ಸಾರಾಂಶ
ಈ ಹಿಂದೆ ಕಾರ್ಖಾನೆ ಅಧಿಕಾರಿಗಳು ಕಾರ್ಮಿಕರೊಂದಿಗೆ ಸೌಜ್ಯನದಿಂದ ಪ್ರದರ್ಶಿಸುತ್ತಿಲ್ಲ ಎನ್ನುವ ದೂರುಗಳು ಕೇಳಿ ಬಂದಿದ್ದವು. ಇತ್ತೀಚೆಗೆ ಕಾರ್ಖಾನೆ ಉನ್ನತ ಅಧಿಕಾರಿಗಳ ತಂಡ ಕಾರ್ಖಾನೆಗೆ ಭೇಟಿ ನೀಡಿ ಆಡಳಿತ ಸಿಬ್ಬಂದಿ, ಕಾರ್ಮಿಕರೊಂದಿಗೆ ಸೌಜ್ಯದ ನಡವಳಿಕೆ ಪ್ರದರ್ಶಿಸುವಂತೆ ಕಿವಿಮಾತು ಹೇಳಿದ್ದರು. ಈಗ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಯಾವುದೇ ದೂರುಗಳು ಕೇಳಿ ಬರುತ್ತಿಲ್ಲ.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಹಾದನೂರು ಗ್ರಾಮದ ಬಳಿಯ ಜಾಕಿ ಗಾರ್ಮೆಂಟ್ಸ್ ಗೆ ಶಾಸಕ ಎಚ್.ಟಿ.ಮಂಜು ಭೇಟಿ ನೀಡಿ ಮಹಿಳಾ ಕಾರ್ಮಿಕರು ಮತ್ತು ನೌಕರರಿಗೆ ಒದಗಿಸಿರುವ ಮೂಲ ಸೌಕರ್ಯಗಳ ಪರಿಶೀಲನೆ ನಡೆಸಿ ಮಾಹಿತಿ ಪಡೆದರು.ಕಾರ್ಖಾನೆ ಅಧಿಕಾರಿಗಳ ತಂಡದೊಂದಿಗೆ ಪ್ರತಿ ವಿಭಾಗಕ್ಕೂ ಭೇಟಿ ನೀಡಿದ ಶಾಸಕರು ಮಹಿಳೆಯರು ಸೇರಿದಂತೆ ಎಲ್ಲಾ ಕಾರ್ಮಿಕರನ್ನು ಮಾತನಾಡಿಸಿ ಮಾಹಿತಿ ಪಡೆದರು.
ನಂತರ ಮಾತನಾಡಿ, ಈ ಹಿಂದೆ ಕಾರ್ಖಾನೆ ಅಧಿಕಾರಿಗಳು ಕಾರ್ಮಿಕರೊಂದಿಗೆ ಸೌಜ್ಯನದಿಂದ ಪ್ರದರ್ಶಿಸುತ್ತಿಲ್ಲ ಎನ್ನುವ ದೂರುಗಳು ಕೇಳಿ ಬಂದಿದ್ದವು. ಇತ್ತೀಚೆಗೆ ಕಾರ್ಖಾನೆ ಉನ್ನತ ಅಧಿಕಾರಿಗಳ ತಂಡ ಕಾರ್ಖಾನೆಗೆ ಭೇಟಿ ನೀಡಿ ಆಡಳಿತ ಸಿಬ್ಬಂದಿ, ಕಾರ್ಮಿಕರೊಂದಿಗೆ ಸೌಜ್ಯದ ನಡವಳಿಕೆ ಪ್ರದರ್ಶಿಸುವಂತೆ ಕಿವಿಮಾತು ಹೇಳಿದ್ದರು. ಈಗ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಯಾವುದೇ ದೂರುಗಳು ಕೇಳಿ ಬರುತ್ತಿಲ್ಲ ಎಂದರು.ಜಾಕಿ ಕಾರ್ಖಾನೆಯಲ್ಲಿ ಮೂರು ಸಾವಿರ ನೌಕರರು ಕೆಲಸ ಮಾಡುತ್ತಿದ್ದಾರೆ. ಮಹಿಳಾ ಕಾರ್ಮಿಕರ ಮಕ್ಕಳ ಪಾಲನೆಗಾಗಿ ಅತ್ಯುತ್ತಮ ಶಿಶು ಪಾಲನಾ ಕೇಂದ್ರ ತೆರೆದಿದ್ದಾರೆ. ಉತ್ತಮ ಕ್ಯಾಂಟೀನ್ ವ್ಯವಸ್ಥೆ ಇದೆ. ಅಧಿಕಾರಿಗಳು ಮತ್ತು ಸಾಮಾನ್ಯ ನೌಕರರಿಗೂ ಏಕ ರೂಪದ ಊಟೋಪಚಾರದ ವ್ಯವಸ್ಥೆಯಿದೆ ಎಂದು ತಿಳಿಸಿದರು.
ಕಾರ್ಖಾನೆ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಿರುವುದು ಮೆಚ್ಚುಗೆಯ ಸಂಗತಿ. ಕಾರ್ಖಾನೆ ತನ್ನ ಉತ್ಪಾದನಾ ಘಟಕವನ್ನು ವಿಸ್ತರಿಸುತ್ತಿದೆ. ಇದರಿಂದ ಸುಮಾರು ಎರಡು ಸಾವಿರ ಜನರಿಗೆ ಉದ್ಯೋಗವಕಾಶಗಳು ದೊರಕಲಿವೆ. ತಾಲೂಕಿನಲ್ಲಿ ಹೊಸ ಹೊಸ ಉದ್ದಿಮೆಗಳು ಆರಂಭವಾಗಬೇಕು. ಇದರಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ ದೊರಕುತ್ತದೆ. ತಾಲೂಕಿನ ಜನರ ಆರ್ಥಿಕ ಪ್ರಗತಿಗೆ ಸಹಕಾರಿಯಾಗುತ್ತದೆ. ಜಾಕಿ ಕಾರ್ಖಾನೆ ತನ್ನ ಹೊಸ ಘಟಕದಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆಯಲ್ಲಿ ಉದ್ಯೋಗ ನೀಡಬೇಕು ಎಂದು ಸೂಚಿಸಿದರು.ಈ ವೇಳೆ ಕಾರ್ಖಾನೆ ಎಸ್.ಜಿ.ಎಂ ಬಾಬುರಾಜ್, ಡಿ.ಜಿ.ಎಂ ಶ್ರೀಧರ್, ಪಿಡಿಒ ನವೀನ್, ತಾಪಂ ಮಾಜಿ ಸದಸ್ಯ ಮಲ್ಲೇನಹಳ್ಳಿ ಮೋಹನ್, ಮುಖಂಡ ಮರೀಗವಡ ಸೇರಿದಂತೆ ಕಾರ್ಖಾನೆಯ ಅಧಿಕಾರಿಗಳು ಮತ್ತು ಆಡಳಿತ ಸಿಬ್ಬಂದಿ ವರ್ಗದವರಿದ್ದರು.