ಕನ್ನಡಪ್ರಭ ವಾರ್ತೆ ರಾಮನಾಥಪುರ

ಕ್ರೀಡೆ ಜೊತೆಯಲ್ಲಿ ವಿದ್ಯಾಭಾಸದ ಜೊತೆಯಲ್ಲಿ ಶಿವಶರಣರ ವಚನಗಳನ್ನು ಅಳವಡಿಸಿಕೊಂಡು ನಡೆಯುವಂತೆ ಮಾಜಿ ಸಚಿವರು ಹಾಗೂ ಶಾಸಕರು ಎ. ಮಂಜು ಕಿವಿಮಾತು ಹೇಳಿದರು. ರಾಮನಾಥಪುರ ಹೋಬಳಿಯ ಬೆಟ್ಟಸೋಗೆ ಗ್ರಾಮದ ಮೊದಲನೇ ವರ್ಷದ ಎ ಮಂಜು ಕಪ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕರಾದ ಎ ಮಂಜು ಅವರು ಚಾಲನೆ ನೀಡಿ ಮಾತನಾಡಿದ ಅವರು ಯಾವೆದೇ ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವಂತೆ ಮನವಿ ಮಾಡಿದ ಅವರು ಪ್ರತಿವರ್ಷ ಇದೇ ರೀತಿ ಯುವಕರು ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಮನವಿ ಮಾಡಿ ಕ್ರೀಡೆಯ ಜೊತೆ ಉನ್ನತ ವಿದ್ಯಾಭ್ಯಾಸ ಪಡೆದು ಮುಂದಿನ ಜೀವನ ರೂಪಿಸಿಕೊಳ್ಳುವಂತೆ ಯುವಕರಿಗೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಮುಖಂಡರು ಗ್ರಾಮ ಪಂಚಾಯಿತಿ ಸದಸ್ಯರು ಹಿರಿಯರು ಹಾಗೂ ಬಸವಪಟ್ಟಣದ ಮಾಜಿ ಉಪಾಧ್ಯಕ್ಷರಾದ ಮಹೇಂದ್ರ ಕುಮಾರ್ ರವರು ಹಾಗೂ ಕೇರಳಪುರ ಗ್ರಾಮ ಪಂಚಾಯತಿ ಸದಸ್ಯರಾದ ಶಿವುರವರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಸಿದ್ದಯ್ಯ ಉಪಸ್ಥಿತರಿದ್ದರು.