• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ನಡೆದ ರಸಪ್ರಶ್ನೆ ಸ್ಪರ್ಧೆ
ಭಾರತೀ ವಿದ್ಯಾ ಸಂಸ್ಥೆ ಶೈಕ್ಷಣಿಕವಾಗಿಯು ಪ್ರಗತಿ ಸಾಧಿಸುವ ಜತೆಗೆ ಸಾಮಾಜಿಕ ಚಿಂತನೆಯ ನೆಲೆಗಟ್ಟಿನಲ್ಲಿ ಚಿಂತಿಸುತ್ತ ಹತ್ತು ಹಲವು ಸಾಮಾಜಿಕ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತ ಬಂದಿದೆ. ಮೊದಲ ಭಾಗವಾಗಿ ವಿದ್ಯಾರ್ಥಿನಿಯರಿಗಾಗಿ ಲಿಖಿತ ರಸಪ್ರಶ್ನೆ ಆಯೋಜಿಸಿದ್ದು ಉತ್ತಮ ಸ್ಪಂದನೆ ದೊರತಿದೆ.
ಒಳ ಮೀಸಲು ಜಾರಿ ಮುನ್ನ ಬ್ಲಾಕ್‌ಲಾಗ್ ಹುದ್ದೆ ಭರ್ತಿ ಬೇಡ: ಅಂದಾನಿ
ಮಹದೇವಪ್ಪ ಅವರಲ್ಲಿ ಮೊದಲಿನಿಂದಲೂ ಒಳಮೀಸಲಾತಿ ವಿರೋಧಿ ಮನಸ್ಥಿತಿ ಇದೆ. ಬಾಯಲ್ಲಿ ಮತ್ತು ಪ್ರಚಾರದಲ್ಲಿ ಸಂವಿಧಾನ ರಕ್ಷಣೆಗಾಗಿ ನೂರಾರು ಕೋಟಿ ರು. ಖರ್ಚು ಮಾಡುತ್ತಿರುವ ಸಚಿವ ಮಹದೇವಪ್ಪರವರು ಸಂವಿಧಾನವನ್ನು ಜಾರಿ ಮಾಡುವಲ್ಲಿ ಇರುವ ಬದ್ಧತೆ ಪ್ರದರ್ಶಿಸುತ್ತಿಲ್ಲ. ಸಂವಿಧಾನ ವಿರೋಧಿ ಮತ್ತು ಸರ್ಕಾರದ ನೀತಿಗಳ ವಿರೋಧಿಯಾದಂತ ಎಚ್.ಸಿ. ಮಹದೇವಪ್ಪ ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು.
ಮಂಡ್ಯ ವೈದ್ಯಕೀಯ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಕ್ರಮ : ಸಚಿವ ಎನ್.ಚಲುವರಾಯಸ್ವಾಮಿ

ಹಾಲಿ ಮಂಡ್ಯ ವೈದ್ಯಕೀಯ ಆಸ್ಪತ್ರೆಯಲ್ಲಿ 400 ಹಾಸಿಗೆಗಳಿಗೆ ಅನುಮೋದನೆ ಇದ್ದರೂ ಸಹ 800ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇದನ್ನು 850 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿಸುವ ಅಗತ್ಯ ಇದೆ ಎಂದು ಸಚಿವ ಚಲುವರಾಯಸ್ವಾಮಿ ಸಭೆಯ ಗಮನಸೆಳೆದರು.

೫ ವರ್ಷಗಳಿಂದ ತೀರುವಳಿಯಾಗದ ಪಿಎಸ್‌ಎಸ್‌ಕೆ ಸಾಲ: ಪ್ರಮುಖ್ ಚಂದನ್
ಗುತ್ತಿಗೆ ಪಡೆದ ನಿರಾಣಿ ಸಮೂಹ ಸಂಸ್ಥೆ ವಾರ್ಷಿಕವಾಗಿ ಪಾವತಿಸುವ ಗುತ್ತಿಗೆ ಮೊತ್ತ ೧ ಕೋಟಿ ರು.ನಲ್ಲಿ ಕಾರ್ಖಾನೆಯಲ್ಲಿರುವ ಸಿಬ್ಬಂದಿ ವೇತನ, ಇತರೆ ವ್ಯವಹಾರಗಳಿಗೆ ಖರ್ಚಾಗಿ ಹೋಗುತ್ತಿದೆ. ಇದರಿಂದ ಸಾಲ ಅಥವಾ ಸಾಲದ ಮೇಲಿನ ಬಡ್ಡಿಯಾಗಲೀ ತೀರುವಳಿಯಾಗದೆ ದಿನದಿಂದ ದಿನಕ್ಕೆ ಬಡ್ಡಿ ಹೆಚ್ಚುತ್ತಲೇ ಹೋಗುತ್ತಿದೆ. ಇದರಿಂದ ಕಾರ್ಖಾನೆಯನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ದೂಡಿದಂತಾಗುತ್ತದೆ.
ಹೇಮಾವತಿ ಜಲಾಶಯದಿಂದ ನೀರು ಹರಿಸಿ, ರೈತರ ಬೆಳೆ ರಕ್ಷಿಸಿ
ಬೆಳೆದು ನಿಂತಿರುವ ಬೆಳೆಗಳ ಸಂರಕ್ಷಣೆಗೆ ಹೇಮಾವತಿ ಜಲಾಶಯದಿಂದ ಎಡದಂಡೆ ಕಾಲುವೆಗೆ ನೀರು ಹರಿಸಿ ತಾಲೂಕಿನ ಕೆರೆ-ಕಟ್ಟೆಗಳನ್ನು ತುಂಬಿಸಿ, ರೈತರ ಬೆಳೆಗಳನ್ನು ರಕ್ಷಿಸುವಂತೆ ಶಾಸಕ ಎಚ್.ಟಿ.ಮಂಜು ರಾಜ್ಯ ವಿಧಾನಸಭೆಯಲ್ಲಿ ಆಗ್ರಹಿಸಿದರು. ತಾಲೂಕಿನ ಸಾವಿರಾರು ಎಕರೆ ಪ್ರದೇಶದಲ್ಲಿ ಕಬ್ಬು, ಭತ್ತ ಮತ್ತು ತೆಂಗು ಮತ್ತಿತರ ತೋಟಗಾರಿಕಾ ಬೆಳೆಗಳ ರಕ್ಷಣೆ ಮಾಡಿಕೊಳ್ಳಲು ರೈತರು ನೀರಿಗಾಗಿ ಕಾಯುತ್ತಿದ್ದಾರೆ.
ಮಾರ್ಚ್‌ 9 ರಂದು ಬಿ.ಎಂ.ಪಬ್ಲಿಕ್ ಸ್ಕೂಲ್ ಉದ್ಘಾಟನೆ: ಎಂ.ರಾಮಕೃಷ್ಣ
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರೆಯಬೇಕೆಂಬ ಉದ್ದೇಶದೊಂದಿಗೆ ತಂದೆ ತಾಯಿ ಅವರ ಹೆಸರಿನಲ್ಲಿ ಶಾಲೆ ಆರಂಭಿಸಲಾಗುತ್ತಿದೆ. ಮಳವಳ್ಳಿ ತಾಲೂಕಿನಲ್ಲಿಯೇ ಮೊದಲ ಸಿಬಿಎಸ್‌ಸಿ ಪಠ್ಯಕ್ರಮ ಹೊಂದಿರುವುದರ ಜೊತೆಗೆ ಮೂಲ ಸೌಲಭ್ಯ ಹೊಂದಿರುವ ಸುಸರ್ಜಿತ ಶಾಲೆಯಯಾಗಿದೆ.
ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ವಿಫಲ
ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಬಿಂಬಿಸುತ್ತಾ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸದೆ ಜನರನ್ನು ವಂಚಿಸುತ್ತಿದೆ. ವಿದ್ಯುತ್, ಕುಡಿಯುವ ನೀರಿನ ದರ, ನೋಂದಣಿ ಶುಲ್ಕ, ಮದ್ಯದ ಬೆಲೆ ಹೀಗೆ ಎಲ್ಲವನ್ನೂ ಏರಿಸಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯೇ ಇಲ್ಲ.
ಪ್ರತಿಯೊಬ್ಬರೂ ಕಿವಿ ರಕ್ಷಣೆ ಮಾಡಿಕೊಳ್ಳುವುದು ಅಗತ್ಯ: ಎಸ್.ಡಿ.ಬೆನ್ನೂರ್
ಕಿವಿಗೆ ಹಾನಿಕಾರಕ ಔಷಧಿಗಳನ್ನು ಹಾಕಬಾರದು ಕಿವಿಯ ರಕ್ಷಣೆಗಾಗಿ ಕಲುಷಿತ ನೀರಿನಲ್ಲಿ ಈಜಾಡಬಾರದು. ಅತ್ಯಂತ ಜೋರಾದ ಶಬ್ದಗಳಿಂದ ದೂರವಿರಿ. ಕಿವಿನೋವು ಇತರೆ ತೊಂದರೆ ಕಂಡು ಬಂದಲ್ಲಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಕಿವಿ, ಮೂಗು, ಗಂಟಲು ತಜ್ಞರನ್ನು ಸಂಪರ್ಕಿಸಿ.
ಕಾನೂನಿನ ಅರಿವಿದ್ದಾಗ ದೌರ್ಜನ್ಯ ಮೆಟ್ಟಿ ನಿಲ್ಲಲು ಸಾಧ್ಯ: ಎಂ.ಆನಂದ್
ಹೆಣ್ಣು ಮಕ್ಕಳ ರಕ್ಷಣೆಗಾಗಿಯೇ ಕಾನೂನುಗಳನ್ನು ಬಲಗೊಳಿಸಲಾಗಿದೆ. ಅವುಗಳನ್ನು ತಿಳಿದುಕೊಳ್ಳುವುದಕ್ಕೆ ಹೆಣ್ಣುಮಕ್ಕಳು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ತಮ್ಮ ರಕ್ಷಣೆಗಿರುವ ಕಾನೂನನ್ನು ಅರಿತುಕೊಳ್ಳುವುದಕ್ಕೆ ಹೆಚ್ಚು ಗಮನಹರಿಸಬೇಕು. ತಾವು ಕಾನೂನಿನ ಅರಿವನ್ನು ಹೊಂದುವುದಲ್ಲದೆ ಇತರರಿಗೂ ಅದನ್ನು ತಿಳಿಸಿಕೊಡಬೇಕು
ನೀರಿನ ಸಮಸ್ಯೆ ಪರಿಹಾರಕ್ಕೆ ಶಾಸಕರು ಒಗ್ಗಟ್ಟಿನ ಹೋರಾಟ ನಡೆಸಬೇಕು: ರೈತ ಸಂಘ ಆಗ್ರಹ
ವಿಧಾನಸಭೆಯಲ್ಲಿ ಹೇಮಾವತಿ ನೀರಿಗಾಗಿ ಶಾಸಕ ಎಚ್.ಟಿ.ಮಂಜು ಸದನದಲ್ಲಿ ಧ್ವನಿಯೆತ್ತಿದಾಗ ಅವರ ಧ್ವನಿ ಏಕಾಂಗಿಯಾಗಿತ್ತು. ಹೇಮಾವತಿ ಜಲಾನಯನ ಪ್ರದೇಶಕ್ಕೆ ಸೇರಿದ ನಾಗಮಂಗಲದ ಶಾಸಕ ಹಾಗೂ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಲಾನಯನ ಪ್ರದೇಶ ವ್ಯಾಪ್ತಿ ಯಾವುದೇ ಶಾಸಕರು ರೈತರ ಹಿತಕ್ಕಾಗಿ ಧ್ವನಿಯೆತ್ತಲ್ಲಿಲ್ಲ.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 673
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved