ಸಾರಾಂಶ
ದಾವಣಗೆರೆ: ಹರಿಹರ ತಾಲೂಕಿನ ಹಾಲು ಉತ್ಪಾಕರ ಸಂಘಗಳ ಕಾರ್ಯದರ್ಶಿಗಳಿಗೆ ದಾವಣಗೆರೆ ತಾಲೂಕು ದೊಡ್ಡಬಾತಿಯ ಗ್ರಾಮದ ಹಾಲು ಶೀಥಲೀಕರಣ ಘಟಕದ ಡೇರಿಯಲ್ಲಿ ಬೆಂಗಳೂರಿನ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಸಹಕಾರ ಇಲಾಖೆ, ಜಿಲ್ಲಾ ಸಹಕಾರ ಒಕ್ಕೂಟ, ಶಿದಾಚಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ಶಿವಮೊಗ್ಗದಿಂದ ಒಂದು ದಿನದ ಜಿಲ್ಲಾ ವಿಶೇಷ ಕಾರ್ಯದಕ್ಷತೆ ತರಬೇತಿ ಶಿಬಿರ, ಕಾರ್ಯಾಗಾರ ನಡೆಯಿತು.
ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಅಧ್ಯಕ್ಷ ಸಿರಿಗೆರೆ ರಾಜಣ್ಣ ಅಧ್ಯಕ್ಷತೆ ಕಾರ್ಯಕ್ರಮದಲ್ಲಿ ಶಿಮುಲ್ ನಿರ್ದೇಶಕ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಜಗದೀಶಪ್ಪ ಬಣಕಾರ್ ಉದ್ಘಾಟಿಸಿ ಮಾತನಾಡಿದರು. ಶಿಮುಲ್ ನಿರ್ದೇಶಕ ಎಚ್.ಕೆ.ಬಸಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಜಿ.ಸುರೇಶ, ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಕೆ.ಎಚ್.ಮಹೇಶ, ಶಿಮುಲ್ ಉಪ ವ್ಯವಸ್ಥಾಪಕಿ ಜೆ.ಎಸ್.ಸ್ಮಿತಾ, ದೊಡ್ಡಬಾತಿ ಡೈರಿ ಮೇಲ್ವಿಚಾರಕಿ, ಶಿಮುಲ್ ಸಹಾಯಕ ವ್ಯವಸ್ಥಾಪಕಿ ಶೀಲಾ ಪಾಟೀಲ್, ವಿಸ್ತರಣಾಧಿಕಾರಿ ಎಂ.ಸಿ. ಆನಂದ ಸ್ವಾಮಿ ಕಾರ್ಯಾಗಾರದಲ್ಲಿ ಮಾತನಾಡಿದರು.ಸಹಕಾರ ಇಲಾಖೆ ನಿವೃತ್ತ ಸಹಾಯಕ ನಿಬಂಧಕ ಲಿಯಾಖತ್ ಅಲಿ, ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ ಕೋಡಿಹಳ್ಳಿ, ಜಿಲ್ಲಾ ಸಹಕಾರ ಶಿಕ್ಷಕ ಕೆ.ಎಚ್. ಸಂತೋಷಕುಮಾರ, ಜಿಲ್ಲಾ ಸಹಕಾರ ಒಕ್ಕೂಟದ ವ್ಯವಸ್ಥಾಪಕ ಕೆ.ಎಂ.ಜಗದೀಶ, ದ್ವಿದಸ ಸಹಾಯಕ ವಿ.ರಂಗನಾಥ ಇತರರು ಇದ್ದರು.
- - -(** ಈ ಫೋಟೊ-ಕ್ಯಾಪ್ಷನ್ ಪ್ಯಾನೆಲ್ಗೆ ಬಳಸಿ)
-21ಕೆಡಿವಿಜಿ4:ದಾವಣಗೆರೆ ತಾಲೂಕಿನ ದೊಡ್ಡ ಬಾತಿ ಹಾಲು ಶೀಥಲೀಕರಣ ಘಟಕದ ಡೇರಿಯಲ್ಲಿ ಹರಿಹರ ತಾಲೂಕು ಹಾಲು ಉತ್ಪಾದಕರ ಸಂಘಗಳ ಕಾರ್ಯದರ್ಶಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಶಿಮುಲ್ ನಿರ್ದೇಶಕ ಜಗದೀಶಪ್ಪ ಬಣಕಾರ ಉದ್ಘಾಟಿಸಿದರು.