ಮಾಲ್ಡೀವ್ಸ್‌ ಅಧ್ಯಕ್ಷರನ್ನು ಸ್ವಾಗತಿಸಿದ ಸಚಿವ ಎಂ.ಸಿ.ಸುಧಾಕರ್

| Published : Oct 10 2024, 02:22 AM IST / Updated: Oct 10 2024, 02:23 AM IST

ಮಾಲ್ಡೀವ್ಸ್‌ ಅಧ್ಯಕ್ಷರನ್ನು ಸ್ವಾಗತಿಸಿದ ಸಚಿವ ಎಂ.ಸಿ.ಸುಧಾಕರ್
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಹಾಗೂ ಅವರ ನಿಯೋಗ ಬೆಂಗಳೂರಿನ ಭೇಟಿಗಾಗಿ ಬುಧವಾರ ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ದೊಡ್ಡಬಳ್ಳಾಪುರ: ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಹಾಗೂ ಅವರ ನಿಯೋಗ ಬೆಂಗಳೂರಿನ ಭೇಟಿಗಾಗಿ ಬುಧವಾರ ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರನ್ನು ರಾಜ್ಯಉನ್ನತ ಶಿಕ್ಷಣ ಇಲಾಖೆ ಸಚಿವ ಡಾ. ಎಂ.ಸಿ.ಸುಧಾಕರ್ ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಇಂಡಿಯಾ ಮಾಲ್ಡೀವ್ಸ್ ಹೈ ಕಮಿಷನರ್ ಮುನು ಮಹವರ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಜಿ.ಸತ್ಯವತಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

9ಕೆಡಿಬಿಪಿ6- ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.