ಸಾರಾಂಶ
ಕುಶಾಲನಗರ ಕೊಪ್ಪ ಗಡಿಭಾಗದ ಅರಣ್ಯ ಇಲಾಖೆ ಚೆಕ್ಪೋಸ್ಟ್ ಬಳಿ ಪ್ರವಾಹ ಪರಿಸ್ಥಿತಿ ಮತ್ತು ನದಿ ಹರಿವಿನ ವಾಸ್ತವ ಅಂಶಗಳ ಬಗ್ಗೆ ಶಾಸಕರು ಪರಿಶೀಲನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಕುಶಾಲನಗರ ಕೊಪ್ಪ ಗಡಿಭಾಗದ ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಮತ್ತು ನದಿ ಹರಿವಿನ ವಾಸ್ತವ ಅಂಶಗಳ ಬಗ್ಗೆ ಪರಿಶೀಲನೆ ನಡೆಸಿದರು.ಗಡಿ ಭಾಗದ ವ್ಯಾಪ್ತಿಯಲ್ಲಿ ತುಂಬಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಹರಿವಿನ ಮಟ್ಟ ಹಾಗೂ ನದಿ ತಟಗಳ ತಗ್ಗು ಪ್ರದೇಶಗಳ ಸ್ಥಿತಿಗತಿ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದರು.
ಯಾವುದೇ ರೀತಿಯ ಮಾನವ ಹಾನಿ ನಡೆಯದಂತೆ ಎಚ್ಚರ ವಹಿಸುವಂತೆ ಸಮೀಪದಲ್ಲಿರುವ ಅರಣ್ಯ ಇಲಾಖೆ ತಪಾಸಣಾ ಕೇಂದ್ರದ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.ಈ ಸಂದರ್ಭ ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಮತ್ತಿತರರು ಇದ್ದರು.