• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ಲೋಕಸಭಾ ಕ್ಷೇತ್ರ: ೧೭,೫೯,೧೭೫ ಮತದಾರರು..!
ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯೊಳಗೆ ೨೫ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸುವುದಕ್ಕೆ ಸ್ಥಳ ಗುರುತಿಸಲಾಗಿದೆ. ಮಳವಳ್ಳಿ-೫, ಮದ್ದೂರು-೪, ಶ್ರೀರಂಗಪಟ್ಟಣ-೫, ನಾಗಮಂಗಲ-೪, ಕೆ.ಆರ್.ಪೇಟೆ-೩ ಹಾಗೂ ಕೆ.ಆರ್.ನಗರದಲ್ಲಿ ೪ ಚೆಕ್‌ಪೋಸ್ಟ್‌ಗಳನ್ನು ಸ್ಥಾಪನೆಗೆ ಸ್ಥಳ ಗುರುತಿಸಲಾಗಿದೆ. ಈಗಾಗಲೇ ೧೯ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಸೀಸಿ ಟೀವಿಗಳನ್ನು ಅಳವಡಿಸಲಾಗಿದೆ. ಇದರ ದೃಶ್ಯಾವಳಿಗಳನ್ನು ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲೂ ವೀಕ್ಷಣೆಗೆ ಅವಕಾಶ ಮಾಡಿದೆ.
ಎಚ್ಡಿಕೆಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಗೆ ಪ್ರಾರ್ಥಿಸಿ ದೇಗುಲದಲ್ಲಿ ಅಭಿಮಾನಿಗಳಿಂದ ಪೂಜೆ
ಮೂರನೇ ಬಾರಿಗೆ ಹೃದಯದ ಸಂಬಂಧಿ ಚಿಕಿತ್ಸೆಗೆ ತೆರಳುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಣ್ಣನವರಿಗೆ ಕನ್ನಡನಾಡಿನ 6 ಕೋಟಿ ಜನರ ಆಶೀರ್ವಾದ ಇರುತ್ತದೆ. ಮುಖ್ಯಮಂತ್ರಿಯಾಗಿದ್ದ ವೇಳೆ ಜನ ಪರವಾಗಿ ಕಾರ್ಯಕ್ರಮ ನೀಡಿ ಹಾಗೂ ಲಕ್ಷಾಂತರ ಕುಟುಂಬಗಳನ್ನು ಸಂರಕ್ಷಿಸಿದ್ದ ರಕ್ಷಣೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಜನಪ್ರಿಯ ಕಾರ್ಯಕ್ರಮ ನೀಡಿದ್ದು ಇಡೀ ದೇಶಕ್ಕೆ ಮಾದರಿಯಾಗಿವೆ. ಅವರ ಆಡಳಿತದ ಕಾಲ ಸುವರ್ಣಯುಗವಾಗಿತ್ತು.
ನೀತಿ ಸಂಹಿತೆ ಜಾರಿ: ಫ್ಲೆಕ್ಸ್, ಕಟೌಟ್, ವಾಲ್ ಪೋಸ್ಟರ್ ತೆರವು
ಚುನಾವಣಾ ನೀತಿ ಸಂಹಿತೆ ಘೋಷಣೆಯಾಗಿರುವುದರಿಂದ ಸರ್ಕಾರಿ ಕಚೇರಿಗಳು, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ, ಸರ್ವಿಸ್ ರಸ್ತೆ, ಪೇಟೆ ಬೀದಿ, ಮಳವಳ್ಳಿ ರಸ್ತೆ ಸೇರಿದಂತೆ ಬೀದಿ ಬಡಾವಣೆಗಳಲ್ಲಿ ಅಳವಡಿಸಲಾಗಿದ್ದ ಬ್ಯಾನರ್, ಪ್ಲೆಕ್ಸ್ ಗಳನ್ನು ಮದ್ದೂರು ಪುರಸಭೆಯ ಸಿಬ್ಬಂದಿ ನೆರವಿನಿಂದ ಕಾರ್ಯಾಚರಣೆ ನಡೆಸಿ ಅಧಿಕಾರಿಗಳು ತೆರವು ಮಾಡಿದರು.
