ಸಾರಾಂಶ
ಚಾಮರಾಜನಗರ : ಹಗರಣಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆಂದು ಕೆಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ವಿಭಿನ್ನವಾಗಿ ಗುರುತಿಸಿಕೊಂಡಿದ್ದರು. ಮೊದಲ ಅವಧಿಯಲ್ಲಿ ಈ ರೀತಿ ಆರೋಪಗಳು ಅವರ ಮೇಲೆ ಬಂದಿರಲಿಲ್ಲ. ಈಗ ಅವರ ಸ್ಥಿತಿ ಸಹವಾಸದಿಂದ ಸನ್ಯಾಸಿ ಕೆಟ್ಟ ಎಂಬಂತಾಗಿದೆ ಎಂದರು.
ಹಗರಣಗಳಿಂದ ಅವರಿಗೆ ಮುಜುಗರ ಉಂಟಾಗಿದೆ. ಅದಕ್ಕೆ ವಿಚಲಿತರಾಗಿ ಬೇರೆಯವರ ಮೇಲೆ ಕೆಸರೆರಚುತ್ತಿದ್ದಾರೆ. ನಮ್ಮ ಸರ್ಕಾರದ ಅವಧಿಯ ಆರೋಪಗಳನ್ನು ತನಿಖೆಗೆ ಕೊಡಲಿ. ಯಾರಾದರೂ ಅವರಿಗೆ ಬೇಡ ಎಂದಿದ್ದೇವಾ? ಮೊದಲು ಅವರ ಮೇಲೆ ಬಂದಿರುವ ಆರೋಪವನ್ನೂ ಸಿಬಿಐ ತನಿಖೆಗೆ ಕೊಡಲಿ ಎಂದು ಟಾಂಗ್ ನೀಡಿದರು.
ಮುಡಾದಲ್ಲಿ ಪಡೆದಿರುವ 14 ಸೈಟ್ಗಳನ್ನು ಅವರು ವಾಪಸ್ ಕೊಡಲಿ, ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲಿ. ಇ.ಡಿ, ಸಿಬಿಐ ಕಾಂಗ್ರೆಸ್ ಅವಧಿಯಲ್ಲೂ ಇತ್ತು, ಈಗಲೂ ಇದೆ. ವ್ಯವಸ್ಥೆಯನ್ನು ಪ್ರಧಾನಿ ಮೋದಿ ಸರ್ಕಾರ ಪಾರದರ್ಶಕ ಮಾಡಿದೆ ಅಷ್ಟೆ ಎಂದರು.