ಶಾಸಕ ಗಣೇಶ್‌ ಪ್ರಸಾದ್‌ ಭರ್ಜರಿ ಗೆಲುವು

| Published : Jun 27 2025, 12:48 AM IST

ಸಾರಾಂಶ

ಎಂಸಿಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ರೊಂದಿಗೆ ಕಾಂಗ್ರೆಸ್‌ ಕಾರ್ಯಕರ್ತರು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆಯಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಸಹಕಾರ ಕ್ಷೇತ್ರದಲ್ಲಿ ಮೊದಲ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಆದ ಮಾಜಿ ಶಾಸಕ ಸಿ.ಎಸ್.ನಿರಂಜನ್‌ಕುಮಾರ್‌ ತವರಲ್ಲಿ ಕಾಂಗ್ರಸ್‌ ಬೆಂಬಲಿತ ಅಭ್ಯರ್ಥಿಯಾಗಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ತಾಪಂ ಮಾಜಿ ಸದಸ್ಯ ಎಸ್.ಎಂ.ವೀರಪ್ಪ ಸ್ಪರ್ಧಿಸಿದ್ದರು. ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಹಾಗೂ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗೆ ೨೨ ಮತ ಪಡೆದರೆ ಎದುರಾಳಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಸ್.ಎಂ.ವೀರಪ್ಪ ೯ ಮತ ಪಡೆದು ಸೋಲು ಕಂಡಿದ್ದಾರೆ.

ತಾಲೂಕಿನ ಒಟ್ಟು ೩೨ ಡೆಲಿಗೇಟ್ಸ್‌ ಮತಗಳಲ್ಲಿ ಕಾಂಗ್ರೆಸ್‌ನಲ್ಲಿ ೨೨ ಮತ, ಬಿಜೆಪಿಯಲ್ಲಿ ೯ ಡೆಲಿಗೇಟ್ಸ್‌ ಮತ ಕಾಂಗ್ರೆಸ್‌ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಪಕ್ಕಾ ಬಿದ್ದಿವೆ. ಕಸಬಾ ಪಿಎಸಿಸಿ ಬ್ಯಾಂಕ್‌ ಡೆಲಿಗೇಟ್ಸ್‌ ನ್ಯಾಯಾಲದ ಮೊರೆ ಹೋಗಿ ಮತದಾನದ ಹಕ್ಕು ತಂದರೂ ಮತ ಎಣಿಕೆ ಸಮಯದಲ್ಲಿ ಪರಿಗಣಿಸಿಲ್ಲ. ಆದರೆ ಅಡ್ಡ ಮತದಾನ ಆಗಿಲ್ಲ ,ಇದು ಎರಡು ಪಕ್ಷಗಳಿಗೂ ಸಮಾಧಾನದ ಸಂಗತಿ.

ವಿಜಯೋತ್ಸವ ಸಂದರ್ಭದಲ್ಲಿ ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್.ನಂಜುಂಡಪ್ರಸಾದ್‌,ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾದ ಪಿ.ಬಿ.ರಾಜಶೇಖರ್‌,ಬಿ.ಎಂ.ಮುನಿರಾಜು,ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ,ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಸ್.ಶಿವನಾಗಪ್ಪ,‌ಎಪಿಎಂಸಿ ಅಧ್ಯಕ್ಷ ಆರ್.ಎಸ್.ನಾಗರಾಜು,ಹಾಪ್‌ ಕಾಮ್ಸ್‌ ಅಧ್ಯಕ್ಷ ಎಂ.ನಾಗೇಶ್‌,ತಾಪಂ ಮಾಜಿ ಅಧ್ಯಕ್ಷ ಎಸ್.ಎಸ್.ಮಧು,ಮಾಜಿ ಉಪಾಧ್ಯಕ್ಷ ಬಂಗಾರನಾಯಕ,ಮಾಜಿ ಸದಸ್ಯ ನೀಲಕಂಠಪ್ಪ,ಗ್ರಾಪಂ ಮಾಜಿ ಅಧ್ಯಕ್ಷ ಬಿ.ಜಿ. ಶಿವಕುಮಾರ್‌, ಜಿ.ಮಹೇಶ್‌,ಮುಖಂಡರಾದ ದೊಡ್ಡಹುಂಡಿ ಅಂಬರೀಶ್‌,ಪುನೀತ್‌,ಬಿ.ಸಿ.ಮಹದೇವಸ್ವಾಮಿ ಸೇರಿದಂತೆ ನೂರಾರು ಮಂದಿ ಇದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಹಾಗೂ ಸ್ಥಳೀಯ ಮುಖಂಡರ ಸಹಕಾರದಿಂದ ಚುನಾವಣೆಯಲ್ಲಿ ನಿಂತು ಗೆದ್ದಿದ್ದೇನೆ. ಪಕ್ಷಾತೀತವಾಗಿ ರೈತರ ಸೇವೆ ಮಾಡೋದೇ ನನ್ನ ಮುಂದಿರುವ ಗುರಿ.-ಎಂ.ಎಚ್.ಗಣೇಶ್‌ ಪ್ರಸಾದ್, ಎಂಸಿಡಿಸಿಸಿ ನೂತನ ನಿರ್ದೇಶಕ, ಶಾಸಕ