ವೈರಮುಡಿ ಉತ್ಸವದ ನಿಮಿತ್ತ ಚೆಲುವನಾರಾಯಣಸ್ವಾಮಿಗೆ ವೈಭವದ ಕಲ್ಯಾಣೋತ್ಸವ
ಕಲ್ಯಾಣ ನಾಯಕಿ ಅಮ್ಮನವರಿಗೆ ಸಂಜೆ 4 ಗಂಟೆ ವೇಳೆಗೆ ಕಲ್ಯಾಣಿಗೆ ಉತ್ಸವ ನೆರವೇರಿಸಲಾಯಿತು. ಸಂಜೆ 5ಗಂಟೆ ವೇಳೆಗೆ ದೇವಸೇನಾಧಿಪತಿ ವಿಶ್ವಕ್ಸೇನರ ಉತ್ಸವ ನೆರವೇರಿಸಿ ಕಲ್ಯಾಣೋತ್ಸವ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲಿ ಎಂದು ಪ್ರಾರ್ಥಿಸಲಾಯಿತು.
ಲೋಕ್ ಅದಾಲತ್: 820 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ
ಹಿರಿಯ ಮತ್ತು ಸಿವಿಲ್ ನ್ಯಾಯಾಲಯ, ಪ್ರಧಾನ ಸಿವಿಲ್ ಹಾಗೂ ಅಪರ ನ್ಯಾಯಾಲಯಗಳಲ್ಲಿ ನೆನೆಗುದಿ ಬಿದ್ದಿದ್ದ ಒಟ್ಟು 1420 ಪ್ರಕರಣಗಳ ಪೈಕಿ 820 ಪ್ರಕರಣಗಳನ್ನು ಕಕ್ಷಿದಾರರು ಮತ್ತು ಅರ್ಜಿದಾರರ ಸಮ್ಮುಖದಲ್ಲಿ ಇತ್ಯರ್ಥ ಪಡಿಸಿದ ನ್ಯಾಯಾಧೀಶರು ದೂರುದಾರರಿಗೆ 9 ಕೋಟಿ 75 ಲಕ್ಷದ 99 ಸಾವಿರದ 259 ರು.ಗಳನ್ನು ಪರಿಹಾರ ನೀಡುವಂತೆ ತೀರ್ಪು ನೀಡಿದರು.
ರಾಜಕೀಯ ಸೇರುವ ಆಹ್ವಾನ ತಿರಸ್ಕರಿಸಿದ್ದ ಕುವೆಂಪು: ಚಿಂತಕ ನರಹಳ್ಳಿ ಬಾಲಸುಬ್ರಹ್ಮಣ್ಯ
ಕುವೆಂಪು ಅವರ ಕ್ರಾಂತಿಕಾರಿ ಬರವಣಿಗೆಯನ್ನು ಕಂಡು ರಾಮ್‌ಮನೋಹರ್ ಲೋಹಿಯಾ ಅವರು ರಾಜಕೀಯಕ್ಕೆ ಬರುವಂತೆ ಆಹ್ವಾನಿಸಿದ್ದರು. ಜೊತೆಗೆ ಬಿ.ಎಂ.ಶ್ರೀಕಂಠಯ್ಯನವರು ಕನ್ನಡ ಜಾಗೃತಿ ಹೋರಾಟಕ್ಕೆ ಕರೆದಾಗಲೂ ಅದನ್ನು ನಯವಾಗಿಯೇ ತಿರಸ್ಕರಿಸಿದ್ದರು. ಬರಹದ ಮೂಲಕವೇ ಶೂದ್ರನನ್ನ ತಪಸ್ವಿ, ರೈತನನ್ನು ನೇಗಿಲಯೋಗಿ ಹಾಗೂ ಜನಸಾಮಾನ್ಯರಿಗೆ ಶ್ರೀಸಾಮಾನ್ಯ ಎಂಬ ಗೌರವವನ್ನ ನೀಡುವುದರ ಮೂಲಕ ಸಮಾನತೆಯನ್ನು ಪ್ರತಿಪಾದಿಸಿದರು. ಮೇಲ್ವರ್ಗದ ಅಸಮಾನತೆಯ ಧೋರಣೆಯ ವಿರುದ್ಧ ಕ್ರಾಂತಿಕಾರಕ ಬರವಣಿಗೆ ಮೂಲಕ ಉತ್ತರ ನೀಡಿದರು.
