಜೊತೆಗೆ ರಸ್ತೆಗಳಲ್ಲಿ ಭತ್ತ, ರಾಗಿ ಹಾಗೂ ಇತರೆ ಬೆಳೆಗಳ ಒಕ್ಕಣೆ ಮಾಡಿ ಸಾರ್ವಜನಿಕರ ಸುಗಮ ಸಂಚಾರಕ್ಕೂ ತೊಂದರೆ ಮಾಡುತ್ತಿದ್ದಾರೆ. ಇದರಿಂದ ಗತಕಾಲದಲ್ಲಿ ರೈತರು ಕೃಷಿ ಚಟುವಟಿಕೆಗಳಿಗೆ ಬಳಕೆ ಮಾಡುತ್ತಿದ್ದ ವಸ್ತುಗಳು ನೇಪಥ್ಯಕ್ಕೆ ಸರಿಸುತ್ತಿವೆ.
ಮಾಜಿ ಸಿಎಂ ಎಸ್.ಎಂ.ಕೃಷ್ಣರಿಗೆ ‘ಚಂದ್ರವನ ಸಿರಿ’ ಪ್ರಶಸ್ತಿ ಪ್ರದಾನ
ರಾಜ್ಯದ ಮುಖ್ಯ ಮಂತ್ರಿಯಾಗಿದ್ದ ವೇಳೆ ಎಸ್.ಎಂ.ಕೃಷ್ಣ ಅವರು ಬರಗಾಲದಲ್ಲೂ ಎಂದೂ ವಿಚಲಿತರಾಗದೇ ಶಾಂತ ಚಿತ್ತ ಸಮಾಧಾನದಿಂದ ಎಲ್ಲರಿಗೂ ಉತ್ತರ ಕೊಡುತ್ತಿದ್ದರು. ಅನೇಕ ಸವಾಲುಗಳನ್ನು ಜಾಣ್ಮೆಯಿಂದ ಎದುರಿಸಿದರು. 25ನೇ ವರ್ಷದ ಪಟ್ಟಾಧಿಕಾರದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ಇವರು ಶತಾಯುಷಿಗಳಾಗಲೆನ್ನುವುದೇ ನಮ್ಮ ಹಾರೈಕೆ.
ಇಂದು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅವಶ್ಯಕ: ಶಾಸಕ ಎಚ್.ಟಿ.ಮಂಜು
ಕೆ.ಆರ್.ಪೇಟೆ ತಾಲೂಕಿನಲ್ಲಿ 23 ಪದವಿ ಪೂರ್ವ ಕಾಲೇಜುಗಳಿವೆ. ಪಟ್ಟಣದ ಪ್ರದೇಶದ ಕಾಲೇಜುಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದರೆ, ಗ್ರಾಮೀಣ ಪ್ರದೇಶದ ಕಾಲೇಜುಗಳಲ್ಲಿ ದಾಖಲಾತಿ ಕುಸಿತ ಕಾಣುತ್ತಿದೆ. ವಿದ್ಯಾರ್ಥಿಗಳು ನಗರ ಪ್ರದೇಶದ ಆಕರ್ಷಣೆಯಿಂದ ಹೊರಬರಬೇಕು. ಪೋಷಕರು ತಮ್ಮ ಮಕ್ಕಳನ್ನು ತಮ್ಮ ಪರಿಸರದಲ್ಲಿರುವ ಗ್ರಾಮೀಣ ಕಾಲೇಜುಗಳಿಗೆ ದಾಖಲಾತಿ ಮಾಡುವ ಮೂಲಕ ಗ್ರಾಮೀಣ ಪ್ರದೇಶದ ಶಿಕ್ಷಣ ಸಂಸ್ಥೆಗಳನ್ನು ಉಳಿಸಿಕೊಳ್ಳುವುದರ ಜೊತೆಗೆ ಅವುಗಳ ಅಭಿವೃದ್ಧಿಗೂ ಕೈ ಜೋಡಿಸಬೇಕು.
ಮಕ್ಕಳೊಂದಿಗೆ ಬಾಣಂತಿಯರು, ಗರ್ಭಿಣಿಯರು, ಪೋಷಕರ ಪ್ರತಿಭಟನೆ
ಅಂಗನವಾಡಿ ಮಕ್ಕಳಿಗೆ ನವೆಂಬರ್ ತಿಂಗಳಿಂದಲೂ ಮೊಟ್ಟೆ ಕೊಟ್ಟಿಲ್ಲ. ಅಡುಗೆಗೆ ಬಳಕೆ ಮಾಡುವ ತರಕಾರಿಗಳು ಕೊಳೆತ ಸ್ಥಿತಿಯಲ್ಲಿವೆ. ಅಶುದ್ಧ ತರಕಾರಿ ತಂದು ಮಕ್ಕಳಿಗೆ ಅಡುಗೆ ಮಾಡುತ್ತಿದ್ದಾರೆ. ಮಕ್ಕಳಿಗೆ ಗುಣಮಟ್ಟದ ಆಹಾರ ನೀಡದ ಕಾರಣ ಪದೇಪದೇ ಅನಾರೋಗ್ಯಕ್ಕೆ ಒಳಗಾಗುತ್ತಿವೆ. ಯಾವುದೇ ಸೌಕರ್ಯಗಳು ಇಲ್ಲ. ಕಾರ್‍ಯಕರ್ತೆಯ ಮೋಕ್ಷ ಅವರ ನಡಳಿಕೆಯ ಬಗ್ಗೆ ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದರೂ ಸಹ ಈವರೆಗೂ ಯಾವುದೆ ಕ್ರಮಕೈಗೊಂಡಿಲ್ಲ.
ಶ್ರೀರಾಮ ಮಂದಿರ ಲೋಕಾರ್ಪಣೆ: ಪ್ರಧಾನಿ ಮೋದಿಗೆ ಪತ್ರ ಅಭಿಯಾನ
ಕೋಟ್ಯಂತರ ಭಕ್ತರ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಕನಸು ನನಸಾಗಿದೆ. ಹೋರಾಟ, ಸಂಘರ್ಷಗಳಿಗೆ ಫಲ ಸಿಕ್ಕಿದೆ. ಪ್ರಧಾನಿ ಮೋದಿ ಅವರ ದಕ್ಷ ನೇತೃತ್ವ ಬದ್ಧತೆ, ಸಕಾಲಿಕ ನಿರ್ಣಯಗಳೇ ಇಂತಹ ಐತಿಹಾಸಿಕ ಯಶಸ್ಸಿಗೆ ಕಾರಣ, ಅದಕ್ಕಾಗಿ ತಮಗೆ ಅಭಿನಂದನೆಗಳನ್ನು ತಿಳಿಸಲು ಫೆ.೧೪ರವರೆಗೆ ಅಭಿಯಾನ ನಡೆಯಲಿದ್ದು, ಜಿಲ್ಲಾದ್ಯಂತ ೧೦ ಸಾವಿರಕ್ಕೂ ಹೆಚ್ಚು ಪತ್ರ ಬರೆಯುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
೧೫ ಕೋಟಿ ರು. ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ: ಕೃಷಿ ಸಚಿವ ಚಲುವರಾಯಸ್ವಾಮಿ
ರಾಜ್ಯದ ೨೩೬ ತಾಲೂಕಿನಲ್ಲಿ ೨೨೩ ತಾಲೂಕು ಬರಪೀಡಿತವಾಗಿದ್ದು, ರೈತರಿಗೆ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಬರ ಪರಿಹಾರ ಬರುವುದು ತಡವಾಗುತ್ತಿರುವುದರಿಂದ ರಾಜ್ಯ ಸರ್ಕಾರವೇ ರೈತರಿಗೆ ಮೊದಲ ಹಂತದಲ್ಲಿ ಪರಿಹಾರವಾಗಿ ₹೨೦೦೦ ನೀಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ₹೬೯ ಸಾವಿರ ಕೋಟಿ ಅನುದಾನ ಬೇಕಾಗುತ್ತದೆ.
  • < previous
  • 1
  • ...
  • 753
  • 754
  • 755
  • 756
  • 757
  • 758
  • 759
  • 760
  • 761
  • ...
  • 814
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved