• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಾಮ ಮಂದಿರ ಲೋಕಾರ್ಪಣೆ: ಪ್ರಧಾನಿ ಮೋದಿಗೆ ಪತ್ರ ಅಭಿಯಾನ
ಕೋಟ್ಯಂತರ ಭಕ್ತರ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಕನಸು ನನಸಾಗಿದೆ. ಹೋರಾಟ, ಸಂಘರ್ಷಗಳಿಗೆ ಫಲ ಸಿಕ್ಕಿದೆ. ಪ್ರಧಾನಿ ಮೋದಿ ಅವರ ದಕ್ಷ ನೇತೃತ್ವ ಬದ್ಧತೆ, ಸಕಾಲಿಕ ನಿರ್ಣಯಗಳೇ ಇಂತಹ ಐತಿಹಾಸಿಕ ಯಶಸ್ಸಿಗೆ ಕಾರಣ, ಅದಕ್ಕಾಗಿ ತಮಗೆ ಅಭಿನಂದನೆಗಳನ್ನು ತಿಳಿಸಲು ಫೆ.೧೪ರವರೆಗೆ ಅಭಿಯಾನ ನಡೆಯಲಿದ್ದು, ಜಿಲ್ಲಾದ್ಯಂತ ೧೦ ಸಾವಿರಕ್ಕೂ ಹೆಚ್ಚು ಪತ್ರ ಬರೆಯುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
೧೫ ಕೋಟಿ ರು. ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ: ಕೃಷಿ ಸಚಿವ ಚಲುವರಾಯಸ್ವಾಮಿ
ರಾಜ್ಯದ ೨೩೬ ತಾಲೂಕಿನಲ್ಲಿ ೨೨೩ ತಾಲೂಕು ಬರಪೀಡಿತವಾಗಿದ್ದು, ರೈತರಿಗೆ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಬರ ಪರಿಹಾರ ಬರುವುದು ತಡವಾಗುತ್ತಿರುವುದರಿಂದ ರಾಜ್ಯ ಸರ್ಕಾರವೇ ರೈತರಿಗೆ ಮೊದಲ ಹಂತದಲ್ಲಿ ಪರಿಹಾರವಾಗಿ ₹೨೦೦೦ ನೀಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ₹೬೯ ಸಾವಿರ ಕೋಟಿ ಅನುದಾನ ಬೇಕಾಗುತ್ತದೆ.
ವಿದ್ಯಾರ್ಥಿಗಳು ಭಾರತ ಸಂವಿಧಾನವನ್ನು ಓದಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಸಂವಿಧಾನ ಓದುವ ಮೂಲಕ ವಿದ್ಯಾರ್ಥಿಗಳು ಸುಳ್ಳನ್ನು ಸತ್ಯವನ್ನಾಗಿಸಲು ಹೊರಟ್ಟಿರುವವವರಿಗೆ ತಕ್ಕ ಉತ್ತರ ನೀಡುವಂತಾಗಬೇಕು. ಸರ್ವರಿಗೂ ಸಮಪಾಲು ಸಮಬಾಳು, ಸಾಮಾಜಿಕ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್‌ ನಮ್ಮ ರಾಷ್ಟ್ರಕ್ಕೆ ಕೊಟ್ಟಿದ್ದಾರೆ. ಪ್ರತಿಯೊಬ್ಬರು ಸಂವಿಧಾನದ ಆಶಯ ತಿಳಿಯಬೇಕೆಂಬ ಉದ್ದೇಶದಿಂದ ಸಂವಿಧಾನದ ಪೀಠಿಕೆ ಓದಿಸಲಾಗುತ್ತಿದೆ.
ಮದ್ದೂರು ತಾಲೂಕು ಕಸಾಪದಲ್ಲಿ ಎರಡು ವರ್ಷ ಇಲ್ಲದ ಗೊಂದಲ ಈಗೇಕೆ...?
ಮದ್ದೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ, ಕುವೆಂಪು ಜಯಂತಿ, ಹುತಾತ್ಮ ದಿನಾಚರಣೆ, ನಾಡು ನುಡಿಗಾಗಿ ವಿಚಾರ ಸಂಕಿರಣ, ನೆಲ, ಜಲ ಭಾಷೆಗಾಗಿ ಹೋರಾಟ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡದ ಅರಿವು ಮೂಡಿಸುವ ಕಾರ್ಯಕ್ರಮಗಳು ಸೇರಿದಂತೆ ಕಳೆದೆರಡು ವರ್ಷಗಳಿಂದ ಪರಿಷತ್ತಿನ ಚಟುವಟಿಕೆಗಳನ್ನು ವಿ.ಸಿ.ಉಮಾಶಂಕರ್ ಹಮ್ಮಿಕೊಂಡು ಬಂದಿದ್ದಾರೆ. ಎರಡು ವರ್ಷಗಳಿಂದ ಇಲ್ಲದ ಗೊಂದಲ ಹೀಗೇಕೆ ಬಂತು..?
ಶ್ರೀಹೊಳೆ ಆಂಜನೇಯಸ್ವಾಮಿಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಂದ ಪೂಜೆ
ಕದಂಬ ನದಿ ತೀರದ ಶ್ರೀಹೊಳೆ ಆಂಜನೇಯ ಸ್ವಾಮಿ ದೇಗುಲ ತನ್ನದೇ ಆದ ಇತಿಹಾಸ ಹೊಂದಿದೆ. ತಾವು ಈ ಹಿಂದೆ ದೇಗುಲಕ್ಕೆ ಭೇಟಿ ನೀಡಿದ ವೇಳೆ ನನ್ನ ಇಷ್ಟಾರ್ಥ ನೆರವೇರಲಿ ಎಂದು ಪ್ರಾರ್ಥನೆ ಮಾಡಿದ್ದೆ. ಇದಕ್ಕೆ ಭಗವಂತನ ಅನುಗ್ರಹವಾಗಿದೆ. ಈ ದೇಗುಲ ಮತ್ತಷ್ಟು ಅಭಿವೃದ್ಧಿ ಸಾಧಿಸುವ ಮೂಲಕ ಭಕ್ತರ ಬಯಕೆ ಈಡೇರಲಿ.
ಟಿಎಪಿಸಿಎಂಎಸ್ ಅಧ್ಯಕ್ಷ ಸ್ಥಾನಕ್ಕೆ ಬಿ.ಎಲ್.ದೇವರಾಜು ‘ರಾಜೀನಾಮೆ’ ನೀಡುವಂತೆ ಆಗ್ರಹ
ಜೆಡಿಎಸ್‌ನಿಂದ ಆಯ್ಕೆಯಾಗಿ ಅಧ್ಯಕ್ಷರಾಗಿದ್ದ ಬಿ.ಎಲ್.ದೇವರಾಜು ಬದಲಾದ ಕ್ಷೇತ್ರ ರಾಜಕಾರಣದಲ್ಲಿ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಪಾಳಯ ಸೇರಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಲ್ಲಿದ್ದು ಅವರಿಗೆ ನೈತಿಕತೆಯಿದ್ದರೆ ಪಕ್ಷ ತ್ಯಜಿಸಿದ ಕೂಡಲೇ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಮೇಲ್ಪಂಕ್ತಿ ಹಾಕಬೇಕಾಗಿತ್ತು. ಅಧ್ಯಕ್ಷರಾಗಿ 41 ತಿಂಗಳು ಕಳೆದಿದ್ದರೂ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿಲ್ಲ. ಇದರಿಂದ ಟಿಎಪಿಸಿಎಂಎಸ್ ಆಡಳಿತ ಯಂತ್ರ ಕೆಟ್ಟು ಹೋಗಿದೆ.
ಕಿಡಿಗೇಡಿಗಳು ಎಸೆದ ಕಲ್ಲಿನಿಂದಲೇ ‘ಕನಕದಾಸ ಪ್ರತಿಮೆ’: ಶಾಸಕ ಪಿ.ರವಿಕುಮಾರ್
ವಿಷ್ಣುವಿನ ಅವತಾರ ಕೃಷ್ಣ ಹಾಗೂ ರಾಮ. ಉಡುಪಿಯಲ್ಲಿ ಕನಕದಾಸರ ಭಕ್ತಿಗೆ ಮೆಚ್ಚಿ ಶ್ರೀಕೃಷ್ಣ ಪರಮಾತ್ಮನೇ ದರ್ಶನ ಕೊಟ್ಟಿದ್ದಾನೆ. ಅಂತಹ ಕನಕದಾಸರ ಫ್ಲೆಕ್ಸ್‌ಗೆ ಕಲ್ಲು ಹೊಡೆದಿದ್ದಾರೆ. ಕುರುಬರ ಸಂಘಕ್ಕೆ ಬೇರೆ ಕಡೆ ಜಾಗ ನೀಡುವಂತೆ ಸರ್ಕಾರವನ್ನು ಕೇಳಿದ್ದೇನೆ. ಜಾಗ ಕೊಡುವ ಭರವಸೆ ಸಿಕ್ಕಿದೆ. ಆ ಜಾಗದಲ್ಲಿ ಕಿಡಿಗೇಡಿಗಳು ಹೊಡೆದ ಕಲ್ಲುಗಳಿಂದಲೇ ಕನಕದಾಸರ ಪ್ರತಿಮೆ ನಿರ್ಮಾಣ ಮಾಡುತ್ತೇವೆ.
