ಸಾರಾಂಶ
ಲೋಕಸಭಾ ಚುನಾವಣಾ ನಿಮಿತ್ತವಾಗಿ ದೇವರಹಿಪ್ಪರಗಿ ಮತಕ್ಷೇತ್ರದ ಜಾತ್ಯತೀತ ಜನತಾದಳ(ಜೆಡಿಎಸ್) ಪಕ್ಷದ ಮುಖಂಡರುಗಳ ಹಾಗೂ ಕಾರ್ಯಕರ್ತರ ಸಭೆಯನ್ನು ಏ.7ರಂದು ಮತಕ್ಷೇತ್ರದ ಕುದರಿ ಸಾಲವಾಡಗಿ ಗ್ರಾಮದಲ್ಲಿ ಆಯೋಜಿಸಲಾಗಿದೆ.
ತಾಳಿಕೋಟೆ : ಲೋಕಸಭಾ ಚುನಾವಣಾ ನಿಮಿತ್ತವಾಗಿ ದೇವರಹಿಪ್ಪರಗಿ ಮತಕ್ಷೇತ್ರದ ಜಾತ್ಯತೀತ ಜನತಾದಳ(ಜೆಡಿಎಸ್) ಪಕ್ಷದ ಮುಖಂಡರುಗಳ ಹಾಗೂ ಕಾರ್ಯಕರ್ತರ ಸಭೆಯನ್ನು ಏ.7ರಂದು ಮತಕ್ಷೇತ್ರದ ಕುದರಿ ಸಾಲವಾಡಗಿ ಗ್ರಾಮದಲ್ಲಿ ಆಯೋಜಿಸಲಾಗಿದೆ. ಪಕ್ಷದ ಮುಖಂಡರುಗಳು ಮತ್ತು ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಬೇಕೆಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ(ಕು.ಸಾಲವಾಡಗಿ) ಅವರು ತಿಳಿಸಿದರು.
ಶುಕ್ರವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಗೆ ಗ್ರಾಮದ ಶ್ರೀ ಮಹಾದೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಸಭೆಯಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆಗಳು ನಡೆಯಲಿವೆ.
ನಾವುಗಳು ಕೇವಲ ವಿಧಾನಸಭೆ ಚುನಾವಣೆ ಅಷ್ಟೇ ಅಲ್ಲ ಪ್ರತಿಯೊಂದು ಚುನಾವಣೆಯನ್ನು ಸವಾಲಾಗಿ ತೆಗೆದುಕೊಳ್ಳುವುದು ಅವಶ್ಯವಾಗಿದೆ. ಸದ್ಯ ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷವನ್ನು ಈ ಚುನಾವಣೆಯಲ್ಲಿ ಅಲೈನ್ಸ್ ಮಾಡಿದ್ದರಿಂದ ಅಭ್ಯರ್ಥಿಗಳ ಗೆಲವಿನಲ್ಲಿ ನಮ್ಮ ಜೆಡಿಎಸ್ ಪಕ್ಷದ ಕಾರ್ಯಕರ್ತರ ಮುಖಂಡರ ತಾಕತ್ತು ಪ್ರದರ್ಶನ ತೋರಿಸಬೇಕಿದೆ ಎಂದರು.
ಈ ಚುನಾವಣೆಗೆ ಸಂಬಂಧಿಸಿ ಕ್ಷೇತ್ರದ ಜೆಡಿಎಸ್ ಪಕ್ಷದ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಮುಕ್ತವಾಗಿ ಸಮಾಲೋಚನೆ ಮಾಡುವುದರೊಂದಿಗೆ ಚುನಾವಣೆಗೆ ಸಂಬಂಧಿಸಿ ಕ್ಷೇತ್ರದ ಪ್ರತಿಬೂತ್ ಮಟ್ಟದಲ್ಲಿ ಯಾವ ರೀತಿ ಕೆಲಸ ಕಾರ್ಯಗಳನ್ನು ಮಾಡಬೇಕೆಂಬ ಸಲಹೆ ಸೂಚನೆಗಳನ್ನು ನೀಡಲು ಜಿಲ್ಲಾ ಚುನಾವಣಾ ಉಸ್ತುವಾರಿ ಮಾಜಿ ಶಾಸಕ ದೇವಾನಂದ ಚವ್ಹಾಣ, ಬಿ.ಡಿ.ಪಾಟೀಲ, ಅಪ್ಪುಗೌಡ ಪಾಟೀಲ ಮನಗೂಳಿ, ಸುನೀತಾ ಚವ್ಹಾಣ, ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ತಾಲೂಕಾಧ್ಯಕ್ಷ ಮಡುಸಾಹುಕಾರ ಬಿರಾದಾರ ಅವರು ಆಗಮಿಸುವರು ಎಂದರು.