ಸರ್ಕಾರಿ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

| Published : Jun 14 2024, 01:12 AM IST

ಸಾರಾಂಶ

ಜಿಲ್ಲಾ ವಿಕಲ ಚೇತನರ ಇಲಾಖೆ ವತಿಯಿಂದ ನೀಡಲಾಗುವ 2023-24ನೇ ಸಾಲಿನ ಯಂತ್ರ ಚಾಲಿತ ದ್ವಿಚಕ್ರ ವಾಹನ ಹಾಗೂ ಬ್ಯಾಟರಿ ಚಾಲಿತ ವೀಲ್‌ಚೇರ್‌ಗಳನ್ನು ಫಲಾನುಭವಿಗಳಿಗೆ ಸಚಿವೆ ವಿತರಿಸಿದರು. ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೆಡಿಸಿನ್ ಕಿಟ್‌ಗಳನ್ನು ವಿತರಿಸಿದರು.

ಕನ್ನಡಪ್ರಭ ವಾರ್ತೆ ಮಣಿಪಾಲ

ಸರ್ಕಾರದ ವಿವಿಧ ಇಲಾಖೆಗಳು ನೀಡುವ ಸೌಲಭ್ಯಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿ.ಪಂ. ಸಭಾಂಗಣದಲ್ಲಿ ವಿತರಿಸಿದರು.

ಜಿಲ್ಲಾ ವಿಕಲ ಚೇತನರ ಇಲಾಖೆ ವತಿಯಿಂದ ನೀಡಲಾಗುವ 2023-24ನೇ ಸಾಲಿನ ಯಂತ್ರ ಚಾಲಿತ ದ್ವಿಚಕ್ರ ವಾಹನ ಹಾಗೂ ಬ್ಯಾಟರಿ ಚಾಲಿತ ವೀಲ್‌ಚೇರ್‌ಗಳನ್ನು ಫಲಾನುಭವಿಗಳಿಗೆ ಸಚಿವೆ ವಿತರಿಸಿದರು. ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೆಡಿಸಿನ್ ಕಿಟ್‌ಗಳನ್ನು ವಿತರಿಸಿದರು.

ನಂತರ 2023ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಗೆ ಮೊದಲ ಮೂರು ಸ್ಥಾನಗಳಿಸಿದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಾದ ಕುಂದಾಪುರ ತಾಲೂಕಿನ ಉಪ್ಪುಂದ ಸರ್ಕಾರಿ ಜೂನಿಯರ್ ಕಾಲೇಜಿನ ಅಮೂಲ್ಯ (623 ಅಂಕ), ಬೈಂದೂರಿನ ಚಿತ್ತೂರು ಸರ್ಕಾರಿ ಪ್ರೌಢ ಶಾಲೆಯ ಚೈತನ್ಯ(623 ಅಂಕ) ಹಾಗೂ ಕಾರ್ಕಳದ ಕುಕ್ಕುಜೆ ಸರ್ಕಾರಿ ಜೂನಿಯರ್ ಕಾಲೇಜಿನ ಧನ್ಯಾ ನಾಯ್ಕ್ (622 ಅಂಕ) ಅವರಿಗೆ ಲ್ಯಾಪ್‌ಟಾಪ್ ಹಸ್ತಾಂತರಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಡಿಎಫ್ಓ ಗಣಪತಿ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.