ಬಿಜೆಪಿಗರು ರಾಜ್ಯಕ್ಕೆ ಅನುದಾನ ತರಲು ಹೋರಾಟ ನಡೆಸಲಿ: ಕೆ.ಎಂ.ಉದಯ್
ರಾಜ್ಯ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮಾತನಾಡುವ ಮೂಲಕ ಬಿಜೆಪಿ ನಾಯಕರು ಜನರಲ್ಲಿ ಇಲ್ಲಸಲ್ಲದ ಗೊಂದಲ ಮೂಡಿಸಲು ಯತ್ನಿಸುತ್ತಿದ್ದಾರೆ. ಇವರಿಗೆ ತಾಕತ್ತಿದ್ದರೆ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಬರಬೇಕಾದ ಅನುದಾನ ತರೋಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನೆ ಮಾಡುವ ಧೈರ್ಯ ಪ್ರದರ್ಶನ ಮಾಡಲಿ.
ದಿ.ಕೆ.ಎನ್.ನಾಗೇಗೌಡರ ದೂರದೃಷ್ಟಿ ಫಲದಿಂದ ರೈತರ ಜಮೀನುಗಳಿಗೆ ಇಂದು ನೀರು: ಡಾ.ಎನ್.ಎಸ್.ರಾಮೇಗೌಡ
ದಿ.ಕೆ.ಎನ್ ನಾಗೇಗೌಡ ಅವರು ನೀರಾವರಿ ಮತ್ತು ಪಶುಸಂಗೋಪನೆ ಸಚಿವರಾಗಿ ಉತ್ತಮ ಕೆಲಸ ಮಾಡುವ ಜೊತೆಗೆ ಯಾವ ರೀತಿ ಸಾಧನೆ ಮಾಡಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಕಾಲುವೆಗಳಿಗೆ ಹೊಸ ರೂಪ ಕೊಟ್ಟು ಕೊನೆ ಭಾಗಕ್ಕೆ ನೀರು ತಲುಪಿಸಲು ಶ್ರಮಿಸಿದ್ದರು. ಅಂದು ಸಚಿವರ ದೂರದೃಷ್ಟಿ ಫಲವೇ ಇಂದು ರೈತರ ಕೊನೆ ಭಾಗದ ಜಮೀನುಗಳಿಗೆ ಸಮರ್ಪಕ ನೀರು ಸಿಗುಂತಾಗಿದೆ.
ಸವಿತ ಸಮುದಾಯ ಎಲ್ಲ ವರ್ಗ, ಜಾತಿ, ಧರ್ಮದ ಜನರ ಸೇವೆ ಮಾಡುತ್ತಿದೆ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ
ಸವಿತ ಸಮುದಾಯ ಸಮಾಜದಲ್ಲಿ ಯಾವುದೇ ಜಾತಿ ಭೇದವಿಲ್ಲದೆ ಎಲ್ಲ ಸಮುದಾಯಗಳ ಜನರ ಸೇವೆ ಮಾಡಿಕೊಂಡು ಬರುತ್ತಿದ್ದೇವೆ. ಆದರೆ, ಈ ಸಮುದಾಯ ಸಾಕಷ್ಟು ನಿರ್ಲಕ್ಷ್ಯಗೆ ಒಳಗಾಗಿದೆ. ಹಾಗಾಗಿ ಸರ್ಕಾರಗಳು ಹಾಗೂ ಶಾಸಕರು ಸಮುದಾಯದ ಅಭಿವೃದ್ಧಿಗೆ ಸಹಕಾರ ನೀಡಬೇಕು. ಪಟ್ಟಣದಲ್ಲಿ ಇರುವ ಸಮುದಾಯದ ರಾಮಮಂದಿರದ ಬಳಿ ಸವಿತ ಸಮುದಾಯ ಹಾಗೂ ಮಂಗಳವಾಧ್ಯ ಕಲಾವಿದರಿಗೆ ಸಮುದಾಯ ಭವನ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದ್ದೀರಿ. ಆ ಬಗ್ಗೆ ಪ್ರಯತ್ನಿಸಲಾಗುವುದು.
  • < previous
  • 1
  • ...
  • 842
  • 843
  • 844
  • 845
  • 846
  • 847
  • 848
  • 849
  • 850
  • ...
  • 903
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved