ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ಟೆರ್ ಲೈಟ್ ಕಂಪನಿಯ ವಿರುದ್ಧ ಪ್ರತಿಭಟನೆ ನಡೆಯಿತು.

ಮೂಡುಬಿದಿರೆ: ತಾಲೂಕಿನ ಕೆಲವೆಡೆ ಕೇಂದ್ರ ಸರ್ಕಾರದ ವಿದ್ಯುತ್ ಪ್ರಸರಣಾ ಲೈನ್ ಕಾಮಗಾರಿಯ ಗುತ್ತಿಗೆ ಪಡೆದಿರುವ ಸ್ಟೆರ್ ಲೈಟ್ ಕಂಪಯು ಈಭಾಗದ ರೈತರಿಗೆ ಅನ್ಯಾಯವೆಸಗುತ್ತಿದ್ದು ರೈತರಿಗೆ ಅನ್ಯಾಯವಾದರೆ ಕಾಂಗ್ರೆಸ್ ಸಹಿಸುವುದಿಲ್ಲ. ಸ್ಟೆರ್ ಲೈಟ್ ಕಂಪನಿಯನ್ನು ನಾವು ಆಂಧ್ರಪ್ರದೇಶಕ್ಕೆ ವಾಪಾಸು ಕಳುಹಿಸಲೂ ಹಿಂಜರಿಯುವುದಿಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಎಚ್ಚರಿಸಿದ್ದಾರೆ.

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ಟೆರ್ ಲೈಟ್ ಕಂಪನಿಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಬಿಜೆಪಿಯ ಪದಾಧಿಕಾರಿಯಾಗಿರುವ ಮುಖಂಡರೊಬ್ಬರು ಹಸಿರು ಶಾಲು ಹಾಕಿಕೊಂಡು ತಾನೊಬ್ಬ ರೈತ ಮುಖಂಡ ಎಂದು ಪೋಸು ನೀಡಿ ಅಮಾಯಕ ರೈತರೊಂದಿಗೆ ನಾಟಕ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇವರಿಗೆ ನಿಜವಾಗಿಯೂ ರೈತರ ಮೇಲೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡ ಎಂದರು.

ಅಕ್ರಮ ಸಕ್ರಮ ಸಮಿತಿ, ಕೆಡಿಪಿ, ಆಶ್ರಯ ಮುಂತಾದ ಸಮಿತಿಗಳು ರಚನೆಯಾಗಿ ಎರಡು ವರ್ಷ ಸಮೀಪಿಸುತ್ತಿದೆ. ಅದರ ಅಧ್ಯಕ್ಷರಾಗಿರುವ ಶಾಸಕರು ಒಮ್ಮೆಯೂ ಒಂದೇ ಒಂದು ಮೀಟಿಂಗ್ ಮಾಡಿಲ್ಲ.ಶಾಸಕರಿಗೆ ಹತ್ತು ದಿವಸಗಳ ಗಡುವು ನೀಡುತ್ತೇವೆ. ಅದರೊಳಗೆ ಮೀಟಿಂಗ್ ಮಾಡದಿದ್ದರೆ ಅವರ ಕಚೇರಿಗೆ ನುಗ್ಗಿ ಪ್ರತಿಭಟನೆ ಮಾಡುತ್ತೇವೆ ಎಂದೂ ಎಚ್ಚರಿಸಿದರು.

ಮಾಜಿ ಸಚಿವ ಕೆ.ಅಭಯಚಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಕಾರ್ಯದರ್ಶಿ ಪುರಂದರ ದೇವಾಡಿಗ, ಮೂಡಾ ಅಧ್ಯಕ್ಷ ಹರ್ಷವರ್ಧನ ಪಡಿವಾಳ್, ಬ್ಲಾಕ್ ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಡಿ.ಶೆಟ್ಟಿ, ಪ್ರಮುಖರಾದ ಮಿತ್ತಬೈಲು ವಾಸುದೇವ ನಾಯಕ್, ರಮೇಶ್ ಶೆಟ್ಟಿ ಪಡುಮಾರ್ನಾಡು, ಚಂದ್ರಹಾಸ ಸನಿಲ್, ಟಿ.ಎನ್.ಕೆಂಬಾರೆ, ಶೌಕತ್ ಬೆಳುವಾಯಿ, ಅಬ್ದುಲ್ ಲತೀಫ್, ಜೊಸ್ಸಿ ಮಿನೇಜಸ್, ಶಶಿಧರ ಎಂ, ಹರೀಶ್ ಆಚಾರ್ಯ, ರುಕ್ಕಯ್ಯ ಪೂಜಾರಿ, ಇಕ್ಬಾಲ್ ಕರೀಮ್, ಅಲ್ತಾಫ್, ರತ್ನಾಕರ ಮೊಯ್ಲಿ, ಝಕರಿಯಾ ಯೂಸುಫ್, ರೀಟಾ ಕುಟಿನ್ಹೊ, ರೂಪಾ ಸಂತೋಷ್ ಶೆಟ್ಟಿ, ದಿಲೀಪ್ ಕುಮಾರ್ ಶೆಟ್ಟಿ, ಪದ್ಮಪ್ರಸಾದ್ ಜೈನ್, ವಸೀರ್ ಪುತ್ತಿಗೆ, ಸಲಾಮ್ ಹೊಸಂಗಡಿ, ಜಾವೆದ್ ಹೊಸಂಗಡಿ, ಮರ್ವಿನ್ ಲೋಬೋ, ಮುರಳೀಧರ ಕೋಟ್ಯಾನ್, ಅಬೂಬಕ್ಕರ್ ಶಿರ್ತಾಡಿ, ಆಳ್ವಿನ್ ಮಿನೇಜಸ್, ಆಳ್ವಿನ್ ಡಿಸೋಜ, ಸತೀಶ್ ಕೊಡಂಗಲ್,ಸಂದೀಪ್ ಅಲಂಗಾರ್ ಮತ್ತಿತರರು ಹಾಜರಿದ್ದರು.