ರಾಮನಗರ: ಬಹುತೇಕ ಸಚಿವರು ಶಾಸಕರ ಸಮಸ್ಯೆಗಳಿಗೆ ಸ್ಪಂದಿಸುವುದಿರಲಿ, ಕನಿಷ್ಠ ಗೌರವವನ್ನೂ ಕೊಡುತ್ತಿಲ್ಲ. ಹಾಗಾಗಿ ಒಂದಷ್ಟು ಸಚಿವರನ್ನು ಬದಲಾವಣೆ ಮಾಡುವಂತೆ ಎಐಸಿಸಿಗೆ ಬರೆದಿರುವ ಪತ್ರಕ್ಕೆ ನಾನು ಸಹಿ ಹಾಕಿದ್ದೇನೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸಚಿವರನ್ನೂ ಬದಲಾವಣೆ ಮಾಡಿ ಅಂತಲ್ಲ, ಒಂದಷ್ಟು ಸಚಿವರ ಬದಲಾವಣೆ ಆಗಬೇಕು. ಹಾಗಾಗಿ ಹೈಕಮಾಂಡ್‌ಗೆ ಬರೆದ ಪತ್ರಕ್ಕೆ ನಾನು ಸಹಿ ಹಾಕಿದ್ದೇನೆ. ನನಗೆ ಸಚಿವ ಸ್ಥಾನ ಬೇಕು ಅಂತ ನಾನು ಸಹಿ ಹಾಕಿಲ್ಲ. ಬದಲಾವಣೆ ಮಾಡಿ ಅಂತ ಸಹಿ ಹಾಕಿದ್ದೇನೆ ಎಂದರು.

ನನಗೆ ಶಾಸಕ ಸ್ಥಾನವೇ ಸಾಕು, ಜನಸೇವೆ ಮಾಡಿಕೊಂಡಿದ್ದೇನೆ. ಬೇರೆ ಅನುಭವಿ ಶಾಸಕರಿಗೂ ಅಕವಾಶ ನೀಡಬೇಕು. ಹಾಗಾಗಿ ಹೈಕಮಾಂಡ್‌ಗೆ ಪತ್ರ ಬರೆದು ನಮ್ಮ ಬೇಡಿಕೆ ತಿಳಿಸಿದ್ದೇವೆ. ವರಿಷ್ಠರು ನಮ್ಮ ಮನವಿಗೆ ಸ್ಪಂದಿಸುವ ಭರವಸೆ ಇದೆ ಎಂದು ಇಕ್ಬಾಲ್ ಹುಸೇನ್ ಹೇಳಿದರು.

23ಕೆಆರ್ ಎಂಎನ್ 4.ಜೆಪಿಜಿ

ಶಾಸಕ ಇಕ್ಬಾಲ್ ಹುಸೇನ್.