ಸಾರಾಂಶ
ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಇಲ್ಲಿನ ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಸವನಕೊಪ್ಪದ ಮಂಜುನಾಥ್ ಇತ್ತೀಚಿಗೆ ಆಯ್ಕೆಯಾದರು.ಈ ಮೊದಲು ಅಧ್ಯಕ್ಷರಾಗಿದ್ದ ಜಿ ಎಸ್ ನಾಗರಾಜ್ ತಮ್ಮ ಅಧ್ಯಕ್ಷ ಸ್ಥಾನಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನದಲ್ಲಿದ್ದ ಜಿ ಜಿ ಮಲ್ಲಿಕಾ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಗೌಡಳ್ಳಿ ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿಯ ಕಚೇರಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಯಿತು. ಚುನಾವಣೆ ಪ್ರಕ್ರಿಯೆಗೆ ಬಸವನಕೊಪ್ಪದ ಮಂಜುನಾಥ್ ಅಧ್ಯಕ್ಷ ಸ್ಥಾನಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕೊರ್ಲಳ್ಳಿ ಗ್ರಾಮದ ಕೆ ಎಂ ರೋಹಿಣಿ ನಾಮಪತ್ರ ಸಲ್ಲಿಸಿದರು. ಉಳಿದಂತೆ ಯಾರೂ ನಾಮಪತ್ರ ಸಲ್ಲಿಸದಿದ್ದರಿಂದ ಇವರು ಅವಿರೋಧವಾಗಿ ಆಯ್ಕೆಯಾದರು.
ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ ಕೆ ಸುಮಾ, ಗೌರಿ, ಜಿ ಜಿ ಗಣೇಶ್, ವಿಶಾಲಾಕ್ಷಿ, ಅಜ್ಜಳ್ಳಿ ನವೀನ್, ಸಿ ಇ ವೆಂಕಟೇಶ್ ಚುನಾವಣೆಯಲ್ಲಿ ಭಾಗವಹಿಸಿದ್ದರು. ಗ್ರಾಮ ಪಂಚಾಯಿತಿ ಪಿಡಿಓ ಲಿಖಿತಾ, ಚುನಾವಣಾ ಅಧಿಕಾರಿಯಾಗಿ ಸೋಮವಾರಪೇಟೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನಾಧಿಕಾರಿ ಶ್ರೀದೇವಿ ಕಾರ್ಯನಿರ್ವಹಿಸಿದ್ದರು.ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಸ್ಥಳೀಯ ಮುಖಂಡರಾದ ಗೌಡಳ್ಳಿ ವ್ಯವಸಾಯ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್ ಬಿ ಭರತ್ ಕುಮಾರ್, ಮಾಜಿ ಜಿ.ಪಂ. ಸದಸ್ಯ ಬಿ ಜೆ ದೀಪಕ್, ಕೊಡಗು ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷ ಮೊರಿಕಲ್ಲು ಗಿರೀಶ್ ಮಲ್ಲಪ್ಪ, ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಕೂಗೆಕೋಡಿ ಆದಿತ್ಯ, ಗೌಡಳ್ಳಿ ಸುನಿಲ್ ಕುಮಾರ್, ಶುಂಠಿ ಗುರುಪ್ರಸಾದ್ ಮತ್ತಿತರರು ಶುಭ ಹಾರೈಸಿದರು.