ಮಂಗಳೂರು: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

| Published : Jan 25 2025, 01:04 AM IST

ಸಾರಾಂಶ

ಕುಟುಂಬ ಕಲ್ಯಾಣ ಅಧಿಕಾರಿ/ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ದೀಪಾಪ್ರಭು ಅವರು ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ತಡೆಗಟ್ಟುವಿಕೆ, ಫೋಕ್ಸೋ ಕಾಯ್ದೆ, ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ, ಜಿಲ್ಲೆಯಲ್ಲಿರುವ ಪ್ರಸ್ತುತ ಲಿಂಗಾನುಪಾತ ಹಾಗೂ ಹಿಂದಿನ ಲಿಂಗಾನುಪಾತ, ಇದರ ಸರಿದೊಗಿಸುವಲ್ಲಿ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಆರ್.ಎ.ಪಿ.ಸಿ.ಸಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಸಸ್ಯಕ್ಕೆ ನೀರು ಸೂಸಿ, ನಂತರ ಹೆಣ್ಣು ಮಗುವಿನ ಸಂಕೇತವನ್ನು ಸೂಚಿಸುವ ಪಿಂಕ್ ಬಲೂನುಗಳನ್ನು ಹಾರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಹೆಣ್ಣು ಮಗುವಿನ ಪ್ರಾಮುಖ್ಯತೆ ಆಕೆ ಕುಟುಂಬದಲ್ಲಿ, ಉದ್ಯೋಗ ಕ್ಷೇತ್ರದಲ್ಲಿ ನಿರ್ವಹಿಸುತ್ತಿರುವ ಹಲವು ಜವಾಬ್ದಾರಿಗಳ ಮೂಲಕ ಹೆಣ್ಣು ಸಂಸಾರದ ಕಣ್ಣು ಎಂಬುದರ ಮೂಲಕ ಯಶಸ್ವಿ ಮಹಿಳೆಯಾಗಿ, ತಾಯಿಯಾಗಿ ಗುರುತಿಸಿಕೊಂಡಿದ್ದಾಳೆ ಎಂದರು.ಮುಖ್ಯ ಅತಿಥಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ರಾಜೇಶ್ ಅಧಿಕಾರಿ, ಹೆಣ್ಣು ಮಗುವಿನ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು.

ಕುಟುಂಬ ಕಲ್ಯಾಣ ಅಧಿಕಾರಿ/ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ದೀಪಾಪ್ರಭು ಅವರು ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ತಡೆಗಟ್ಟುವಿಕೆ, ಫೋಕ್ಸೋ ಕಾಯ್ದೆ, ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ, ಜಿಲ್ಲೆಯಲ್ಲಿರುವ ಪ್ರಸ್ತುತ ಲಿಂಗಾನುಪಾತ ಹಾಗೂ ಹಿಂದಿನ ಲಿಂಗಾನುಪಾತ, ಇದರ ಸರಿದೊಗಿಸುವಲ್ಲಿ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಡಾ. ನವೀನ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್‍ಚಂದ್ರ ಕುಲಾಲ್ ಭಾಗವಹಿಸಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ ನಿರೂಪಿಸಿದರು.