ಶಸ್ತ್ರಾಸ್ತ್ರ ಬಂದೂಕು ಠೇವಣಿ ಮಾಡಲು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ
ಸಾರ್ವಜನಿಕ ಪ್ರದೇಶಗಳಲ್ಲಿ ಬಂದೂಕುಗಳನ್ನು ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ. ಅನಧಿಕೃತ ಆಯುಧಗಳು ಮತ್ತು ಮದ್ದು ಗುಂಡುಗಳು ಕಂಡುಬಂದಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಲೋಕಸಭಾ ಚುನಾವಣಾ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗಿನ ಅವಧಿಯಲ್ಲಿ ಯಾವುದೇ ಶಸ್ತ್ರಾಸ್ತ್ರಗಳು, ಆಯುಧಗಳು ಮತ್ತು ಯಾವುದೇ ಮದ್ದುಗುಂಡುಗಳೊಂದಿಗೆ ಸಂಚರಿಸುವುದನ್ನು ಮತ್ತು ಅವುಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗೆಲ್ಲಲು ಛಲ ಮತ್ತು ಹಂಬಲವಿರಬೇಕು: ಡಾ.ಸಿ.ಎಸ್.ಕೇದಾರ್
ಇಂದು ತಮ್ಮ ಮೊಬೈಲ್‌ಗಳಲ್ಲಿ ಸಾಮಾನ್ಯ ಜ್ಞಾನಕ್ಕೆ ಅಗತ್ಯವಿರುವ ಮಾಹಿತಿಳನ್ನೆಲ್ಲಾ ಪಡೆಯಬಹುದು. ಲಭ್ಯವಿರುವ ತಾಂತ್ರಿಕತೆ ಬಳಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉತ್ತಮ ಐಎಎಸ್ ಅಧಿಕಾರಿಗಳಾಗಬಹುದು. ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳಾಗಿ ಜಪಾನ್ ದೇಶದಂತೆಯೇ ನಮ್ಮಲ್ಲಿಯೂ ಅಭಿವೃದ್ಧಿಯ ಕ್ರಾಂತಿ ಮಾಡಬೇಕು.
ಸಾಮಾಜಿಕ ಬದ್ಧತೆಗೆ ಪುನೀತ್‌ ಸ್ಫೂರ್ತಿ: ಎಲ್‌.ಸಂದೇಶ್‌
ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ ಪ್ರತಿಮೆಯನ್ನು ಮಂಡ್ಯ ನಗರದ ಡಾ.ರಾಜ್‌ಕುಮಾರ್ ಪ್ರತಿಮೆ ಬಳಿ ಸ್ಥಾಪಿಸುವುದರ ಮೂಲಕ ಹೊಸ ತಲೆಮಾರಿನ ಯುವಜನಾಂಗದಲ್ಲಿ ಸಾಮಾಜಿಕ ಬದ್ಧತೆ ಮೂಡಿಸಬೇಕು. ಕರವೇ, ವಿವಿಧ ಸಂಘಟನೆಗಳು ಮತ್ತು ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ಬೆಂಬಲದ ನಡುವೆ ಪುನೀತ್ ರಾಜ್‌ಕುಮಾರ್ ಪ್ರತಿಮೆಯನ್ನು ಸ್ಥಾಪಿಸುವ ಉದ್ದೇಶವಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು.
ಸಾರ್ವಜನಿಕರು ದೂರು ಸಲ್ಲಿಸಲು ಸಿ-ವಿಜಿಲ್ ಮೊಬೈಲ್ ಆ್ಯಪ್‌ಗಳ ನೆರವು
ಸಿ-ವಿಜಿಲ್ ಮೊಬೈಲ್ ಆ್ಯಪ್ ಮೂಲಕ ಜಿಲ್ಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ನೀತಿ ಸಂಹಿತೆ ಉಲ್ಲಂಘನೆಗಳು ಕಂಡುಬಂದಲ್ಲಿ ಫೋಟೋ, ವಿಡಿಯೋ ಮುಖಾಂತರ ದೂರು ದಾಖಲಿಸಬಹುದು. ದೂರುದಾರರ ಹೆಸರನ್ನು ಗೌಪ್ಯವಾಗಿಡಲಾಗುವುದು. ಸಿ-ವಿಜಿಲ್ ಮೊಬೈಲ್ ಆ್ಯಪ್ ಮೂಲಕ ಸಾರ್ವಜನಿಕರು ಸಲ್ಲಿಸುವ ದೂರುಗಳನ್ನು ೧೦೦ ನಿಮಿಷಗಳೊಳಗೆ ಇತ್ಯರ್ಥಪಡಿಸುವುದು.
  • < previous
  • 1
  • ...
  • 800
  • 801
  • 802
  • 803
  • 804
  • 805
  • 806
  • 807
  • 808
  • ...
  • 904
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved