• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜೃಂಭಣೆಯಿಂದ ನಡೆದ ಕಾರ್ಕಹಳ್ಳಿ ಬಸವೇಶ್ವರ ರಥೋತ್ಸವ
ರಥೋತ್ಸವ ನಡೆಯುವ ಮುನ್ನ ಚಿಕ್ಕರಸಿನಕೆರೆ ಕಾಲಭೈರವೇಶ್ವರ, ಕಾರ್ಕಹಳ್ಳಿ ಬಸವೇಶ್ವರ ಬಸಪ್ಪ ಹಾಗೂ ಪಟ್ಟಲದಮ್ಮ ಸೇರಿದಂತೆ ಇತರೆ ದೇವತೆಗಳ ಮೆರವಣಿಗೆ ಮೂಲಕ ಬಸವೇಶ್ವರ ದೇವರ ವಿಗ್ರಹವನ್ನು ರಥೋತ್ಸವ ಸ್ಥಳಕ್ಕೆ ಕರೆತರಲಾಯಿತು. ನಂತರ ಸಂಪ್ರಾದಾಯಿಕ ಪೂಜೆಯೊಂದಿಗೆ ದೇವರ ಮೂರ್ತಿಯನ್ನು ರಥೋತ್ಸವಕ್ಕೆ ಅರ್ಚಕರು ಪೂಜಾ ವಿಧಿವಿಧಾನಗಳನ್ನು ಸಲ್ಲಿಸಿದರು. ನಂತರ ನಡೆದ ರಥೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಹಣ್ಣುಜವನಗಳನ್ನು ಎಸೆದು ತಮ್ಮ ಭಕ್ತಿಪ್ರದರ್ಶಿಸಿದರು.
ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಗೆಲುವು ಖಚಿತ: ಜ್ಯೋತಿ ಪ್ರಕಾಶ್ ಮಿರ್ಜಿ
ಮಾಜಿ ಪ್ರಧಾನಿ ದೇವೇಗೌಡರು ರಾಜ್ಯದಲ್ಲಿ ರೈತ ಪರ, ನೀರಾವರಿಗಾಗಿ ಹೆಚ್ಚು ಒತ್ತುಕೊಟ್ಟಿದ್ದಾರೆ. ಅವರು ಮಾಡಿರುವ ಕೆಲಸಗಳು ಇದುವರೆಗೂ ಯಾವ ರಾಜಕಾರಣಿಯು ಮಾಡಿಲ್ಲ. ರಾಜ್ಯದ ಏಳಿಗೆಗೆ ಶ್ರಮಿಸಿದ್ದಾರೆ. ಈ ವಯಸ್ಸಿನಲ್ಲೂ ಸಹ ಅವರು ರಾಜ್ಯದ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ, ಬಡವರು ಹಾಗು ದೀನ ದಲಿತರ ಏಳ್ಗೆಗಾಗಿ ಹಾಗೂ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಅನೇಕ ಯೋಜನೆ ಜಾರಿಗೆ ತಂದಿದ್ದಾರೆ. ಅವರನ್ನು ಮತ್ತೆ ಗೆಲ್ಲಿಸಿದರೆ ಕರ್ನಾಟಕದ ಅಭಿವೃದ್ಧಿ ಮತ್ತಷ್ಟು ಅನುಕೂಲವಾಗಿದೆ.
ಸಂತೆಕಸಲಗೆರೆಯಲ್ಲಿ ಸಂಭ್ರಮದಿಂದ ನಡೆದ ಸಿಡಿ ಉತ್ಸವ
ಸಿಡಿಹಬ್ಬದ ಅಂಗವಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ಶ್ರೀಚೌಡೇಶ್ವರಿ ಮತ್ತು ಶ್ರೀ ಹೊಂಬಾಳಮ್ಮ ದೇವಿಯ ಕರಗಗಳನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಗ್ರಾಮಸ್ಥರು ಕರಗಳಿಗೆ ಭಕ್ತಿ ಪೂರ್ವಕವಾಗಿ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ನಂತರ ರಾತ್ರಿ ಹೆಬ್ಬಾರೆ ಉತ್ಸವ, ಭಕ್ತರಿಗೆ ಅನ್ನಸಂತರ್ಪಣೆ ಹಾಗೂ ಮನರಂಜನಾ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು. ಸಿಡಿ ಉತ್ಸವದ ಅಂಗವಾಗಿ ಗುರುವಾರ ಬೆಳಗ್ಗೆಯಿಂದಲೇ ವಿವಿಧ ಪೂಜೆಗಳು ನಡೆದವು.
ಮಂಡ್ಯ ಜಿಲ್ಲೆಯಲ್ಲಿ ‘ಕೈ’ಗೆ ಬಲ ತುಂಬಿದ ಪಕ್ಷ ಸೇರ್ಪಡೆ..!
ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಎಂಬುದು ಗೊತ್ತಾಗುತ್ತಿದ್ದಂತೆ ಜೆಡಿಎಸ್, ಬಿಜೆಪಿಯ ನೂರಾರು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರಲು ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅಲ್ಲಿಂದ ಪ್ರವಾಹದಂತೆ ಕಾಂಗ್ರೆಸ್ ಕಡೆ ಹರಿದುಬರಲಿದ್ದಾರೆ ಎಂದು ಭವಿಷ್ಯ ನುಡಿದ ಶಾಸಕ ಪಿ.ರವಿಕುಮಾರ, ಕಳೆದ ೩೦ ವರ್ಷದಿಂದ ಜೆಡಿಎಸ್ ಸುಳ್ಳಿನ ಸರಮಾಲೆಯನ್ನೇ ಸೃಷ್ಟಿಸಿ ಜಿಲ್ಲೆಯನ್ನು ಅಭಿವೃದ್ಧಿಯಿಂದ ವಂಚಿತಗೊಳ್ಳುವಂತೆ ಮಾಡಿದೆ. ಸುಳ್ಳು ಮತ್ತು ಅಭಿವೃದ್ಧಿ ಮೇಲೆ ಈ ಚುನಾವಣೆ ನಡೆಯಲಿದೆ.
ಜೆಡಿಎಸ್ ಮದ್ದೂರು ತಾಲೂಕು ಅಧ್ಯಕ್ಷರಾಗಿ ದಿವ್ಯ ರಾಮಚಂದ್ರೆಟ್ಟಿ ಆಯ್ಕೆ
ಜೆಡಿಎಸ್‌ ಮಹಿಳಾ ಘಟಕದ ತಾಲೂಕು ಅಧ್ಯಕ್ಷರಾಗಿ ತಮ್ಮನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಡಿ.ರಮೇಶ್ ಆದೇಶ ಹೊರಡಿಸಿದ್ದು, ಮಾಜಿ ಸಚಿವ ಡಿ.ಸಿ.ತಮ್ಮಣ್ಣರ ಮಾರ್ಗದರ್ಶನದಂತೆ ನಾನು ತಾಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಪಕ್ಷಕ್ಕೆ ಯಾವುದೇ ಚ್ಯುತಿಬಾರದ ರೀತಿಯಲ್ಲಿ ನಡೆದುಕೊಳ್ಳುವುದಾಗಿ ದಿವ್ಯ ರಾಮಚಂದ್ರೆಟ್ಟಿ ಭರವಸೆ ನೀಡಿದರು.
ಅಕ್ರಮ ಆಸ್ತಿ ಗಳಿಕೆ ಆರೋಪ: ಪಿಡಬ್ಲ್ಯುಡಿ ಇಇ ಹರ್ಷ ಅಮಾನತು
ಲೋಕಾಯುಕ್ತ ದಾಳಿ ವೇಳೆ ಅಧಿಕಾರಿಯ ಅಕ್ರಮ ಆಸ್ತಿ ಗಳಿಕೆ ಕಂಡುಬಂದಿತ್ತು. ಪರಿಶೀಲನಾ ಅವಧಿಯಲ್ಲಿ ಹರ್ಷ ಅವರು ೧.೪೦ ಕೋಟಿ ರು. ಆದಾಯ ಹೊಂದಿದ್ದು, ೧.೨೫ ಕೋಟಿ ರು. ಖರ್ಚು ಹಾಗೂ ೧೪.೫೦ ಕೋಟಿ ರು. ಉಳಿತಾಯ ಹೊಂದಿರುತ್ತಾರೆ. ಆದರೆ, ತನಿಖೆ ವೇಳೆ ೩.೩೩ ಕೋಟಿ ರು. ಆಸ್ತಿಯಲ್ಲಿ ೩.೧೯ ಕೋಟಿ ಅಂದರೆ, ಆದಾಯಕ್ಕಿಂತ ಶೇ.೨೨೭.೪೧೬ ರಷ್ಟು ಹೆಚ್ಚುವರಿ ಅಕ್ರಮ ಆಸ್ತಿ ಹೊಂದಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ಆರೋಪಿಸಿದ್ದಾರೆ.
ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ೧೦೦ ಮೀ.ವರೆಗೆ ಮಾತ್ರ ಕೇವಲ ೩ ವಾಹನಗಳು ಪ್ರವೇಶಿಸಲು ಅವಕಾಶವಿರುತ್ತದೆ. ಚುನಾವಣಾಧಿಕಾರಿ ಕಚೇರಿಯಲ್ಲಿ ಸಿ.ಸಿ.ಟೀವಿ ಅಳವಡಿಸಲಾಗಿದ್ದು, ಪ್ರತ್ಯೇಕವಾಗಿ ವಿಡಿಯೋ ರೆಕಾರ್ಡಿಂಗ್ ಮಾಡಲಾಗುವುದು. ನಾಮಪತ್ರ ಸಲ್ಲಿಸಲು ಅವಶ್ಯಕವಾಗಿರುವ ದಾಖಲೆಗಳು ಮತ್ತು ಅನುಸರಿಸಬೇಕಾದ ವಿವಿಧ ಪ್ರಕ್ರಿಯೆಗಳ ಕುರಿತ ಮಾಹಿತಿಯನ್ನು ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಪಡೆದುಕೊಳ್ಳಬಹುದು.
ಯದುಗಿರಿಯ ಅಧಿದೈವ ಚೆಲ್ವತಿರುನಾರಾಯಣಸ್ವಾಮಿಗೆ ಅಭಿಷೇಕದೊಂದಿಗೆ ವೈರಮುಡಿ ಬ್ರಹ್ಮೋತ್ಸವ ‘ಸಂಪನ್ನ’
ವೈರಮುಡಿ ಜಾತ್ರಾ ಮಹೋತ್ಸವದ 10ನೇ ತಿರುನಾಳ್ ದಿನವಾದ ಬುಧವಾರ ಇಡೀ ದೇವಾಲಯವನ್ನು ಸ್ವಚ್ಛಗೊಳಿಸಿ ಯಾವುದೇ ಲೋಪದೋಷಗಳಿದ್ದರೂ ಕ್ಷಮಿಸುವಂತೆ ಕೋರಿ ಸಂಪ್ರೋಕ್ಷಣೆ ಮಾಡಿದ ನಂತರ ಮೂಲಮೂರ್ತಿ, ಉತ್ಸವಮೂರ್ತಿಗೆ ಹಾಲು, ಜೇನು, ಮೊಸರು, ಎಳನೀರು, ಪವಿತ್ರ ತೀರ್ಥಗಳಿಂದ ಅಭಿಷೇಕ ನೆರವೇರಿಸಲಾಯಿತು. ಮಹಾಭಿಷೇಕ ಮಧ್ಯೆ ಹರಿಷಿಣ ಅಲಂಕಾರ ನೆರವೇರಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಲಾಯಿತು.
ನಾಲೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟ: ಪೀಹಳ್ಳಿ ರಮೇಶ್ ಎಚ್ಚರಿಕೆ
ಭೀಕರ ಬರಗಾಲದಿಂದಾಗಿ ನೀರಿಲ್ಲದೆ ಜನರ ಬದುಕು ಹೀನಾಯ ಸ್ಥಿತಿಗೆ ತಲುಪಿದೆ ಮಳೆ ಹಾಗೂ ನಾಲೆಗಳಲ್ಲಿ ನೀರಿಲ್ಲದೆ ಬಹುತೇಕ ಬೆಳೆಗಳು ಒಣಗಿವೆ. ಸದ್ಯ ಬೆಳೆದು ನಿಂತಿರುವ ರೈತರ ಬೆಳಗಳು ಸಹ ಕೈ ತಪ್ಪಿ ಹೋಗುವಂತಹ ಪರಿಸ್ಥತಿ ನಿರ್ಮಾಣವಾಗಿದೆ. ಕೂಡಲೇ ನಾಲೆಗಳ ಮೂಲಕ ನೀರು ಹರಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ.
ಮಾ.27ಕ್ಕೆ ಕಾರ್ಕಹಳ್ಳಿ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ
ಪುರಾತನ ಕಾಲದಿಂದಲೂ ಆಚರಿಸುವ ಜಾತ್ರಾ ಮಹೋತ್ಸವಕ್ಕೆ ಹಲವು ವರ್ಷಗಳಿಂದ ಎರಡು ಗುಂಪುಗಳ ನಡುವೇ ಬಿನ್ನಾಭಿಪ್ರಾಯ ಉಂಟಾಗಿತ್ತು. ಹಬ್ಬ ಆಚರಿಸಲು ತಾಲೂಕು ಆಡಳಿತದಿಂದ ಶ್ರೀ ಬಸವೇಶ್ವರ ದೇವಾಲಯ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಸಿದಾಗ 2 ಗುಂಪುಗಳ ಮುಖಂಡರು ಒಪ್ಪಿಗೆ ಸೂಚಿಸಿದ ಮೇರೆಗೆ ಹಬ್ಬ ಆಚರಣೆಗೆ ಮುಂದಾಗಿ ಪೂಜಾ ವಿಧಿವಿಧಾನಗಳಿಗೆ ಹಣಿಯಾಗಿದೆ.
  • < previous
  • 1
  • ...
  • 790
  • 791
  • 792
  • 793
  • 794
  • 795
  • 796
  • 797
  • 798
  • ...
  • 905
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved