ಮಸ್ಕಿ: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ 12 ಗ್ರಾಮಗಳಲ್ಲಿ ಶಾಲಾ ಕಟ್ಟಡ ಹಾಗೂ ರಸ್ತೆ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ₹6 ಕೋಟಿ ವೆಚ್ಚದ ಕಾಮಗಾರಿಗಳಿಗೆ ಖಾದಿ ಗ್ರಾಮೋದ್ಯೋಗ ನಿಗಮದ ಮಂಡಳಿ ಅಧ್ಯಕ್ಷ ಶಾಸಕ ಆರ್. ಬಸನಗೌಡ ತುರ್ವಿಹಾಳ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ತಾಲೂಕಿನ ಹೂವಿನಭಾವಿ, ಅಂಕುಶದೊಡ್ಡಿ ಮುಂತಾದ ಗ್ರಾಮಗಳಲ್ಲಿ ಶುಕ್ರವಾರ ಶಾಲಾ ಕೊಠಡಿ , ಸಿಸಿ ರಸ್ತೆ, ಬಿಸಿಯೂಟ ಕೊಠಡಿ ಸೇರಿದಂತೆ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮೂಲಕ ಸರ್ಕಾರ ಈ ಭಾಗದ ಅಭಿವೃದ್ಧಿಗೆ ಸಾಕಷ್ಟು ಹಣ ನೀಡುತ್ತಿದೆ. ಆ ಹಣ ಕ್ಷೇತ್ರದ ಅಭಿವೃದ್ಧಿಗೆ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ, ಮುಖಂಡರಾದ ಮಲ್ಲಿಕಾರ್ಜುನ ಪಾಟೀಲ, ನಿರುಪಾದೆಪ್ಪ ವಕೀಲ, ಆದನಗೌಡ ದಳಪತಿ ಸಂತೆಕೆಲ್ಲೂರು ಸೇರಿದಂತೆ ವಿವಿಧ ಗ್ರಾಮಗಳು ಮುಖಂಡರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಎಂಜನಿಯರ್ ಗಳು ಭಾಗವಹಿಸಿದ್ದರು.ವಿವಿಧ ಕಾಮಗಾರಿಗಳಿಗೆ ಶಾಸಕ ಆರ್. ಬಸನಗೌಡರಿಂದ ಭೂಮಿ ಪೂಜೆ
ಮಸ್ಕಿ ತಾಲೂಕಿನ ಹೂವಿನಭಾವಿ, ಅಂಕುಶದೊಡ್ಡಿ ಮುಂತಾದ ಗ್ರಾಮಗಳಲ್ಲಿ ಶುಕ್ರವಾರ ಶಾಲಾ ಕೊಠಡಿ , ಸಿಸಿ ರಸ್ತೆ, ಬಿಸಿಯೂಟ ಕೊಠಡಿ ಸೇರಿದಂತೆ ವಿವಿಧ ಕಾಮಗಾರಿಗೆ ಚಾಲನೆ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.