ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಘೋಷವಾಕ್ಯದೊಂದಿಗೆ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಆವರಣದಲ್ಲಿ ದೇಶದ ಐಕ್ಯ ಮಂತ್ರ ಪಠಿಸಿ ಸಾಮೂಹಿಕ ಯೋಗ ಪ್ರದರ್ಶನ ಮಾಡಲಾಯಿತು.ಬಿವಿವಿ ಸಂಘದ ಕಲಾ,ವಿಜ್ಞಾನ, ವಾಣಿಜ್ಯ, ಶಿಕ್ಷಣ ಮಹಾವಿದ್ಯಾಲಯಗಳು ಮತ್ತು ಆಯುರ್ವೇದಿಕ್, ಹೋಮಿಯೋಪಥಿ ಕಾಲೇಜು ಹಾಗೂ ನರ್ಸಿಂಗ್, ಪಾಲಿಟೆಕ್ನಿಕ್, ಅಕ್ಕಮಹಾದೇವಿ ಕಾಲೇಜು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಸಹಯೋಗದಲ್ಲಿ 45 ನಿಮಿಷಗಳ ಕಾಲ ವಿವಿಧ ಆಸನಗಳನ್ನು ಪ್ರದರ್ಶಿಸುವ ಮುಲಕ ಯೋಗದ ಮಹತ್ವ ಸಾರಿದರು.
ಪ್ರದರ್ಶನದಲ್ಲಿ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ 4 ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡು ತಾಡಾಸನ, ವೃಕ್ಷಾಸನ, ಪಾದ ಹಸ್ತಾಸನ ಸೇರಿದಂತೆ ವಿವಿಧ ಆಸನಗಳನ್ನು ಆಯುರ್ವೇದಿಕ್ ಮಹಾವಿದ್ಯಾಲಯದ ಡಾ.ಆರ್.ಬಿ.ಹೊಸಮನಿ ಮತ್ತವರ ತಂಡದ ಮಾರ್ಗದರ್ಶನದಲ್ಲಿ ಯೋಗ ಪ್ರದರ್ಶಿಸಲಾಯಿತು.ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಕಾಲೇಜುಗಳ ಆಡಳಿತ ಮಂಡಳಿಗಳ ಕಾರ್ಯಾಧ್ಯಕ್ಷ ಗುರುಬಸವ ಸೂಳಿಬಾವಿ, ಆಯುಷ್ ವೈದ್ಯಕಿಯ ಕಾಲೇಜುಗಳ ಮತ್ತು ಔಷಧ ವಿಜ್ಞಾನ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಸಾಸನೂರ, ಹೈಸ್ಕೂಲ್ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಮಹಾಂತೇಶ ಶೆಟ್ಟರ, ಸಂಘದ ಸದಸ್ಯರು, ಬಿಟಿಡಿಎ ಮಾಜಿ ಅಧ್ಯಕ್ಷ ಜಿ.ಎನ್. ಪಾಟೀಲ.ಸಿದ್ದರಾಮ ಮನಹಳ್ಳಿ, ಸಂಘದ ಆಡಳಿತಾಧಿಕಾರಿ ಡಾ.ವಿಜಯಕುಮಾರ ಕಟಗಿಹಳ್ಳಿಮಠ ಸೇರಿದಂತೆ ವಿವಿಧ ಮಹಾವಿದ್ಯಾಲಯಗಳ ಪ್ರಾಚಾರ್ಯರು, ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ನವನಗರದ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಹಾಗೂ ಹಾನಗಲ್ ಕುಮಾರೇಶ್ವರ ಆಸ್ಪತ್ರೆ ಅವರಣದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಬಿವಿವಿ ಸಂಘದ ವೈದ್ಯಕೀಯ ಮಹಾವಿದ್ಯಾಲಯಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ (ಬೇವೂರ) ನೇತೃತ್ವ ವಹಿಸಿದ್ದರು, ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ದಂತ ಮಹಾವಿದ್ಯಾಲಯ, ನರ್ಸಿಂಗ್ ಕಾಲೇಜು, ಫಿಸಿಯೋಥೆರೆಪಿ ಕಾಲೇಜುಗಳ ಪ್ರಾಚಾರ್ಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಯೋಗ ಪರಿಣತ ವೈದ್ಯರಾದ ಡಾ.ಅಶೋಕ ಬಡಕಲಿ, ಡಾ.ಎಸ್.ಎಸ್. ದೊಡ್ಡಮನಿ ಮತ್ತು ಡಾ.ಹಿರನ್ಮಯಿ ಬ್ರಿಡ್ ನಿರ್ದೇಶನ ಮತ್ತು ಪ್ರದರ್ಶನ ನೀಡಿದರು.ವಿದ್ಯಾಗಿರಿಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಬಿವಿವಿ ಸಂಘದ ಗೌರವ ಕಾರ್ಯದರ್ಶಿಗಳಾದ ಮಹೇಶ ಅಥಣಿ ನೇತೃತ್ವದಲ್ಲಿ ವಿವೇಕಾನಂದ ಯೋಗ ವಿಜ್ಞಾನ ಕೇಂದ್ರದ ಸಂಗಣ್ಣ ಕುಪ್ರಸ್ತ ಮತ್ತವರ ತಂಡ ಯೋಗ ಪ್ರದರ್ಶನದ ಕಾರ್ಯಕ್ರಮ ನಡೆಸಿಕೊಟ್ಟಿತು. ಬಸವೇಶ್ವರ ಎಂಜಿಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು, ಸಾರ್ವಜನಿಕರು ಸಾವರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.