ನೀರಿಗಾಗಿ ಮರಿಲಿಂನದೊಡ್ಡಿ ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹಮಳೆ ಕೊರತೆಯಿಂದಾಗಿ ನೀರಿ ಅಭಾವ ಎದುರಾಗಿದೆ. ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಹ ಸಂಕಷ್ಟ ಪರಿಸ್ಥಿತಿ ನಿರ್ಮಾಣವಾಗಿದೆ. ನೀರಿನ ಕೊರತೆ ಇರುವುದರಿಂದ ರೈತರು ಹೊಸ ಬೆಳೆ ಹಾಕಬಾರದು ಎಂದು ಆಳುವ ಸರ್ಕಾರ ನಿರ್ಬಂಧ ಹಾಕಿದ್ದರಿಂದ ಯಾವುದೇ ಬೆಳೆಯನ್ನು ರೈತರು ಬೆಳೆದಿಲ್ಲ. ಆದರೆ, ಇರುವ ಬೆಳೆ ರಕ್ಷಣೆ ಮತ್ತು ಜನ-ಜಾನುವಾರುಗಳ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಾದದ್ದು ಸರ್ಕಾರದ ಕರ್ತವ್ಯ.